ಜನ ಮನದ ನಾಡಿ ಮಿಡಿತ

Advertisement

ಶೇಖ್ ಅಬುಬಕರ್ ಅಹ್ಮದ್ ಅವರ ಮಧ್ಯಸ್ಥಿಕೆಯ ಮೂಲಕ ಸಭೆ; ನಿಮಿಷ ಗಲ್ಲು ಶಿಕ್ಷೆ ಮುಂದಕ್ಕೆ

ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ಭಾರತೀಯ ನರ್ಸ್ ನಿಮಿಷಾ ಪ್ರಿಯಾ ಅವರ ಮರಣದಂಡನೆಯನ್ನು ಯೆಮೆನ್ ಅಧಿಕಾರಿಗಳು ಮುಂದೂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮರಣದಂಡನೆಯನ್ನು ಬುಧವಾರ ನಿಗದಿಪಡಿಸಲಾಗಿತ್ತು. ಕೇರಳದ ಪಾಲಕ್ಕಾಡ್ ಜಿಲ್ಲೆಯ ಕೊಲ್ಲೆಂಗೋಡ್ ಮೂಲದ ಪ್ರಿಯಾ, ಜುಲೈ 2017 ರಲ್ಲಿ ಯೆಮೆನ್ ಪ್ರಜೆಯೊಬ್ಬರ ಕೊಲೆ ಪ್ರಕರಣದಲ್ಲಿ ತಪ್ಪಿತಸ್ಥರೆಂದು ಸಾಬೀತಾಗಿ ಈ ಶಿಕ್ಷೆಗೆ ಗುರಿಯಾಗಿದ್ರು. ಯೆಮನ್‌ನ ಸ್ಥಳೀಯ ಅಧಿಕಾರಿಗಳು ಜುಲೈ 16 ರಂದು ನಿಗದಿಯಾಗಿದ್ದ ಮರಣದಂಡನೆಯನ್ನು ಮುಂದೂಡಿದ್ದಾರೆ ಎಂದು ತಿಳಿದುಬಂದಿದೆ.

38 ವರ್ಷದ ನರ್ಸ್ ಪ್ರಸ್ತುತ ಇರಾನ್ ಬೆಂಬಲಿತ ಹೌತಿಗಳ ನಿಯಂತ್ರಣದಲ್ಲಿರುವ ಯೆಮೆನ್ ರಾಜಧಾನಿ ಸನಾದಲ್ಲಿರುವ ಜೈಲಿನಲ್ಲಿದ್ದಾರೆ. ಸೂಫಿ ನಾಯಕ ಶೇಖ್ ಹಬೀಬ್ ಉಮರ್ ಬಿನ್ ಹಫೀಜ್ ಅವರ ಪ್ರತಿನಿಧಿಗಳು ಮತ್ತು ಮಹ್ದಿ ಅವರ ಕುಟುಂಬದ ನಡುವೆ ಧಮರ್‌ನಲ್ಲಿ ಮಾತುಕತೆ ನಡೆಯುತ್ತಿರುವುದರಿಂದ ಮರಣದಂಡನೆ ವಿಳಂಬವಾಗಿದೆ. ಪ್ರಮುಖ ಭಾರತೀಯ ಸುನ್ನಿ ನಾಯಕ ಕಾಂತಪುರಂ ಎಪಿ ಅಬೂಬಕರ್ ಮುಸ್ಲಿಯಾರ್, ಶೇಖ್ ಅಬುಬಕರ್ ಅಹ್ಮದ್ ಅವರ ಮಧ್ಯಸ್ಥಿಕೆಯ ಮೂಲಕ ಸಭೆಯನ್ನು ಏರ್ಪಡಿಸಲಾಗಿತ್ತು. 2020ರಲ್ಲಿ, ಯೆಮೆನ್ ನ್ಯಾಯಾಲಯವು ಅವರಿಗೆ ಮರಣದಂಡನೆ ವಿಧಿಸಿತ್ತು ಮತ್ತು ದೇಶದ ಸುಪ್ರೀಂ ನ್ಯಾಯಾಂಗ ಮಂಡಳಿಯು ನವೆಂಬರ್ 2023ರಲ್ಲಿ ಅವರ ಮೇಲ್ಮನವಿಯನ್ನು ವಜಾಗೊಳಿಸಿತು.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!