ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ಭಾರತೀಯ ನರ್ಸ್ ನಿಮಿಷಾ ಪ್ರಿಯಾ ಅವರ ಮರಣದಂಡನೆಯನ್ನು ಯೆಮೆನ್ ಅಧಿಕಾರಿಗಳು ಮುಂದೂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮರಣದಂಡನೆಯನ್ನು ಬುಧವಾರ ನಿಗದಿಪಡಿಸಲಾಗಿತ್ತು. ಕೇರಳದ ಪಾಲಕ್ಕಾಡ್ ಜಿಲ್ಲೆಯ ಕೊಲ್ಲೆಂಗೋಡ್ ಮೂಲದ ಪ್ರಿಯಾ, ಜುಲೈ 2017 ರಲ್ಲಿ ಯೆಮೆನ್ ಪ್ರಜೆಯೊಬ್ಬರ ಕೊಲೆ ಪ್ರಕರಣದಲ್ಲಿ ತಪ್ಪಿತಸ್ಥರೆಂದು ಸಾಬೀತಾಗಿ ಈ ಶಿಕ್ಷೆಗೆ ಗುರಿಯಾಗಿದ್ರು. ಯೆಮನ್ನ ಸ್ಥಳೀಯ ಅಧಿಕಾರಿಗಳು ಜುಲೈ 16 ರಂದು ನಿಗದಿಯಾಗಿದ್ದ ಮರಣದಂಡನೆಯನ್ನು ಮುಂದೂಡಿದ್ದಾರೆ ಎಂದು ತಿಳಿದುಬಂದಿದೆ.
38 ವರ್ಷದ ನರ್ಸ್ ಪ್ರಸ್ತುತ ಇರಾನ್ ಬೆಂಬಲಿತ ಹೌತಿಗಳ ನಿಯಂತ್ರಣದಲ್ಲಿರುವ ಯೆಮೆನ್ ರಾಜಧಾನಿ ಸನಾದಲ್ಲಿರುವ ಜೈಲಿನಲ್ಲಿದ್ದಾರೆ. ಸೂಫಿ ನಾಯಕ ಶೇಖ್ ಹಬೀಬ್ ಉಮರ್ ಬಿನ್ ಹಫೀಜ್ ಅವರ ಪ್ರತಿನಿಧಿಗಳು ಮತ್ತು ಮಹ್ದಿ ಅವರ ಕುಟುಂಬದ ನಡುವೆ ಧಮರ್ನಲ್ಲಿ ಮಾತುಕತೆ ನಡೆಯುತ್ತಿರುವುದರಿಂದ ಮರಣದಂಡನೆ ವಿಳಂಬವಾಗಿದೆ. ಪ್ರಮುಖ ಭಾರತೀಯ ಸುನ್ನಿ ನಾಯಕ ಕಾಂತಪುರಂ ಎಪಿ ಅಬೂಬಕರ್ ಮುಸ್ಲಿಯಾರ್, ಶೇಖ್ ಅಬುಬಕರ್ ಅಹ್ಮದ್ ಅವರ ಮಧ್ಯಸ್ಥಿಕೆಯ ಮೂಲಕ ಸಭೆಯನ್ನು ಏರ್ಪಡಿಸಲಾಗಿತ್ತು. 2020ರಲ್ಲಿ, ಯೆಮೆನ್ ನ್ಯಾಯಾಲಯವು ಅವರಿಗೆ ಮರಣದಂಡನೆ ವಿಧಿಸಿತ್ತು ಮತ್ತು ದೇಶದ ಸುಪ್ರೀಂ ನ್ಯಾಯಾಂಗ ಮಂಡಳಿಯು ನವೆಂಬರ್ 2023ರಲ್ಲಿ ಅವರ ಮೇಲ್ಮನವಿಯನ್ನು ವಜಾಗೊಳಿಸಿತು.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…