ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಕರ್ಣಾಟಕ ಬ್ಯಾಂಕ್ ಕೇಂದ್ರ ಕಚೇರಿ ಸ್ಥಳಾಂತರ ವಿಚಾರ..??!

ಖಾಸಗಿ ರಂಗದ ಮುಂಚೂಣಿಯ ಶತಮಾನ ಕಂಡ ಕರ್ಣಾಟಕ ಬ್ಯಾಂಕ್ ಲಿಮಿಟೆಡ್‌ನ ಪ್ರಧಾನ ಶಾಖೆಯನ್ನು ಮಂಗಳೂರಿನಿಂದ ಬೆಂಗಳೂರಿಗೆ ಸ್ಥಳಾಂತರಿಸುವ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಬ್ಯಾಂಕಿನ ನೂತನ ವ್ಯವಸ್ಥಾಪಕ ನಿರ್ದೇಶಕ ಹಾಗೂ ಸಿಇಒ ರಾಘವೇಂದ್ರ ಎಸ್. ಭಟ್ ಸ್ಪಷ್ಟಪಡಿಸಿದ್ದಾರೆ. ಬ್ಯಾಂಕಿನ ಮಂಗಳೂರಿನ ಪ್ರಧಾನ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ಣಾಟಕ ಬ್ಯಾಂಕ್ ಸ್ಥಳಾಂತರ ಆಗುವುದಿಲ್ಲ ಎಂದು ಖಡಾಖಂಡಿತ ಹೇಳುವ ಮೂಲಕ ಈ ಕುರಿತ ಗೊಂದಲ, ಊಹಾಪೋಹಗಳಿಗೆ ತೆರೆ ಎಳೆದರು. ಮಾತ್ರವಲ್ಲ ಬ್ಯಾಂಕಿನಲ್ಲಿ ಯಾವುದೇ ಅವ್ಯವಹಾರ ನಡೆದಿಲ್ಲ, ಬ್ಯಾಂಕ್ ಸುದೃಢವಾಗಿದೆ. ಅಲ್ಲದೆ ಬ್ಯಾಂಕ್ ವಿಲೀನ ಕುರಿತ ಸುದ್ದಿಗಳೂ ಸತ್ಯಕ್ಕೆ ದೂರವಾಗಿದೆ ಎಂದು ಹೇಳಿದರು. ಹಿಂದಿನ ಸಿಇಒ ಮತ್ತು ಎಂಡಿ ಅವರ ಅಧಿಕಾರದ ಅವಧಿಯಲ್ಲಿ ಅವರ ಅನುಕೂಲ ಕಾರಣಕ್ಕೆ ಬೆಂಗಳೂರು ಕೇಂದ್ರೀಕರಿಸಿ ಕಾರ್ಯನಿರ್ವಹಿಸುತ್ತಿದ್ದಿರಬಹುದು. ಆದರೆ ಬ್ಯಾಂಕಿನ ಪ್ರಧಾನ ಕಚೇರಿ ಇಲ್ಲಿಯೇ ಇದೆ, ಇಲ್ಲಿಯೇ ಇರುತ್ತದೆ. ಕರಾವಳಿಯಲ್ಲಿ ಸ್ಥಾಪನೆಯಾದ ಬ್ಯಾಂಕ್‌ನ ಪ್ರಧಾನ ಕಚೇರಿ ಇಲ್ಲಿಯೇ ಇರಲಿದೆ ಎಂದು ಪುನರುಚ್ಚರಿಸಿದರು.

ಬ್ಯಾಂಕ್ ವಿಲೀನ ಇಲ್ಲ:

ಕರ್ಣಾಟಕ ಬ್ಯಾಂಕ್ ಕೂಡ ಇತರೆ ಖಾಸಗಿ ಬ್ಯಾಂಕ್‌ಗಳ ಜೊತೆ ವಿಲೀನಗೊಳ್ಳುತ್ತದೆ ಎಂಬ ಸುದ್ದಿಗಳೂ ನಿಜವಲ್ಲ. ಈ ಬ್ಯಾಂಕಿಗೆ ಶೇ. 61ರಷ್ಟು ಸಾರ್ವಜನಿಕರ ಪ್ರಾತಿನಿಧ್ಯ ಇದೆ. ಹಾಗಾಗಿ ಇದನ್ನು ವಿಲೀನಗೊಳಿಸುವ ಯಾವುದೇ ಪ್ರಸ್ತಾಪ ಅಥವಾ ಪ್ರಯತ್ನಗಳು ಇಲ್ಲ ಎಂದು ಅವರು ನಿರಾಕರಿಸಿದರು. ಈ ಬ್ಯಾಂಕಿನ ಮೂಲ ಬಂಡವಾಳ ಸದೃಢವಾಗಿರುವುದರಿಂದ ವಹಿವಾಟು, ಲಾಭಾಂಶಗಳಿಗೇನೂ ತೊಂದರೆ ಆಗಿಲ್ಲ. ಗ್ರಾಹಕರು ಗಾಬರಿಪಡುವ ಅಗತ್ಯ ಇಲ್ಲ ಎಂದು ಅವರು ಹೇಳಿದರು.

ಆಡಳಿತ ಮಂಡಳಿ ಸೂಕ್ತ ತೀರ್ಮಾನ:

ಬ್ಯಾಂಕ್‌ನಲ್ಲಿ ಎಂಡಿ, ಸಿಇಒ ಮುಂತಾದ ಆಡಳಿತಾತ್ಮಕ ಬದಲಾವಣೆಗಳು ಸಾಮಾನ್ಯ. ಅದರಂತೆ ಎಂಡಿ, ಸಿಇಒ ನೇಮಕ ನಡೆದಿದೆ. ಸೂಕ್ತ ಕಾಲಕ್ಕೆ ಆಡಳಿತ ಮಂಡಳಿ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತದೆ. ಹೊರಗಿನವರು ಅಥವಾ ಒಳಗಿನವರ ನೇಮಕ ಎಂಬ ತಾರತಮ್ಯ ಇಲ್ಲ, 1991ರಲ್ಲಿ ಯು.ಎನ್.ಭಟ್ ಎಂಬವರು ಕೇಂದ್ರ ಆಡಿಟ್ ವಿಭಾಗದಲ್ಲಿದ್ದವರು ಬ್ಯಾಂಕಿನ ಎಂಡಿ ಆಗಿದ್ದರು. ಬಳಿಕ ಹೆಚ್ಚಿನ ಸಂದರ್ಭ ಬ್ಯಾಂಕಿನಲ್ಲಿ ಇದ್ದವರನ್ನೇ ಎಂಡಿ ಆಗಿ ನೇಮಕ ಮಾಡಲಾಗಿತ್ತು. ಇದೆಲ್ಲವೂ ಆಡಳಿತ ಮಂಡಳಿ ತೀರ್ಮಾನ ಎಂದರು. ಕರ್ಣಾಟಕ ಬ್ಯಾಂಕ್ 102ನೇ ವರ್ಷಕ್ಕೆ ಕಾಲಿಡುತ್ತಿದೆ. ಪ್ರಸಕ್ತ ದೇಶಾದ್ಯಂತ 950 ಶಾಖೆಗಳನ್ನು ಹೊಂದಿದ್ದು, 1.82 ಲಕ್ಷ ಕೋಟಿ ರು. ವಹಿವಾಟು ನಡೆಸುತ್ತಿದೆ. ಇದನ್ನು 2 ಲಕ್ಷ ಕೋಟಿ ರು. ವರೆಗೆ ವಹಿವಾಟು ತಲುಪಿಸುವ ಗುರಿ ಹೊಂದಲಾಗಿದೆ. ಇದಲ್ಲದೆ ಕೃಷಿ, ಗೃಹ ಮತ್ತಿತರ ವಲಯಗಳಿಗೂ ಆದ್ಯತೆ ನೀಡುವ ಉದ್ದೇಶ ಹೊಂದಲಾಗಿದೆ ಎಂದರು.

ಕ್ಲರ್ಕ್ನಿಂದ ಎಂಡಿ, ಸಿಇಒ ವರೆಗೆ…

ಕರ್ಣಾಟಕ ಬ್ಯಾಂಕ್ ಎಂಡಿ ಮತ್ತು ಸಿಇಒ ಆಗಿ ನಾನು ಬುಧವಾರ ಅಧಿಕಾರ ವಹಿಸಿಕೊಂಡಿದ್ದೇನೆ. 1981ರಲ್ಲಿ ಕ್ಲರ್ಕ್ ಆಗಿ ಈ ಬ್ಯಾಂಕ್‌ಗೆ ಸೇರ್ಪಡೆಯಾಗಿದ್ದು, 2019ರಲ್ಲಿ ಬ್ಯಾಂಕಿನ ಸೇವೆಯಿಂದ ನಿವೃತ್ತನಾಗಿದ್ದೇನೆ. ಮಂಗಳೂರು, ಮುಂಬೈ ಮತ್ತು ದೆಹಲಿಗಳಲ್ಲಿ ಬ್ಯಾಂಕಿನ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದೇನೆ. ಕೆಲವು ಕಾಲ ಬಿಡುವಿನ ಬಳಿಕ ಈಗ ಬ್ಯಾಂಕಿನ ಆಡಳಿತದ ಜವಾಬ್ದಾರಿ ನನ್ನ ಮೇಲೆ ಇದೆ. ಇದನ್ನು ಅಚ್ಚುಕಟ್ಟಾಗಿ ನಿಭಾಯಿಸುವ ಹೊಣೆಗಾರಿಕೆ, ವಿಶ್ವಾಸ ಹೊಂದಿದ್ದೇನೆ. 1924ರಲ್ಲಿ ಸ್ಥಾಪನೆಯಾದ ಈ ಬ್ಯಾಂಕ್ ನಿರಂತರವಾಗಿ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ. ಬ್ಯಾಂಕಿನ ಅಸ್ಮಿತೆಗೆ ತೊಂದರೆಯಾಗದಂತೆ ಕಾರ್ಯನಿರ್ವಹಿಸಲಾಗುವುದು ಎಂದು ನೂತನ ಎಂಡಿ, ಸಿಇಒ ರಾಘವೇಂದ್ರ ಎಸ್. ಭಟ್ ಹೇಳಿದರು.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!