ಕರಾವಳಿಯಾದಂತ್ಯ ನಿನ್ನೆ ಒಂದೇ ದಿನ ಜೋರಾಗಿ ಸುರಿದ ಮಳೆಯಿಂದಾಗಿ ಸಾಕಷ್ಟು ನಷ್ಟ ಉಂಟಾಗಿದ್ದು, ಕರಾವಳಿ ಭಾಗದಲ್ಲಿ ಸಾಕಷ್ಟು ಅವಾಂತರವನ್ನೇ ಸೃಷ್ಟಿಸಿದೆ.
ಸರ್ಕ್ಯೂಟ್ ಹೌಸ್ನಿಂದ ಬಿಜೈ ಬರುವ ರಸ್ತೆಯ ಮೇಲಿನ ಗುಡ್ಡ ಕುಸಿತದ ಪರಿಣಾಮ ದ್ವಿಮುಖ ಸಂಚಾರ ಅಸಾಧ್ಯವಾಗಿದೆ. ಇದೀಗ ಆ ಮಾರ್ಗವಾಗಿ ಏಕಮುಖ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಗುಡ್ಡೆ ಜರಿದ ರಸ್ತೆ ಸಂಪೂರ್ಣವಾಗಿ ಬಂದ್ ಆಗಿದೆ. ಏಕ ಮುಖ ಸಂಚಾರ ವಾಹನಗಳು ನಡೆಸುವ ಕಾರಣ ಸರದಿ ಉದ್ದಕ್ಕೂ ವಾಹನಗಳ ದಟ್ಟಣೆ ಉಂಟಾಗಿದ್ದು, ಸವಾರರು ಕಿರಿಕಿರಿ ಅನುಭವಿಸ್ತಾ ಇದ್ದಾರೆ.
ರಸ್ತೆಗೆ ದೊಡ್ಡದಾದ ಶಿಲೆ ಕಲ್ಲು ಉರುಳಿದ ಪರಿಣಾಮ ಇದರ ತೆರವು ಕಾರ್ಯಕ್ಕೆ ವಿಳಂಬವಾಗಬಹುದು. ಇನ್ನೂ, ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನಂ 75 ರ ಕಡಬ ತಾಲೂಕು ಕೌಕ್ರಾಡಿ ಗ್ರಾಮದ ಮಣ್ಣಗುಂಡಿ ಎಂಬಲ್ಲಿ, ಗುಡ್ಡ ಕುಸಿದಿದ್ದು ರಾಷ್ಟ್ರೀಯ ಹೆದ್ದಾರಿ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಈಗಾಗಲೇ ಮಣ್ಣು ತೆಗೆಯುವ ಕಾರ್ಯ ಆರಂಭವಾಗಿದೆ.
ಆದರೆ ಇನ್ನಷ್ಟು ಮಣ್ಣು ಕುಸಿಯುತ್ತಿದ್ದು, ಮಣ್ಣು ತೆಗೆಯುವ ಕಾರ್ಯ ಮಧ್ಯಾಹ್ನದವರೆಗೆ ಮುಂದುವರೆಯುವ ಸಾಧ್ಯತೆ ಇದೆ. ಈ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳಿಗೆ ಪರ್ಯಾಯ ಮಾರ್ಗದ ವ್ಯವಸ್ಥೆಯನ್ನು ಮಾಡಲಾಗಿದೆ. ಇನ್ನು ಭೀಕರವಾಗಿ ಸುರಿದ ವರ್ಷಧಾರೆಯಿಂದ ಮೇರಿಹಿಲ್ ಬಳಿ ತಡೆಗೋಡೆ ಕುಸಿದು ಬಿದ್ದ ಪರಿಣಾಮ ಪಕ್ಕದಲ್ಲೇ ನಿಲ್ಲಿಸಿದ ಒಂದು ಕಾರು ಮತ್ತು ಹಲವಾರು ಬೈಕುಗಳು ಜಖಂಗೊಂಡಿದೆ. ಗ್ಯಾರೇಜ್ ರಿಪೇರಿಗೆಂದು ಬಂದಿರುವ ಬೈಕ್ಗಳಿಗೆ ಹಾನಿ ಆಗಿದೆ.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…