ಎರಡು ಸಾರಿಗೆ ಬಸ್ಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ, ಎರಡು ಬಸ್ಗಳಲ್ಲಿದ್ದ ಹಲವು ಪ್ರಯಾಣಿಕರು ಗಾಯಗೊಂಡ ಘಟನೆ ಸಕಲೇಶಪುರ ತಾಲ್ಲೂಕಿನ, ವೆಂಕಟಿಹಳ್ಳಿ ಗ್ರಾಮದ ಸಮೀಪ ನಡೆದಿದೆ.

ಮೂಡಿಗೆರೆಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿಗೆ ಸಕಲೇಶಪುರಕ್ಕೆ ಬರುತ್ತಿದ್ದ ಮತ್ತೊಂದು ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದಿದೆ. ಗಾಯಾಳುಗಳಿಗೆ ಸಕಲೇಶಪುರದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ.



