ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಗಂಗೊಳ್ಳಿ ದೋಣಿ ದುರಂತ; ಮೂರನೇ ಮೀನುಗಾರನ ಮೃತದೇಹ ಪತ್ತೆ

ಗಂಗೊಳ್ಳಿ ದೋಣಿ ದುರಂತದಲ್ಲಿ ನಾಪತ್ತೆಯಾಗಿದ್ದ ಮೀನುಗಾರ ಸುರೇಶ್ ಖಾರ್ವಿ ಅವರ ಮೃತದೇಹ ಗುರುವಾರ ಬೆಳಿಗ್ಗೆ ಕೋಡಿ ಸೀವಾಕ್ ಸಮೀಪ ಸಮುದ್ರ ತೀರದಲ್ಲಿ ಪತ್ತೆಯಾಗಿದೆ.

ಇದರೊಂದಿಗೆ ಮೀನುಗಾರಿಕೆಗೆ ತೆರಳಿ ನಾಪತ್ತೆಯಾಗಿದ್ದ ಮೂವರು ಮೀನುಗಾರರ ಶವ ಪತ್ತೆಯಾಗಿದೆ. ಗಂಗೊಳ್ಳಿ ಬಂದರಿನಿಂದ ಜು.15ರಂದು ಬೆಳಗ್ಗೆ ಮೀನುಗಾರಿಕೆಗೆ ತೆರಳಿದ್ದ ಶ್ರೀ ಹಕ್ರೇಮಠ ಯಕ್ಷೇಶ್ವರಿ ಎಂಬ ಗಿಲ್‌ನೆಟ್ ನಾಡ ದೋಣಿ ಸಮುದ್ರದ ಅಲೆಯ ರಭಸಕ್ಕೆ ಸಿಲುಕಿ ಮಗುಚಿದ್ದು, ನಾಲ್ವರ ಪೈಕಿ ಓರ್ವ ಮೀನುಗಾರ ಈಜಿ ದಡ ಸೇರಿದ್ರು. ಜಗನ್ನಾಥ ಖಾರ್ವಿ, ಲೋಹಿತ್ ಖಾರ್ವಿ ಮತ್ತು ಸುರೇಶ್ ಖಾರ್ವಿ ನಾಪತ್ತೆಯಾಗಿದ್ದು ಅವರಿಗಾಗಿ ತೀವ್ರ ಶೋಧ ನಡೆಸಲಾಗಿತ್ತು. ಬುಧವಾರ ಬೆಳಿಗ್ಗೆ ಕೋಡಿ ಲೈಟ್ ಹೌಸ್ ಸಮೀಪದಲ್ಲಿ ಲೋಹಿತ್ ಖಾರ್ವಿ ಮೃತದೇಹ, ಸಂಜೆ ವೇಳೆಗೆ ಹಳೆ ಅಳಿವೆ ಎಂಬಲ್ಲಿ ಜಗನ್ನಾಥ್ ಖಾರ್ವಿ ಮೃತದೇಹ ಪತ್ತೆಯಾಗಿತ್ತು. ರಾತ್ರಿಯವರೆಗೂ ಸುರೇಶ್ ಖಾರ್ವಿ ಅವರ ಸುಳಿವು ಲಭ್ಯವಾಗಿಲ್ಲದ ಕಾರಣ ಶೋಧ ಕಾರ್ಯ ಮುಂದುವರಿಸಿದ್ದು ಇಂದು ಗುರುವಾರ ಬೆಳಿಗ್ಗೆ ಮೃತದೇಹ ಪತ್ತೆಯಾಗಿದೆ.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!