ಗಂಗೊಳ್ಳಿ ದೋಣಿ ದುರಂತದಲ್ಲಿ ನಾಪತ್ತೆಯಾಗಿದ್ದ ಮೀನುಗಾರ ಸುರೇಶ್ ಖಾರ್ವಿ ಅವರ ಮೃತದೇಹ ಗುರುವಾರ ಬೆಳಿಗ್ಗೆ ಕೋಡಿ ಸೀವಾಕ್ ಸಮೀಪ ಸಮುದ್ರ ತೀರದಲ್ಲಿ ಪತ್ತೆಯಾಗಿದೆ.
ಇದರೊಂದಿಗೆ ಮೀನುಗಾರಿಕೆಗೆ ತೆರಳಿ ನಾಪತ್ತೆಯಾಗಿದ್ದ ಮೂವರು ಮೀನುಗಾರರ ಶವ ಪತ್ತೆಯಾಗಿದೆ. ಗಂಗೊಳ್ಳಿ ಬಂದರಿನಿಂದ ಜು.15ರಂದು ಬೆಳಗ್ಗೆ ಮೀನುಗಾರಿಕೆಗೆ ತೆರಳಿದ್ದ ಶ್ರೀ ಹಕ್ರೇಮಠ ಯಕ್ಷೇಶ್ವರಿ ಎಂಬ ಗಿಲ್ನೆಟ್ ನಾಡ ದೋಣಿ ಸಮುದ್ರದ ಅಲೆಯ ರಭಸಕ್ಕೆ ಸಿಲುಕಿ ಮಗುಚಿದ್ದು, ನಾಲ್ವರ ಪೈಕಿ ಓರ್ವ ಮೀನುಗಾರ ಈಜಿ ದಡ ಸೇರಿದ್ರು. ಜಗನ್ನಾಥ ಖಾರ್ವಿ, ಲೋಹಿತ್ ಖಾರ್ವಿ ಮತ್ತು ಸುರೇಶ್ ಖಾರ್ವಿ ನಾಪತ್ತೆಯಾಗಿದ್ದು ಅವರಿಗಾಗಿ ತೀವ್ರ ಶೋಧ ನಡೆಸಲಾಗಿತ್ತು. ಬುಧವಾರ ಬೆಳಿಗ್ಗೆ ಕೋಡಿ ಲೈಟ್ ಹೌಸ್ ಸಮೀಪದಲ್ಲಿ ಲೋಹಿತ್ ಖಾರ್ವಿ ಮೃತದೇಹ, ಸಂಜೆ ವೇಳೆಗೆ ಹಳೆ ಅಳಿವೆ ಎಂಬಲ್ಲಿ ಜಗನ್ನಾಥ್ ಖಾರ್ವಿ ಮೃತದೇಹ ಪತ್ತೆಯಾಗಿತ್ತು. ರಾತ್ರಿಯವರೆಗೂ ಸುರೇಶ್ ಖಾರ್ವಿ ಅವರ ಸುಳಿವು ಲಭ್ಯವಾಗಿಲ್ಲದ ಕಾರಣ ಶೋಧ ಕಾರ್ಯ ಮುಂದುವರಿಸಿದ್ದು ಇಂದು ಗುರುವಾರ ಬೆಳಿಗ್ಗೆ ಮೃತದೇಹ ಪತ್ತೆಯಾಗಿದೆ.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…