ಮಂಗಳೂರು; ಶ್ರೀಮAತರು ಮತ್ತು ಉದ್ಯಮಿಗಳನ್ನು ಗುರಿಯಾಗಿರಿಸಿಕೊಂಡು ದೇಶಾದ್ಯಂತ ವಂಚನಾ ಜಾಲವನ್ನು ಹೊಂದಿದ್ದ ಮಂಗಳೂರಿನ ವಂಚಕನನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ. ಹತ್ತು ವರ್ಷಗಳಲ್ಲಿ ಈ ಆರೋಪಿ ರೋಹನ್ ಸಲ್ಡಾನಾ ಇನ್ನೂರು ಕೋಟಿ ರೂಪಾಯಿಗೂ ಅಧಿಕ ಮೊತ್ತದ ವಂಚನೆ ಎಸಗಿದ್ದಾನೆ ಎನ್ನಲಾಗುತ್ತಿದೆ.
ಮಂಗಳೂರಿನ ಸೆನ್ ಠಾಣೆಯಲ್ಲಿ ಇತ್ತೀಚೆಗೆ ಎರಡು ವಂಚನಾ ಪ್ರಕರಣಗಳು ದಾಖಲಾಗಿದ್ದವು. ಇದಕ್ಕೆ ಸಂಬAಧಿಸಿದAತೆ ತನಿಖೆ ನಡೆಸುತ್ತಿದ್ದ ಪೊಲೀಸರು ಗುರುವಾರ ರಾತ್ರಿ ಮಹತ್ವದ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಜಪ್ಪಿನ ಮೊಗರು ಬಳಿಯ ತಂದೊಳಿಗೆ ಎಂಬಲ್ಲಿರುವ ತನ್ನ ಐಶಾರಾಮಿ ಮನೆಯಲ್ಲಿ ಇದ್ದಾಗಲೇ ಆರೋಪಿಯನ್ನು ಬಂಧಿಸಲಾಗಿದೆ.ಬAಧಿತ ದುಬಾಯ್ಸ್ ರೋಹನ್ ಸಲ್ಡಾನಾ ದೇಶದ ಪ್ರಮುಖ ನಗರಗಳಲ್ಲಿ ಏಜೆಂಟರನ್ನು ನೇಮಿಸಿಕೊಂಡು ವ್ಯಾಪಾರೋದ್ಯಮಿಗಳಿಗೆ ಕಡಿಮೆ ಬಡ್ಡಿಯಲ್ಲಿ ಸಾಲ ಕೊಡುವ ಆಮಿಷ ಒಡ್ಡುತ್ತಿದ್ದ. ಸುಮಾರು ನೂರು ಕೋಟಿ ಸಾಲವನ್ನು ಮೂರರಿಂದ ನಾಲ್ಕು ಶೇಕಡಾ ಬಡ್ಡಿಗೆ ಕೊಡುವ ಭರವಸೆ ಕೊಡುತ್ತಿದ್ದ. ಜಪ್ಪಿನ ಮೊಗರುನಲ್ಲಿರುವ ವೈಭವೋಪೇತ ಬಂಗಲೆಯಲ್ಲಿ ಆದರಾತಿಥ್ಯ ಕೊಡುತ್ತಿದ್ದ. ಇದಕ್ಕಾಗಿ ಮನೆಯಲ್ಲೇ ಬಾರ್ ಮಾದರಿಯ ಕೋಣೆಯನ್ನೂ ರೂಪಿಸಿದ್ದ. ತಾನೊಬ್ಬ ಆಗರ್ಭ ಶ್ರೀಮಂತ ಎಂಬ ರೀತಿಯಲ್ಲಿ ಫೋಸು ಕೊಡುತ್ತಿದ್ದ.ಸಾಲ ಕೇಳಲು ಬರುವ ಉದ್ಯಮಿಗಳಿಂದ ಎಗ್ರಿಮೆಂಟಿಗೆAದು ಮುಂಗಡ ಹಣ ಕೇಳುತ್ತಿದ್ದ. ಅದು ಕೈಗೆ ಬಂದೊಡನೆ ಮೊಬೈಲ್ ಸ್ವಿಚ್ ಆಫ್ ಮಾಡಿ ನಾಪತ್ತೆಯಾಗುತ್ತಿದ್ದ. ಉದ್ಯಮಿಗಳು ನಗದಾಗಿ ಹಣ ಕೊಡುತ್ತಿದ್ದುದರಿಂದ ಪೊಲೀಸರಿಗೆ ದೂರು ನೀಡಲು ಹೋಗುತ್ತಿರಲಿಲ್ಲ. ಇದು ಆತನಿಗೆ ವರದಾನವಾಗಿತ್ತು.ಗುರುವಾರ ರಾತ್ರಿ ಪೊಲೀಸರು ಈತನ ಮನೆಗೆ ದಾಳಿ ಮಾಡಿದಾಗ ಅಲ್ಲಿಯ ವೈಭವ ನೋಡಿಯೇ ದಂಗಾದರು. ಆವರಣ ಪ್ರವೇಶಿಸುವ ಗೇಟ್ ಕೂಡ ರಿಮೋಟ್ ಕಂಟ್ರೋಲ್ ವ್ಯವಸ್ಥೆಯನ್ನು ಹೊಂದಿತ್ತು. ಇದರಿಂದಾಗಿ ಪೊಲೀಸರು ಗೇಟ್ ಹಾರಿಯೇ ಒಳಗೆ ನುಗ್ಗಿದರು. ಮನೆಯೊಳಗಡೆಯೇ ಅಡಗುದಾಣದಂತಹ ಕೋಣೆಗಳನ್ನು ಮಾಡಿಕೊಂಡಿದ್ದರಿAದ ಈತ ಮನೆಯಲ್ಲಿದ್ದರೂ ಯಾರ ಕೈಗೂ ಸಿಗುತ್ತಿರಲಿಲ್ಲ. ನಗರ ಪೊಲೀಸ್ ಕಮಿಶನರ್ ಸುಧೀರ್ ಕುಮಾರ್ ರೆಡ್ಡಿ ತಾವೇ ಕಾರ್ಯಾಚರಣೆ ನಿರ್ದೇಶಿಸಿದ್ದರಿಂದ ಕೋಟಿ ಕೋಟಿ ವಂಚಿಸಿದ ಈ ಆರೋಪಿಯ ಬಂಧನವಾಗಿದೆ ಎಂಬ ಮಾತು ಕೇಳಿ ಬರುತ್ತಿದೆ
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…