ಮಂಗಳೂರು; ಶ್ರೀಮAತರು ಮತ್ತು ಉದ್ಯಮಿಗಳನ್ನು ಗುರಿಯಾಗಿರಿಸಿಕೊಂಡು ದೇಶಾದ್ಯಂತ ವಂಚನಾ ಜಾಲವನ್ನು ಹೊಂದಿದ್ದ ಮಂಗಳೂರಿನ ವಂಚಕನನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ. ಹತ್ತು ವರ್ಷಗಳಲ್ಲಿ ಈ ಆರೋಪಿ ರೋಹನ್ ಸಲ್ಡಾನಾ ಇನ್ನೂರು ಕೋಟಿ ರೂಪಾಯಿಗೂ ಅಧಿಕ ಮೊತ್ತದ ವಂಚನೆ ಎಸಗಿದ್ದಾನೆ ಎನ್ನಲಾಗುತ್ತಿದೆ.
ಮಂಗಳೂರಿನ ಸೆನ್ ಠಾಣೆಯಲ್ಲಿ ಇತ್ತೀಚೆಗೆ ಎರಡು ವಂಚನಾ ಪ್ರಕರಣಗಳು ದಾಖಲಾಗಿದ್ದವು. ಇದಕ್ಕೆ ಸಂಬAಧಿಸಿದAತೆ ತನಿಖೆ ನಡೆಸುತ್ತಿದ್ದ ಪೊಲೀಸರು ಗುರುವಾರ ರಾತ್ರಿ ಮಹತ್ವದ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಜಪ್ಪಿನ ಮೊಗರು ಬಳಿಯ ತಂದೊಳಿಗೆ ಎಂಬಲ್ಲಿರುವ ತನ್ನ ಐಶಾರಾಮಿ ಮನೆಯಲ್ಲಿ ಇದ್ದಾಗಲೇ ಆರೋಪಿಯನ್ನು ಬಂಧಿಸಲಾಗಿದೆ.ಬAಧಿತ ದುಬಾಯ್ಸ್ ರೋಹನ್ ಸಲ್ಡಾನಾ ದೇಶದ ಪ್ರಮುಖ ನಗರಗಳಲ್ಲಿ ಏಜೆಂಟರನ್ನು ನೇಮಿಸಿಕೊಂಡು ವ್ಯಾಪಾರೋದ್ಯಮಿಗಳಿಗೆ ಕಡಿಮೆ ಬಡ್ಡಿಯಲ್ಲಿ ಸಾಲ ಕೊಡುವ ಆಮಿಷ ಒಡ್ಡುತ್ತಿದ್ದ. ಸುಮಾರು ನೂರು ಕೋಟಿ ಸಾಲವನ್ನು ಮೂರರಿಂದ ನಾಲ್ಕು ಶೇಕಡಾ ಬಡ್ಡಿಗೆ ಕೊಡುವ ಭರವಸೆ ಕೊಡುತ್ತಿದ್ದ. ಜಪ್ಪಿನ ಮೊಗರುನಲ್ಲಿರುವ ವೈಭವೋಪೇತ ಬಂಗಲೆಯಲ್ಲಿ ಆದರಾತಿಥ್ಯ ಕೊಡುತ್ತಿದ್ದ. ಇದಕ್ಕಾಗಿ ಮನೆಯಲ್ಲೇ ಬಾರ್ ಮಾದರಿಯ ಕೋಣೆಯನ್ನೂ ರೂಪಿಸಿದ್ದ. ತಾನೊಬ್ಬ ಆಗರ್ಭ ಶ್ರೀಮಂತ ಎಂಬ ರೀತಿಯಲ್ಲಿ ಫೋಸು ಕೊಡುತ್ತಿದ್ದ.ಸಾಲ ಕೇಳಲು ಬರುವ ಉದ್ಯಮಿಗಳಿಂದ ಎಗ್ರಿಮೆಂಟಿಗೆAದು ಮುಂಗಡ ಹಣ ಕೇಳುತ್ತಿದ್ದ. ಅದು ಕೈಗೆ ಬಂದೊಡನೆ ಮೊಬೈಲ್ ಸ್ವಿಚ್ ಆಫ್ ಮಾಡಿ ನಾಪತ್ತೆಯಾಗುತ್ತಿದ್ದ. ಉದ್ಯಮಿಗಳು ನಗದಾಗಿ ಹಣ ಕೊಡುತ್ತಿದ್ದುದರಿಂದ ಪೊಲೀಸರಿಗೆ ದೂರು ನೀಡಲು ಹೋಗುತ್ತಿರಲಿಲ್ಲ. ಇದು ಆತನಿಗೆ ವರದಾನವಾಗಿತ್ತು.ಗುರುವಾರ ರಾತ್ರಿ ಪೊಲೀಸರು ಈತನ ಮನೆಗೆ ದಾಳಿ ಮಾಡಿದಾಗ ಅಲ್ಲಿಯ ವೈಭವ ನೋಡಿಯೇ ದಂಗಾದರು. ಆವರಣ ಪ್ರವೇಶಿಸುವ ಗೇಟ್ ಕೂಡ ರಿಮೋಟ್ ಕಂಟ್ರೋಲ್ ವ್ಯವಸ್ಥೆಯನ್ನು ಹೊಂದಿತ್ತು. ಇದರಿಂದಾಗಿ ಪೊಲೀಸರು ಗೇಟ್ ಹಾರಿಯೇ ಒಳಗೆ ನುಗ್ಗಿದರು. ಮನೆಯೊಳಗಡೆಯೇ ಅಡಗುದಾಣದಂತಹ ಕೋಣೆಗಳನ್ನು ಮಾಡಿಕೊಂಡಿದ್ದರಿAದ ಈತ ಮನೆಯಲ್ಲಿದ್ದರೂ ಯಾರ ಕೈಗೂ ಸಿಗುತ್ತಿರಲಿಲ್ಲ. ನಗರ ಪೊಲೀಸ್ ಕಮಿಶನರ್ ಸುಧೀರ್ ಕುಮಾರ್ ರೆಡ್ಡಿ ತಾವೇ ಕಾರ್ಯಾಚರಣೆ ನಿರ್ದೇಶಿಸಿದ್ದರಿಂದ ಕೋಟಿ ಕೋಟಿ ವಂಚಿಸಿದ ಈ ಆರೋಪಿಯ ಬಂಧನವಾಗಿದೆ ಎಂಬ ಮಾತು ಕೇಳಿ ಬರುತ್ತಿದೆ
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…
ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…
ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು…
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…