ಜಿಲ್ಲೆಯ ಪೋಕ್ಸೊ ನ್ಯಾಯಾಲಯದ ವಿಶೇಷ ಸರಕಾರಿ ಅಭಿಯೋಜಕ ವೈಟಿ.ರಾಘವೇಂದ್ರ ಸೇರಿದಂತೆ ಮನೋಜ್ ಹಾಗು ಸಂಜಯ್ ವಿರುದ್ದ ಮಹಿಳಾ ಠಾಣೆಯಲ್ಲಿ ದಾಖಲಾಗಿದ್ದ ಜಾತಿನಿಂದನೆ ಪ್ರಕರಣಕ್ಕೆ 15 ಗಂಟೆಯ ಅವಧಿಯಲ್ಲೇ ಕರ್ನಾಟಕ ಹೈಕೋರ್ಟ್ ಬುಧವಾರ ತಡೆಯಾಜ್ಞೆ ನೀಡಿ ಆದೇಶಿಸಿದೆ.
ಉಡುಪಿ ಮಹಿಳಾ ಠಾಣೆಯಲ್ಲಿ ಜು.15 ರಂದು ದಾಖಲಾಗಿದ್ದ ಜಾತಿನಿಂದನೆ ಪ್ರಕರಣವನ್ನು ಪ್ರಶ್ನಿಸಿ ವೈ.ಟಿ ರಾಘವೇಂದ್ರ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ತುರ್ತು ವಿಚಾರಣೆ ನಡೆಸಿದ್ದ ನ್ಯಾ. ಎಸ್.ಆರ್ ಕೃಷ್ಣಕುಮಾರ್ ಅವರಿದ್ದ ಪೀಠವು, ತಾತ್ಕಾಲಿಕ ತಡೆಯಾಜ್ಞೆ ನೀಡಿ ಆದೇಶಿಸಿದ್ದಾರೆ. ವೈ.ಟಿ ರಾಘವೇಂದ್ರ ಅವರ ಪರವಾಗಿ ಹಿರಿಯ ನ್ಯಾಯವಾದಿ ಪಿಪಿ ಹೆಗ್ಡೆ ವಾದಿಸಿದ್ದಾರೆ. ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿರುವ ಪೋಕ್ಸೊ ವಿಶೇಷ ಸರಕಾರಿ ಅಭಿಯೋಜಕ ವೈ.ಟಿ ರಾಘವೇಂದ್ರ, ನಾನು ತಲೆಮರೆಸಿಕೊಂಡಿಲ್ಲ. ನನ್ನ ಕಚೇರಿಯಲ್ಲಿಯೇ ಇದ್ದೇನೆ. ಬಿಎನ್ಎಸ್ ಕಾಯ್ದೆ ಪ್ರಕಾರ 14 ದಿನಗಳ ಪ್ರಾಥಮಿಕ ತನಿಖೆಯನ್ನು ನಡೆಸಿ, ಪ್ರಕರಣ ದಾಖಲಿಸಬೇಕಿತ್ತು. ಪೋಲಿಸರು ಒತ್ತಡಕ್ಕೆ ಮಣಿದು ಏಕಾಏಕಿ ಪ್ರಕರಣ ದಾಖಲಿಸಿರುವುದು ಸಮಂಜಸವಲ್ಲ. ಅಲ್ಲದೇ ನನ್ನ ಕಚೇರಿಯಲ್ಲಿ ಕೆಲಸವನ್ನು ಬಿಟ್ಟು 8 ವರ್ಷದ ಬಳಿಕ, ಅಂದು ಜಾತಿ ನಿಂದನೆ ಮಾಡಿದ್ದೇನೆ ಎಂದು ದೂರು ನೀಡಿದ್ದಾರೆ. ಇದೊಂದು ಸುಳ್ಳು ಪ್ರಕರಣ ಎಂದು ತಿಳಿಸಿದ್ದಾರೆ.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…