ಕರಾವಳಿ

ಕುಂದಾಪುರ: ಸರಕಾರಿ ಆಸ್ಪತ್ರೆಯಲ್ಲಿ ವಿಶೇಷಚೇತನರ ಸಮಸ್ಯೆ ಪರಿಹಾರಕ್ಕೆ ಶಾಸಕ ಮಂಜುನಾಥ ಭಂಡಾರಿ ಒತ್ತಾಯ!

ಕುಂದಾಪುರ ಸರಕಾರಿ ಉಪವಿಭಾಗ ಆಸ್ಪತ್ರೆಯಲ್ಲಿ ವಿಶೇಷಚೇತನರ ಪ್ರಮಾಣಪತ್ರ ಮಾಡಿಸಲು ಕುಂದಾಪುರ ಮತ್ತು ಬೈಂದೂರಿನ ಬೇರೆ ಬೇರೆ ಕಡೆಗಳಿಂದ ಬಂದಿದ್ದ ವಿಶೇಷಚೇತನರು ಪ್ರಮುಖ ಶಸ್ತ್ರಚಿಕಿತ್ಸಕ ವೈದ್ಯರು ಲಭ್ಯವಾಗದ ಕಾರಣ ಪ್ರಮಾಣಪತ್ರ ಸಿಗದೆ ನಿರಾಶರಾಗಿ ವಾಪಸ್ ಆದ ಘಟನೆ ಇತ್ತೀಚಿಗೆ ನಡೆದಿದ್ದು ಕೂಡಲೇ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸಕ ವೈದ್ಯರನ್ನು ನೇಮಿಸುವ ಮೂಲಕ ಸಮಸ್ಯೆ ಪರಿಹರಿಸಬೇಕು ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ಅವರಿಗೆ ವಿಧಾನ ಪರಿಷತ್ ಶಾಸಕ ಮಂಜುನಾಥ ಭಂಡಾರಿ ಅವರು ಪತ್ರಮುಖೇನ ಒತ್ತಾಯಿಸಿದ್ದಾರೆ.

ಪ್ರತೀ ಗ್ರಾಮ ಪಂಚಾಯತ್‌ಗಳಲ್ಲಿ ವಿಆರ್ ಡಬ್ಲ್ಯು, ತಾಲೂಕುಗಳಲ್ಲಿ ಎಂಆರ್‌ಡಬ್ಲ್ಯುಗಳು ಇರುತ್ತಾರೆ, ಸ್ವತ: ವಿಶೇಷ ಚೇತನರಾಗಿರುವ ಅವರು ಮನೆಗಳಿಗೆ ಭೇಟಿ ನೀಡಿ ವಿಶೇಷ ಚೇತನರನ್ನು ಗುರುತಿಸಿ ಸೌಲಭ್ಯಗಳು ದೊರೆಯುವಂತೆ ಮಾಡುತ್ತಾರೆ. ಯುಡಿಐಡಿ ಕಾರ್ಡ್ ಮಾಡಿಸಲೆಂದು ಆಸ್ಪತ್ರೆಗೆ ತಪಾಸಣೆಗೆ ನಿರ್ದಿಷ್ಟ ದಿನಗಳಂದು ಕಳಿಸುತ್ತಾರೆ. ನಿರ್ದಿಷ್ಟ ದಿನಗಳಂದು ವಿಶೇಷಚೇತನರನ್ನು ಅವರ ಪೋಷಕರು, ಪಾಲಕರು ಕರೆದುಕೊಂಡು ಬರುತ್ತಾರೆ. ಅದಕ್ಕಾಗಿ ಮನೆಯವರು ತಮ್ಮ ಉದ್ಯೋಗಗಳಿಗೆ ರಜೆ ಹಾಕಿ ಬಂದಿರುತ್ತಾರೆ. ಆದರೆ ಶಸ್ತ್ರಚಿಕಿತ್ಸಕ ವೈದ್ಯರು ಲಭ್ಯರಿಲ್ಲದ ಕಾರಣ ಇತರ ವೈದ್ಯರು ಪ್ರಮಾಣಪತ್ರ ನೀಡುವಂತಿಲ್ಲ. ಹೀಗಾಗಿ ಗ್ರಾಮಸ್ಥರು ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಕುಂದಾಪುರ ಸರಕಾರಿ ಉಪವಿಭಾಗ ಆಸ್ಪತ್ರೆಯಲ್ಲಿ ದಿನಾಂಕ 11/07/2025ರಂದು ಇ.ಎನ್.ಟಿ. ಮಾನಸಿಕ ಚಿಕಿತ್ಸೆ, ಮೂಳೆ ಚಿಕಿತ್ಸೆ, ಮಕ್ಕಳ ವೈದ್ಯರು ಇರಲಿಲ್ಲ. ಒಬ್ಬರಿಗೆ ಮೀಟಿಂಗ್, ಒಬ್ಬರಿಗೆ ಆಪರೇಷನ್ ಇತ್ತು. ಒಬ್ಬರು ವರ್ಗಾವಣೆಯಾಗಿದ್ದಾರೆ, ಒಬ್ಬರಿಗೆ ಅನಾರೋಗ್ಯ ಎಂಬ ಕಾರಣಗಳಿಂದಾಗಿ ಹೆಚ್ಚಿನ ಶಸ್ತ್ರಚಿಕಿತ್ಸಕ ವೈದ್ಯರು ಕರ್ತವ್ಯದಲ್ಲಿ ಇರಲಿಲ್ಲ. ಯುಡಿಐಡಿ ಗುರುತಿನ ಚೀಟಿ ಆಧಾರ್, ಪಡಿತರ ಚೀಟಿಗೆ ಜೋಡಿಕೆಯಾಗಿದ್ದು ಮಾಸಾಶನ, ಉಪಕರಣಗಳು, ಚಿಕಿತ್ಸೆಯಲ್ಲಿ ರಿಯಾಯತಿ, ಕೃತಕ ಕಾಲು, ಗಾಲಿಕುರ್ಚಿ, ಕನ್ನಡಕ, ಶ್ರವಣ ಸಾಧನ, ಶಸ್ತ್ರಚಿಕಿತ್ಸೆ ಇತ್ಯಾದಿ ಕೇಂದ್ರ ಹಾಗೂ ರಾಜ್ಯ ಸರಕಾರದ ಯಾವುದೇ ಸವಲತ್ತು ಬೇಕಾದರೂ ಇದೇ ಯುಡಿಐಡಿ ಸಂಖ್ಯೆ ಹಾಗೂ ಗುರುತಿನ ಚೀಟಿಯ ಅವಶ್ಯವಿದೆ. ಈ ಹಿನ್ನೆಲೆಯಲ್ಲಿ ಕುಂದಾಪುರ ಉಪವಿಭಾಗ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸಕ ವೈದ್ಯರ ಕೊರತೆಯನ್ನು ನೀಗಿಸಿ ವಿಕಲಚೇತನರ ಪ್ರಮಾಣಪತ್ರಗಳನ್ನು ಕ್ಲಪ್ತಸಮಯದಲ್ಲಿ ಒದಗಿಸುವ ಬಗ್ಗೆ ಅಗತ್ಯ ಕ್ರಮವಹಿಸುವಂತೆ ಇಲಾಖಾಧಿಕಾರಿಗಳಿಗೆ ಸೂಚಿಸುವಂತೆ ಪತ್ರದಲ್ಲಿ ಮನವಿಯನ್ನು ಮಾಡಿದ್ದಾರೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…

13 hours ago

ಬಂಟ್ವಾಳ: ಸಜೀಪಮೂಡದಲ್ಲಿ ವಿದ್ಯುತ್ ಅವಘಡ; ಪೀಠೋಪಕರಣಗಳು ಸೇರಿ ದಿನನಿತ್ಯದ ವಸ್ತುಗಳು ಸುಟ್ಟು ಭಸ್ಮ…!

ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…

13 hours ago

ವಾಷಿಂಗ್ಟನ್: ಅಮೆರಿಕ ಕಾಂಗ್ರೆಸ್‌ನಿಂದ ಡಾ. ಯು.ಟಿ. ಖಾದರ್‌ಗೆ ಪ್ರತಿಷ್ಠಿತ ಗೌರವ…!

ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…

18 hours ago

ವಿಶ್ವಕಪ್ ಗಲಾಟೆ: ಅರ್ಜೆಂಟೀನಾ ವಿರುದ್ಧ ಫಿಫಾ ಕಠಿಣ ಶಿಸ್ತು ಕ್ರಮ!

ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…

19 hours ago

ನವದೆಹಲಿ: ‘ಪಾಕಿಸ್ತಾನಿ ಕಾಶ್ಮೀರ’ ಅಲ್ಲ, ಅದು PoK ಮಾತ್ರ: ನ್ಯೂಯಾರ್ಕ್ ಟೈಮ್ಸ್‌ಗೆ ಭಾರತದ ತಿರುಗೇಟು…!

'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…

19 hours ago

ವಾಷಿಂಗ್ಟನ್: ಚೀನಾ-ಪಾಕ್ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್? ಟ್ರಂಪ್ ಆತಂಕ…!

ಚೀನಾ ಪಾಕಿಸ್ತಾನದ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್‌ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…

19 hours ago