ಜನ ಮನದ ನಾಡಿ ಮಿಡಿತ

Advertisement

ಕಾಸರಗೋಡು: ಮನೆಯ ಮೇಲೆಯೇ ಗುಡ್ಡ ಕುಸಿದು ಮನೆಗೆ ಹಾನಿ..!

ಕಾಸರಗೋಡು ಜಿಲ್ಲೆಯಲ್ಲಿ ವರುಣನ ಆರ್ಭಟಕ್ಕೆ ಜನರು ಅಕ್ಷರಶಃ ತತ್ತರಿಸಿ ಹೋಗಿದ್ದಾರೆ. ಗಡಿನಾಡು ಕಾಸರಗೋಡಿನಲ್ಲಿ ನಡೆದ ಘಟನೆ ನಿದ್ರೆಯಲ್ಲಿದ್ದವರಿಗೆ ಒಂದು ಕ್ಷಣ ಯವಲೋಕದ ದರ್ಶನವನ್ನೇ ಮಾಡಿಸಿದೆ.

ಹಂಚು ಹಾಕಿದ ಮನೆಯ ಮೇಲೆಯೇ ಗುಡ್ಡ ಕುಸಿದು ಮನೆ ಭಾಗಶಃ ಹಾನಿಗೊಂಡ ಘಟನೆ ಕಾಸರಗೋಡು ಜಿಲ್ಲೆಯ ಚಂದ್ರಗಿರಿಯ ನಡಕ್ಕಾಲ್ ಎಂಬಲ್ಲಿ ನಡೆದಿದೆ. ಈ ಗ್ರಾಮದಲ್ಲಿ ವಾಸಿಸುವ ಮಿತೇಶ್ ಎಂಬವರ ಮನೆ ಸಮೀಪದ ಗುಡ್ಡ ರಾತ್ರಿ ಸುರಿದ ಭೀಕರ ಮಳೆಗೆ ಕುಸಿದಿದೆ. ಬೃಹತ್ ಕಲ್ಲು ಸಹಿತ ಮಣ್ಣು ಮನೆಯ ಒಂದು ಭಾಗದ ಮೇಲೆ ಬಿದ್ದು ದೊಡ್ಡ ಅಪಾಯಕ್ಕೆ ಕಾರಣವಾಗಿದೆ. ಅವಘಡದಿಂದ ಮನೆಯ ಒಂದು ಕೊಠಡಿ ಸಂಪೂರ್ಣವಾಗಿ ಕುಸಿದಿದ್ದು,ಮನೆ ಭಾಗಶಃ ಹಾನಿಗೆ ಒಳಗಾಗಿದೆ. ಅದೃಷ್ಟವಶಾತ್ ಜೀವ ಹಾನಿ ಉಂಟಾಗಿಲ್ಲ. ಮನೆಯಲ್ಲಿ ನಾಲ್ವರು ವಾಸಿಸುತ್ತಿದ್ದು, ಕುಸಿತದ ಸದ್ದು ಕೇಳಿ ಮನೆಯಲ್ಲಿದ್ದವರು ಹೊರಗೆ ಓಡಿ ಬಚಾವಾಗಿದ್ದಾರೆ. ಮನೆಯ ಸಮೀಪದ ಗುಡ್ಡ ಕುಸಿಯುವ ಬಗ್ಗೆ ಈ ಹಿಂದೆಯೇ ಸಂಶಯಗಳಿದ್ದು, ಎರಡು ವರ್ಷಗಳ ಹಿಂದೆಯೇ ಕಂದಾಯ ಇಲಾಖೆಯ ಅಧಿಕೃತರಿಗೆ ಮನವಿ ನೀಡಿ ವಿಷಯದ ಗಂಭೀರತೆಯನ್ನು ತಿಳಿಸಲಾಗಿತ್ತು. ಆದರೆ ಯಾವುದೇ ಪ್ರಯೋಜನವಾಗಿಲ್ಲ ಎಂದು ಸಂತ್ರಸ್ತರು ತಮ್ಮ ಅಳಲನ್ನು ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!