ಕಾಸರಗೋಡು ಜಿಲ್ಲೆಯಲ್ಲಿ ವರುಣನ ಆರ್ಭಟಕ್ಕೆ ಜನರು ಅಕ್ಷರಶಃ ತತ್ತರಿಸಿ ಹೋಗಿದ್ದಾರೆ. ಗಡಿನಾಡು ಕಾಸರಗೋಡಿನಲ್ಲಿ ನಡೆದ ಘಟನೆ ನಿದ್ರೆಯಲ್ಲಿದ್ದವರಿಗೆ ಒಂದು ಕ್ಷಣ ಯವಲೋಕದ ದರ್ಶನವನ್ನೇ ಮಾಡಿಸಿದೆ.
ಹಂಚು ಹಾಕಿದ ಮನೆಯ ಮೇಲೆಯೇ ಗುಡ್ಡ ಕುಸಿದು ಮನೆ ಭಾಗಶಃ ಹಾನಿಗೊಂಡ ಘಟನೆ ಕಾಸರಗೋಡು ಜಿಲ್ಲೆಯ ಚಂದ್ರಗಿರಿಯ ನಡಕ್ಕಾಲ್ ಎಂಬಲ್ಲಿ ನಡೆದಿದೆ. ಈ ಗ್ರಾಮದಲ್ಲಿ ವಾಸಿಸುವ ಮಿತೇಶ್ ಎಂಬವರ ಮನೆ ಸಮೀಪದ ಗುಡ್ಡ ರಾತ್ರಿ ಸುರಿದ ಭೀಕರ ಮಳೆಗೆ ಕುಸಿದಿದೆ. ಬೃಹತ್ ಕಲ್ಲು ಸಹಿತ ಮಣ್ಣು ಮನೆಯ ಒಂದು ಭಾಗದ ಮೇಲೆ ಬಿದ್ದು ದೊಡ್ಡ ಅಪಾಯಕ್ಕೆ ಕಾರಣವಾಗಿದೆ. ಅವಘಡದಿಂದ ಮನೆಯ ಒಂದು ಕೊಠಡಿ ಸಂಪೂರ್ಣವಾಗಿ ಕುಸಿದಿದ್ದು,ಮನೆ ಭಾಗಶಃ ಹಾನಿಗೆ ಒಳಗಾಗಿದೆ. ಅದೃಷ್ಟವಶಾತ್ ಜೀವ ಹಾನಿ ಉಂಟಾಗಿಲ್ಲ. ಮನೆಯಲ್ಲಿ ನಾಲ್ವರು ವಾಸಿಸುತ್ತಿದ್ದು, ಕುಸಿತದ ಸದ್ದು ಕೇಳಿ ಮನೆಯಲ್ಲಿದ್ದವರು ಹೊರಗೆ ಓಡಿ ಬಚಾವಾಗಿದ್ದಾರೆ. ಮನೆಯ ಸಮೀಪದ ಗುಡ್ಡ ಕುಸಿಯುವ ಬಗ್ಗೆ ಈ ಹಿಂದೆಯೇ ಸಂಶಯಗಳಿದ್ದು, ಎರಡು ವರ್ಷಗಳ ಹಿಂದೆಯೇ ಕಂದಾಯ ಇಲಾಖೆಯ ಅಧಿಕೃತರಿಗೆ ಮನವಿ ನೀಡಿ ವಿಷಯದ ಗಂಭೀರತೆಯನ್ನು ತಿಳಿಸಲಾಗಿತ್ತು. ಆದರೆ ಯಾವುದೇ ಪ್ರಯೋಜನವಾಗಿಲ್ಲ ಎಂದು ಸಂತ್ರಸ್ತರು ತಮ್ಮ ಅಳಲನ್ನು ವ್ಯಕ್ತಪಡಿಸಿದ್ದಾರೆ.
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…
ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…
ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು…
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…