ಭಾರೀ ಮಳೆಯ ನಡುವೆ ಬಸ್ಸೊಂದರ ಬ್ರೇಕ್ ಫೈಲ್ ಆಗಿ ಹಿಮ್ಮುಖ ಚಲಿಸಿ ನಡುರಸ್ತೆಯಲ್ಲಿ ಬಂದು ನಿಂತಿರುವ ಘಟನೆ ರಾತ್ರಿ ಮಂಗಳೂರು ಹೊರವಲಯದ ದೇರಳಕಟ್ಟೆ ಸಮೀಪದ ನಾಟೆಕಲ್ ಬಳಿ ನಡೆದಿದೆ.
ನಾಟೆಕಲ್ ಏರು ರಸ್ತೆಯಲ್ಲಿ ಮಂಜನಾಡಿ ಕಡೆಗೆ ಸಂಚರಿಸುವ ಬಸ್ಸು ಏಕಾಏಕಿ ಬ್ರೇಕ್ ಫೈಲ್ ಆದ ಕಾರಣ ಬಸ್ಸು ಹಿಮ್ಮುಖವಾಗಿ ಚಲಿಸಿದೆ. ಈ ಸಂದರ್ಭದಲ್ಲಿ ಹಿಂದೆಯಿಂದ ಬರುತ್ತಿದ್ದ ವಾಹನ ಸವಾರರು ವಾಹನ ಬಿಟ್ಟು ಓಡಿದ ಪರಿಣಾಮ ಯಾವುದೇ ಜೀವಾಪಾಯ ಸಂಭವಿಸಿಲ್ಲ. ಎರಡು ದ್ವಿಚಕ್ರ ವಾಹನಗಳು ಬಸ್ನಡಿಗೆ ಬಿದ್ದಿವೆ. ಬಸ್ ಪ್ರಯಾಣಿಕರಿಗೂ ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ. ವಿಪರೀತ ಮಳೆಯ ಕಾರಣ ಬಹಳ ಹೊತ್ತು ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು ಎಂದು ತಿಳಿದುಬಂದಿದೆ.
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…
ಮಚ್ಚಿನ ಗ್ರಾಮ ಪಾಳ್ಯರ ಎಂಬಲ್ಲಿ ಪಿಕಪ್ ವಾಹನ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸವಾರರಿಬ್ಬರು ಚಿಕಿತ್ಸೆ…
ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ, ದೇಶಾದ್ಯಂತ ಗೋಹತ್ಯೆ ಹಾಗೂ ಗೋಮಾಂಸ ರಫ್ತನ್ನು ಸಂಪೂರ್ಣವಾಗಿ ನಿಷೇಧಿಸುವ ಕಾನೂನು ಜಾರಿಗೊಳಿಸಬೇಕು ಎಂದು ಮುಸ್ಲಿಂ…
ಕಂಟೇನರ್ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಕೋಟೇಶ್ವರ ಹಾಲಾಡಿ…