ಮಂಗಳೂರು ಗಣಿ ಇಲಾಖೆಯ ಹಿರಿಯ ಭೂವಿಜ್ಞಾನಿ ಕೃಷ್ಣವೇಣಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪದಲ್ಲಿ ಅಮಾನತುಗೊಂಡಿರುವ ಬೆನ್ನಲ್ಲೇ, ಅವರ ಭ್ರಷ್ಟಾಚಾರಕ್ಕೆ ಬೆಂಬಲವಾಗಿ ನಿಂತಿದ್ದ ಭೂವಿಜ್ಞಾನಿ ಡಾ. ಮಹದೇಶ್ವರ ಎಚ್ ಎಸ್ ವರ್ಗಾವಣೆಗೆ ಸಾಮಾಜಿಕ ಹೋರಾಟಗಾರ ನವೀನ್ ಕುಮಾರ್ ರೈ ಕೈಕಾರ ಪಟ್ಟು ಹಿಡಿದಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಭೂ ಮತ್ತು ಗಣಿ ವಿಜ್ಞಾನ ಇಲಾಖೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ಡಾ. ಮಹಾದೇಶ್ವರ ಎಚ್ ಎಸ್ ಸರಿ ಸುಮಾರು 5 ವರ್ಷದಿಂದ ಜಿಲ್ಲೆಯಲ್ಲೇ ಜಾಂಡಾ ಹೂಡಿದ್ದಾರೆ. ರಾಜ್ಯ ಸರಕಾರದ ಸುತ್ತೋಲೆಯ ಪ್ರಕಾರ ಒಂದು ತಾಲೂಕು ಅಧಿಕಾರಿಯಾಗಿ ಇರುವವರು ಎರಡು ವರ್ಷದಿಂದ ಜಾಸ್ತಿ ಇರುವಾಗೆ ಇಲ್ಲ. ಆದರೂ ಸರಕಾರ ವರ್ಗಾವಣೆ ಎಂಬ ನೆಪ ಮಾಡಿದರು ಕನಿಷ್ಠ ಮೂರು ವರ್ಷ ಇರಬಹುದು. ಆದರೆ ಭೂ ಮತ್ತು ಗಣಿ ಇಲಾಖೆಯ ಅಧಿಕಾರಿಯಾಗಿದ್ದ ಮಹಾದೇಶ್ವರ ಎಚ್ ಎಸ್ ಸರಿ ಸುಮಾರು 5 ವರ್ಷವಾಗುತ್ತಾ ಬಂದಿದೆ.
ಇವರಿಗೆ 2024ರ ಅಕ್ಟೋಬರ್ 28 ರಂದು ವರ್ಗಾವಣೆ ಆದೇಶವಾಗಿತ್ತು. ಆದ್ರೆ ಹಿರಿಯ ಭೂವಿಜ್ಞಾನಿಯಾದ ಕೃಷ್ಣವೇಣಿಯವರು ಸರಕಾರದ ಆದೇಶವನ್ನು ಧಿಕ್ಕರಿಸಿ ಮಾದೇಶ್ವರ ಎಚ್ ಎಸ್ ಎಂಬ ಅಧಿಕಾರಿಯನ್ನು ರಿಲೀವ್ ಮಾಡಲಿಲ್ಲ. ಕಾರಣ ತನ್ನ ಲಂಚದ ಹಣಕ್ಕೆ ಸಹಕಾರ ನೀಡುತ್ತಿದ್ದ ಎಂಬ ಒಂದೇ ಕಾರಣಕ್ಕೆ ದೊಡ್ಡ ದೊಡ್ಡ ಅಕ್ರಮ ಮಾಫಿಯಾದ ಜನರನ್ನು ಇದೇ ಭೂ ವಿಜ್ಞಾನಿಯಾದ ಮಹಾದೇಶ್ವರ ಎಚ್ ಎಸ್ ಅವರು ಹಿರಿಯ ಭೂವಿಜ್ಞಾನಿಯಾದ ಕೃಷ್ಣವೇಣಿ ಅವರಿಗೆ ಪರಿಚಯ ಮಾಡಿದ್ದರು. ಇದು ಸಹ ಭೂ ವಿಜ್ಞಾನಿಯಾದ ಮಹದೇಶ್ವರ ಎಚ್ ಎಸ್ ಇವರಿಗೆ ವರ್ಗಾವಣೆ ಆಗದ ರೀತಿಯಲ್ಲಿ ಸಹಕಾರವಾಗಿತ್ತು. ಸರಕಾರ ವರ್ಗಾವಣೆಯನ್ನು ಮಾಡಿದ್ದರು ಈ ವರ್ಗಾವಣೆ ಆದೇಶವನ್ನೇ ತನ್ನ ಹಿಡಿತದಲ್ಲಿ ಇಟ್ಟುಕೊಂಡು ಸರಕಾರಕ್ಕೆ ಸವಾಲು ಎಸೆದಂತಹ ಲಂಚದ ಅಧಿಕಾರಿಯದ ಕೃಷ್ಣವೇಣಿಯವರ ಆಟ ನಿಂತು ಹೋಯಿತು. ಆದರೆ ಭೂವಿಜ್ಞಾನಿ ಮಹಾದೇಶ್ವರ ಎಚ್ ಎಸ್ ಯಾವಾಗ ವರ್ಗಾವಣೆ ಆಗುತ್ತಾರಾ ಏನು ಎಂಬುದು ತಿಳಿದಿಲ್ಲ. ಸರಕಾರ ತಕ್ಷಣ ಈ ವರ್ಗಾವಣೆ ಆದೇಶವನ್ನು ಪರಿಗಣಿಸಿ ಕೃಷ್ಣವೇಣಿ ಮತ್ತು ಭೂ ವಿಜ್ಞಾನಿಯಾದ ಮಾದೇಶ್ವರ ಎಚ್ ಎಸ್ ಇವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕಾಗಿ ಜಿಲ್ಲೆಯ ಜನರ ಒತ್ತಾಯ. ಇನ್ನು ಇದಕ್ಕೆ ಪೂರಕವಾಗಿ ಭೂ ವಿಜ್ಞಾನಿ ಮಹಾದೇಶ್ವರ ಎಚ್ ಎಸ್ ಅವರ ಜೊತೆ ಸರ್ಕಾರದಿಂದ ಅನುಮತಿ ಪಡೆದ ವ್ಯಕ್ತಿ ಮಾತನಾಡಿರುವ ಆಡಿಯೋ ಕೂಡ ವೈರಲ್ ಆಗಿದೆ.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…