ಹನಗೋಡು ಸರ್ಕಾರಿ ಪ್ರಾಥಮಿಕ ಶಾಲೆಯ ಪ್ರವಚನ ಕೊಠಡಿ ಮತ್ತು ಅಡುಗೆ ಮನೆಯ ಕೊಠಡಿ ತುಂಬಾ ಹಳೆಯದಾದ ಹಾಗೂ ಮಳೆ ಕಾರಣದಿಂದ ಪೂರ್ಣವಾಗಿ ಶಿಥಿಲಗೊಂಡಿದ್ದು, ಮಕ್ಕಳು ಶಿಥಿಲವಾದ ಕಟ್ಟಡದಲ್ಲೇ ಪಾಠ ಕೇಳುವಂತ ಪರಿಸ್ಥಿತಿ ನಿರ್ಮಾಣ ಆಗಿದೆ.
ಹಾಗಾಗಿ ಪೋಷಕರು ಮಕ್ಕಳನ್ನು ಶಾಲೆಗೆ ಕಳುಹಿಸಲು ನಿರಾಕರಿಸುವ ಪರಿಸ್ಥಿತಿ ಎದುರಾಗಿದೆ. ಕಟ್ಟಡದ ಮೇಲ್ಬಾವಣಿ ಕುಸಿಯಲು ಆರಂಭಿಸಿದೆ. ಜೊತೆಗೆ ಶಾಲೆಗೆ ಸೂಕ್ತವಾದ ಕಾಂಪೌಂಡ್ ಇಲ್ಲ, ಸಮರ್ಪಕ ಮೈದಾನ ಇಲ್ಲ- ಹೀಗೆ ಹಲವಾರು ಅವ್ಯವಸ್ಥೆಗಳಿಂದ ಕೂಡಿದ್ದು, 1-7 ರವರೆಗೆ 160ಕ್ಕೂ ಹೆಚ್ಚು ವಿದ್ಯಾರ್ಥಿಗಳಿರುವ ಕನ್ನಡ ಮಾಧ್ಯಮ ಶಾಲೆಯಲ್ಲಿ ಓದುತ್ತಿದ್ದು, ಶಾಲೆ ಅವ್ಯವಸ್ಥೆ ಬಗ್ಗೆ ಹಲವು ಬಾರಿ ದೂರು ನೀಡಿದರೂ ಯಾವುದೇ ಪ್ರಯೋಜನ ಆಗಿಲ್ಲ ಇದಕ್ಕೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ನಿರ್ಲಕ್ಷ್ಯವೆ ಕಾರಣ ಎಂದು ಪೋಷಕರು ಹಾಗೂ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗ್ರಾಮ ಪಂಚಾಯಿತಿ ಸದಸ್ಯ ಸಂತೋಷ್ ಮತನಾಡಿ ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ಸೇರಿಸುವುದು ತುಂಬಾ ಕಡಿಮೆ ಅದರಲ್ಲೂ ಈ ರೀತಿಯ ಸೌಲಭ್ಯ ಕೊರತೆಯ ಕಾರಣಗಳಿಂದ ಮಕ್ಕಳನ್ನು ಶಾಲೆಗೆ ಕಳುಹಿಸಲು ಇಷ್ಟಪಡುವುದಿಲ್ಲ. ಆದಾಗಿ ಈ ಮೂಲಕನಾದರೂ ಅಧಿಕಾರಿಗಳು, ಜನಪ್ರತಿನಿದಿಗಳು ಗಮನವಹಿಸಿ ಶಾಲೆಯ ಕಟ್ಟಡಗಳನ್ನು ದುರಸ್ತಿಗೊಳಿಸಿ ಮಕ್ಕಳು ನೆಮ್ಮದಿಯಿಂದ ಪಾಠ ಪ್ರವಚನ ಕೇಳಲು ಅನುಕೂಲ ಮಾಡಿಕೊಡಬೇಕು ಎಂದು ಮನವಿ ಮಾಡಿದ್ದಾರೆ.
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…
ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…
ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು…
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…