ಮಂಗಳೂರಿನ ರಥಬೀದಿಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 25 ಲಕ್ಷ ರೂ ವೆಚ್ಚದ ವಿವೇಕ ಕೊಠಡಿಯ ಗುದ್ದಲಿ ಪೂಜೆ ಹಾಗೂ ನೂತನ ವಿವೇಕ ಕೊಠಡಿಯ ಉದ್ಘಾಟನೆಯನ್ನು ಶಾಸಕ ವೇದವ್ಯಾಸ ಕಾಮತ್ ರವರು ನೆರವೇರಿಸಿದರು.
ನಂತರ ಮಾತನಾಡಿದ ಶಾಸಕರು, 2022-23ನೇ ಸಾಲಿನ ವಿವೇಕ ಯೋಜನೆಯ ಕೊಠಡಿಗಳು ಇದಾಗಿದೆ. ಈ ಕಾಲೇಜಿನ ವಿಜ್ಞಾನ ಪ್ರಯೋಗ ಶಾಲೆಯ ಉನ್ನತೀಕರಣಕ್ಕೆ ಬೇಡಿಕೆಯಿದ್ದು, ಎಂ.ಆರ್.ಪಿ.ಎಲ್, ಎಂ.ಸಿ.ಎಫ್ ನಂತಹ ಕಂಪನಿಗಳೊಂದಿಗೆ ಮಾತುಕತೆ ನಡೆಸಿ ಸಿಎಸ್ಆರ್ ಅನುದಾನದ ಮೂಲಕ ಬೇಡಿಕೆಯನ್ನು ಪೂರ್ಣ ಗೊಳಿಸಲು ಪ್ರಯತ್ನಿಸಲಾಗುವುದು. ಇದೇ ವೇಳೆ ಕಾಲೇಜಿಗೆ ಉತ್ತಮ ಕಂಪ್ಯೂಟರ್ ಲ್ಯಾಬ್ ನ ಅಗತ್ಯತೆಯೂ ಇದ್ದು ಈ ಬಗ್ಗೆ ಇನ್ಫೋಸಿಸ್ ಸಂಸ್ಥೆಯೊಂದಿಗೆ ಮಾತುಕತೆ ನಡೆಸಲಾಗಿದೆ.
ಬಲ್ಮಠದ ಪಿಯು ಹಾಗೂ ಡಿಗ್ರಿ ಕಾಲೇಜಿನ ಮಾದರಿಯಲ್ಲೇ ಕಂಪ್ಯೂಟರ್ ಗಳನ್ನು ಒದಗಿಸುವ ಭರವಸೆಯನ್ನು ಸಂಸ್ಥೆಯವರು ನೀಡಿದ್ದು, ಭವಿಷ್ಯದಲ್ಲಿ ಕಂಪ್ಯೂಟರ್ ಮತ್ತು ವಿಜ್ಞಾನ ಎರಡೂ ಕ್ಷೇತ್ರದಲ್ಲಿ ಈ ಕಾಲೇಜನ್ನು ಉನ್ನತೀಕರಣಗೊಳಿಸಿ ಹೆಚ್ಚಿನ ವಿದ್ಯಾರ್ಥಿಗಳಿಗೆ ಅನುಕೂಲ ಒದಗಿಸಲು ಸರ್ವ ರೀತಿಯಲ್ಲಿ ಪ್ರಯತ್ನಿಸಲಾಗುವುದು ಎಂದರು. ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ರಾಜೇಶ್ವರಿ, ಕಾಲೇಜು ಪ್ರಾಂಶುಪಾಲರಾದ ಭಾರತಿ, ನಿರಂಜನ್, ಅನುಸೂಯ, ಶ್ರೀನಿವಾಸ್, ಸೇರಿದಂತೆ ಕಾಲೇಜಿನ ಶಿಕ್ಷಕರು, ಶಿಕ್ಷಕೇತರರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…