ಮಂಗಳೂರು ನಗರ ಕ್ಲೀನ್ ಸಿಟಿ ಎಂದು ಕರೆಸಿಕೊಳ್ಳುತ್ತದೆ. ಆದ್ರೆ ಸೆಂಟ್ರಲ್ ರೈಲು ನಿಲ್ದಾಣಕ್ಕೆ ಹೋಗುವ ದಾರಿಯ ಮಧ್ಯೆ ಸಿಗುವ ಯೂನಿವರ್ಸಿಟಿ ಕಾಲೇಜಿನ ಗ್ರಂಥಾಲಯದ ಕಪೌಂಡ್ ಸಮೀಪ ಇರುವ ಜಾಗ ಕಸದ ರಾಶಿಯಿಂದ ತುಂಬಿತುಳುಕುತ್ತವೆ.
ಅನಾಮಿಕರು ವಾಹನಗಳಲ್ಲಿ, ನಡೆದಾಡುವಾಗ ಕಸ ಎಸೆದು ಹೋಗ್ತಾರೆ. ಅವರಿಗೆ ಯಾರು ಹೇಳುವವರು ಇಲ್ಲ ಅವರನ್ನು ಕೇಳುವವರು ಇಲ್ಲ ಎಂಬ ಮನಸ್ಥಿತಿ ಅವರದ್ದು. ಪ್ಲಾಸ್ಟಿಕ್ಗಳು, ಎಂಚಲು ವಸ್ತುಗಳು ದಿನವು ಈ ಮಾರ್ಗವಾಗಿ ಬರುವ ಅತಿಥಿಗಳನ್ನು ಸ್ವಾಗತಿಸುತ್ತಿವೆ. ಮಳೆಗಾಲದ ಈ ಸಮಯದಲ್ಲಿ ಆ ಭಾಗದಿಂದ ಹರಿಯುವ ನೀರು ಕಲುಷಿತವಾಗಿ ಅಲ್ಲೇ ನಿಂತು ಸಾಂಕ್ರಾಮಿಕ ರೋಗಕ್ಕೆ ಕಾರಣವಾಗುವುದರಲ್ಲಿ ಯಾವುದೇ ಅನುಮಾನ ಇಲ್ಲ. ಸೊಳ್ಳೆಗಳ ಉತ್ಪಾದನೆಯ ಜಾಗವಾಗಿರುವ ಈ ಪ್ರದೇಶ ಡೆಂಗ್ಯೂ, ಮಲೇರಿಯಾ ರೋಗಕ್ಕೂ ಕಾರಣವಾಗಬಹುದು.
ಆರೋಗ್ಯ ಇಲಾಖೆಯವರು ಇತ್ತ ಕಡೆ ಗಮನಹರಿಸುವುದೇ ಇಲ್ವಾ ಎಂಬ ಸಂಶಯ ಸಾರ್ವಜನಿಕರದ್ದು. ಕೆಲವು ಸಾರಿ ಮೂಗು ಮುಚ್ಚಿ ಆ ಭಾಗದಿಂದ ಹೋಗಬೇಕಾಗುತ್ತೆ. ಸನಿಹವೇ ಪೊಲೀಸ್ ಲೈನ್ ಕೂಡ ಇದೆ. ಆದ್ರೆ ಅವರು ಈ ಬಗ್ಗೆ ಮೌನ ವಹಿಸಿದ್ದಾರೆ. ದಿನ ನಿತ್ಯವೂ ಈ ಭಾಗವಾಗಿ ಸಾವಿರಾರು ಸಂಖ್ಯೆಯಲ್ಲಿ ಪ್ರಯಾಣಿಕರು ಸಂಚರಿಸುತ್ತಾ ಇರ್ತಾರೆ. ಅಂಥವರಿಗೆ ಇದು ಕಿರಿ ಕಿರಿ ಮಾಡುವ ಜೊತೆಗೆ ರೋಗಕ್ಕೂ ಕಾರಣವಾಗಲಿದೆ. ಈ ಬಗ್ಗೆ ಸೂಕ್ತವಾದ ಕ್ರಮವನ್ನು ಸ್ಥಳೀಯ ಆಡಳಿತ ವ್ಯವಸ್ಥೆಗಳು ಕೈಗೊಳ್ಳಬೇಕೆಂಬುದು ಸಾರ್ವಜನಿಕರ ಆಗ್ರಹ.
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…