ಇತ್ತೀಚೆಗೆ ಪತ್ನಿಯೇ ತನ್ನ ಗಂಡನ ಮುಗಿಸುತ್ತಿರುವ ಘಟನೆಗಳು ಸಾಲು ಸಾಲು ಬೆಳಕಿಗೆ ಬರುತ್ತಿವೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲೂ ಇಂಥದ್ದೇ ಮತ್ತೊಂದು ಘಟನೆ ನಡೆದಿದೆ.
ಮಹಿಳೆ ತನ್ನ ಭಾವನ ಜೊತೆಗೆ ಸೇರಿ ಪತಿಗೆ ಮೂಹೂರ್ತ ಇಟ್ಟಿದ್ದಾಳೆ. ಅದು ಜುಲೈ 13.. ನೈಋತ್ಯ ದೆಹಲಿಯ ನಿವಾಸಿ.. 35 ವರ್ಷದ ಕರಣ್ ದೇವ್ ಅನುಮಾನಸ್ಪದ ರೀತಿಯಲ್ಲಿ ಜೀವಕಳೆದುಕೊಂಡಿದ್ದ. ಕರೆಂಟ್ ಶಾಕ್ನಿಂದ ಕರಣ್ ಮೃತಪಟ್ಟಿದ್ದಾನೆ ಎಂದು ಪತ್ನಿ ಸುಶ್ಮಿತಾ ಕುಟುಂಬಸ್ಥರನ್ನು ನಂಬಿಸಿದ್ಲು.. ಈಕೆಯ ಮಾತನ್ನು ನಂಬಿದ್ದ ಮನೆಯವರು, ಮರಣೋತ್ತರ ಪರೀಕ್ಷೆಯೇನು ಬೇಡ ಎಂದು ಸುಮ್ಮನಾಗಿದ್ರು.
ಆದ್ರೆ ಮರುದಿನ ಕರಣ್ ದೇವ್ ಅಸಹಜ ನಿಧನದ ಹಿಂದಿನ ರಹಸ್ಯ ಬಯಲಾಗಿದೆ. ಅನುಮಾನ ವ್ಯಕ್ತಪಡಿಸಿದ್ದ ಪೊಲೀಸ್ರು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದರು. ಆದ್ರೆ ಮರು ದಿನ ಮೃತ ಕರಣ್ ಸಹೋದರ ಪೊಲೀಸರಿಗೆ ತಂದು ನೀಡಿದ ಸಾಕ್ಷ್ಯದಿಂದ ಸುಶ್ಮಿತಾಳ ಕಳ್ಳಾಟ ಬಯಲಾಗಿದೆ.. ಸುಶ್ಮಿತಾಳ ಫೋನ್ನಲ್ಲಿ ರಾಹುಲ್ ಹಾಗೂ ಸುಶ್ಮಿತಾ ಅವರ ಚಾಟಿಂಗ್ ಶಾಕ್. ಬೆಚ್ಚಿಬೀಳಿಸಿದೆ. ಗಂಡನನ್ನ ಯಾವ ರೀತಿ ಮುಗಿಸಬೇಕು ಎಂಬುದನ್ನು ಸುಶ್ಮಿತಾ.. ಮತ್ತು ಆಕೆಯ ಭಾವ ಕಮ್ ಪ್ರಿಯಕರ ರಾಹುಲ್ ಇಬ್ಬರೂ ಸೇರಿ ತುಂಬಾ ಚೆನ್ನಾಗಿ ಪ್ಲಾನ್ ಮಾಡಿ ಕೊಲೆ ಮಾಡಿದ್ದಾರೆ ಆದರೆ ಇವರ ಅಸಲಿಯತ್ತು ಬಯಲಾಗಿದ್ದು ಇನ್ಸಾ÷್ಟಗ್ರಾಮ್ ಚಾಟ್ನಿಂದ. ಇನ್ನು ಸುಶ್ಮಿತಾಳ ಅಸಲಿ ಮುಖವಾಡ ಬಯಲಾಗ್ತಿದ್ದಂತೆ, ಪೊಲೀಸರು ಸುಶ್ಮಿತಾ ಮತ್ತು ರಾಹುಲ್ನನ್ನು ಬಂಧಿಸಿ ವಿಚಾರಣೆಗೊಳಪಡಿಸಿದಾಗ ಇಬ್ಬರೂ ತಪ್ಪೊಪ್ಪಿಕೊಂಡಿದ್ದಾರೆ. ಒಟ್ಟಾರೆ ಇತ್ತೀಚಿಗೆ ದೇಶದಲ್ಲಿ ನಡೆಯುತ್ತಿರುವ ಸಾಲು ಸಾಲು ಗಂಡAದಿರ ಕೊಲೆ ಪ್ರಕರಣ ಮದುವೆಯಾದ ಗಂಡಸರನ್ನ ಬೆಚ್ಚಿ ಬೀಳುವಂತೆ ಮಾಡಿದೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…