ಜನ ಮನದ ನಾಡಿ ಮಿಡಿತ

Advertisement

ಆಧಾರ್ ಕಾರ್ಡ್ನಲ್ಲಿ ಮಕ್ಕಳ ಬಯೋಮೆಟ್ರಿಕ್ ಯಾವ್ಯಾವ ವಯಸ್ಸಿನಲ್ಲಿ ಮಾಡಿಸಲೇಬೇಕು.?

ದಿ ಅನ್‌ಕ್ಯೂ ಐಡೆಂಟಿಫಿಕೇಶನ್ ಅಥಾರಿಟಿ ಆಫ್ ಇಂಡಿಯಾ (ಯುಐಡಿಎಐ) ಇಲಾಖೆಯು ಭಾರತದ ನಿವಾಸಿಗಳಿಗೆ ಗುರುತಿನ ಹಾಗೂ ವಿಳಾಸದ ಪುರಾವೆಗಾಗಿ ಆಧಾರ್ ಕಾರ್ಡ್ಗಳನ್ನ ನೀಡುತ್ತದೆ. ಭಾರತದದಲ್ಲಿ ಈಗಾಗಲೇ ಶೇಕಡಾ 90ಕ್ಕಿಂತಲೂ ಅಧಿಕ ಜನರಿಗೆ ಆಧಾರ್ ಕಾರ್ಡ್ ವಿತರಣೆ ಆಗಿದೆ. ಈ ಆಧಾರ್ ಕಾರ್ಡ್ ವಯಸ್ಕರಿಗೆ ಮಾತ್ರವಲ್ಲ, ಮಕ್ಕಳಿಗೂ ಅತ್ಯಂತ ಮುಖ್ಯವಾದ ದಾಖಲೆ ಆಗಿದೆ.

ಯಾವ ವಯಸ್ಸಿನಲ್ಲಿ ಮಕ್ಕಳ ಬಯೋಮೆಟ್ರಿಕ್ ಅನ್ನು ಸ್ವೀಕರಿಸಲಾಗುತ್ತದೆ ಎಂಬುವುದರ ಬಗ್ಗೆ ನೋಡುವುದಾದರೆ ಆಧಾರ್ ಕಾರ್ಡ್ ನೋಂದಾಣಿ ಮಾಡುವಾಗ 5 ವರ್ಷದ ಒಳಗಿನ ಮಕ್ಕಳ ಬಯೋಮೆಟ್ರಿಕ್ ಮಾಹಿತಿಯನ್ನು ತೆಗೆದುಕೊಳ್ಳುವುದಿಲ್ಲ. ಏಕೆಂದರೆ ಮಕ್ಕಳ ಬೆರಳಚ್ಚುಗಳು ಮತ್ತು ಐರಿಸ್ ಸ್ಕ್ಯಾನ್‌ಗಳು ಸ್ಪಷ್ಟವಾಗಿ ಇರುವುದಿಲ್ಲ. ಆದ್ದರಿಂದ ಆಧಾರ್ ಕಾರ್ಡ್ ಮಾಡುವಾಗ ಮಗುವಿನ ಫೋಟೋ ಹಾಗೂ ಸಾಮಾನ್ಯ ಮಾಹಿತಿ ಮಾತ್ರ ತೆಗೆದುಕೊಳ್ಳಲಾಗುತ್ತದೆ. ಆದರೆ ಮಗುವಿನ ನಿರ್ದಿಷ್ಟ ವಯಸ್ಸಿನ ನಂತರ, ಆಧಾರ್ ಕಾರ್ಡ್ನಲ್ಲಿ ಬಯೋಮೆಟ್ರಿಕ್ಸ್ ನವೀಕರಿಸಲೇಬೇಕು. ಯುಐಡಿಎಐ ಇಲಾಖೆಯ ಪ್ರಕಾರ ಮಕ್ಕಳು ನಿರ್ದಿಷ್ಟ ವಯಸ್ಸಿಗೆ ಬಂದಾಗ ಬಯೋಮೆಟ್ರಿಕ್ ಮಾಹಿತಿ ನವೀಕರಣ ಮಾಡಬೇಕು. 5 ವರ್ಷ ಆಗಿದ್ದಾಗ ಮೊದಲ ಬಾರಿಗೆ ಬಯೋಮೆಟ್ರಿಕ್ ಅಪ್‌ಡೇಟ್ ಮಾಡಿಸಬೇಕು. 5 ವರ್ಷದಿಂದ 7 ವರ್ಷದ ಒಳಗೆ ಒಮ್ಮೆ ಅಪ್‌ಡೇಟ್ ಮಾಡಿಸಬೇಕು. ಇದಾದ ಮೇಲೆ ಮತ್ತೆ 15ನೇ ವರ್ಷದಲ್ಲಿ ಬಯೋಮೆಟ್ರಿಕ್ ಅಪ್‌ಡೇಟ್ ಮಾಡಲೇಬೇಕು. ಇದು ನಿಮ್ಮ ಮಗುವಿನ ಜೀವನಕ್ಕೆ ಅನುಕೂಲವಾಗುತ್ತದೆ. ಒಂದು ವೇಳೆ ಮಗುವಿನ ಬಯೋಮೆಟ್ರಿಕ್ ಅಪ್‌ಡೇಟ್ ಮಾಡಿಲ್ಲ ಎಂದರೆ ಆಧಾರ್ ಕಾರ್ಡ್ ನಿಷ್ಕ್ರಿಯ ಮಾಡಲಾಗುತ್ತೆ. ಇದರಿಂದ ಶಾಲೆ, ಕಾಲೇಜು, ಬ್ಯಾಂಕ್ ಸೇರಿದಂತೆ ಇತರೆ ಪ್ರಮುಖವಾಗಿ ಬೇಕಾದ್ದಲ್ಲೇ ಮಾನ್ಯ ಆಗುವುದಿಲ್ಲ. ಹೀಗಾಗಿ ಆಧಾರ್ ಸೇವಾ ಕೇಂದ್ರಕ್ಕೆ ತೆರಳಿ ನಿಮ್ಮ ಮಕ್ಕಳಿಗೆ 15 ವರ್ಷಗಳು ತುಂಬಿದ್ರೆ ಬಯೋಮೆಟ್ರಿಕ್ ಅಪ್‌ಡೇಟ್ ಮಾಡಿಸಿ.

Leave a Reply

Your email address will not be published. Required fields are marked *

ಬಂಟ್ವಾಳ: ಸಂಚರಿಸುತ್ತಿದ್ದ ಲಾರಿಯಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆ*ಂಕಿ…!

ಬಂಟ್ವಾಳ: ಹಗ್ಗ ಕಡಿದು ಬಾವಿಗೆ ಬಿದ್ದ ಇಬ್ಬರು ಕಾರ್ಮಿಕರು ಪಾರು….!

ಕಡೇಶಿವಾಲಯ: ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿ….!

ಬಂಟ್ವಾಳ: ಸಿಡಿಲು ಬಡಿದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಭೇಟಿ ನೀಡಿದ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು..!

ಬಂಟ್ವಾಳ: ಕರಾವಳಿಯ ಕಾರಣೀಕ ದೈವ ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ ಖ್ಯಾತ ಚಲನಚಿತ್ರ ನಟಿಯಾಗಿರುವ ರಚಿತರಾಮ್..!

ಬಂಟ್ವಾಳ: ಬಂಟ್ವಾಳ ತಾಲೂಕಿನ ಮಹತೋಬಾರ ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೆ ಬಡಿದ ಸಿಡಿಲು..!

ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ಕೆಲ ಮನೆಗಳಿಗೆ ಸಿಡಿಲು ಬಡಿದು ಹಾನಿ..!

ಹಾಸನ: ಸಿಡಿಲು ಬಡಿದು ಆಂಜನೇಯ ಸ್ವಾಮಿ ದೇವಾಲಯದ ಅರ್ಚಕ ಮೃತ್ಯು..!

ಮಂಗಳೂರು : ಶ್ರೀ ಭದ್ರಕಾಳಿ ಚೆಂಡೆ ತಂಡದ ಮಾಲೀಕ ಹೃ*ದಯಾಘಾ*ತದಿಂದ ಮೃ*ತ್ಯು..!

error: Content is protected !!