ಇನ್ಸ್ಟಾದಲ್ಲಿ ಪರಿಚಯವಾದ ಮಹಿಳೆ ಜೊತೆಗೆ ಮಾತುಕತೆಗೆ ಅಂತ ಬಂದವನು ಆಕೆಯ ಸಂಬಂಧಿಗೆ ಕತ್ತುಕೊಯ್ದ ಘಟನೆ ಹೆಚ್ಎಸ್ಎಲ್ನಲ್ಲಿ ನಡೆದಿದೆ.
ಸೆಲ್ವ ಕಾರ್ತಿಕ್ ಬಂಧಿತ ಆರೋಪಿಯಾಗಿದ್ದಾನೆ. ತಿರಪ್ಪತ್ತೂರು ಮೂಲದ ಸೆಲ್ವ ಕಾರ್ತಿಕ್ಗೆ ಇನ್ಸ್ಟಾಗ್ರಾಮ್ನಲ್ಲಿ ಮಹಿಳೆ ಜೊತೆಗೆ ಪರಿಚಯ ಆಗುತ್ತೆ. ಹೀಗೆ ದಿನ ಕಳೆದಂತೆ ಕಾರ್ತಿಕ್ ಇನ್ಸ್ಟಾದಲ್ಲಿ ಮಹಿಳೆಗೆ ಮೆಸೇಜ್ ಮಾಡಿ ಪೀಡಿಸ್ತಿದ್ದನಂತೆ. ಆದ್ರೆ, ಆ ಮಹಿಳೆಗೆ ಈಗಾಗಲೇ ಮದುವೆಯಾಗಿದ್ದು, ಕಾರ್ತಿಕ್ ಮೆಸೇಜ್ ಮಾಡುತ್ತಿದ್ದ ವಿಚಾರವನ್ನು ಗಂಡನಿಗೂ ಹೇಳದೆ ತಂದೆಗೆ ತಿಳಿಸಿದ್ದಳು. ಇನ್ನೂ, ಈ ವಿಚಾರ ತಂದೆಗೆ ಗೊತ್ತಾಗುತ್ತಿದ್ದಂತೆ ಕಾರ್ತಿಕ್ ಜೊತೆ ಮಾತಾಡಲು ಹೆಚ್ಎಸ್ಎಲ್ಗೆ ಕರೆಸಿದ್ದರು. ಮಾತುಕತೆ ಬಳಿಕ ಕಾರ್ತಿಕ್ ಮಹಿಳೆ ಜೊತೆ ಮಾತನಾಡಬೇಕು ಅಂತ ಹೇಳಿದ್ದಾನೆ. ಈ ವೇಳೆ ಬೈಕ್ನಲ್ಲಿ ಕೂರಿಸಿಕೊಂಡು ಮನೆಗೆ ಕಡೆ ಹೊರಟಿದ್ರು, ಆಗ ಅದೇನ್ ಆಯ್ತೋ ಗೊತ್ತಿಲ್ಲ ಮಹಿಳೆ ಸಂಬಂಧಿಗೆ ಕಾರ್ತಿಕ್ ಚಾಕು ಇರಿದಿದ್ದಾನೆ. ಬೈಕ್ನಲ್ಲಿಯೇ ಪ್ರಶಾಂತ್ ಎಂಬಾತನ ಕತ್ತುಕೊಯ್ದಿದ್ದಾನೆ. ಆ ಕೂಡಲೇ ಗಾಯಾಳು ಯುವಕನನ್ನು ಆಸ್ಪತ್ಸೆಗೆ ದಾಖಲಿಸಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಆರೋಪಿ ಕಾರ್ತಿಕ್ನನ್ನು ಹೆಚ್ಎಸ್ಎಲ್ ಪೊಲೀಸರು ಬಂಧಿಸಿದ್ದಾರೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…