ದಕ್ಷಿಣ ಕನ್ನಡ ಜಿಲ್ಲೆಯ ಆರೋಗ್ಯ ಇಲಾಖೆಯ ಅಧಿಕಾರಿಗಳು ಹತ್ತು ತಂಡಗಳನ್ನ ರಚಿಸಿ ಜಿಲ್ಲೆಯ ವಿವಿಧೆಡೆಯ ಪಾಲಿಕ್ಲಿನಿಕ್ ಹಾಗೂ ಮೆಡಿಕಲ್ ಲ್ಯಾಬ್ಗಳ ತಪಾಸಣೆ ನಡೆಸಿದ್ದು, ಇದೇ ಸಂದರ್ಭದಲ್ಲಿ ಕೆಪಿಎಮ್ ಇ ಪರವಾನಿಗೆ ಇಲ್ಲದೆ ನಿಯಮ ಉಲ್ಲಂಘಿಸಿ ಕಾರ್ಯಾಚರಿಸುತ್ತಿದ್ದ ದೇರಳಕಟ್ಟೆಯ ಡಯಾಗ್ನೋಸ್ಟಿಕ್ ಆಂಡ್ ಪಾಲಿಕ್ಲಿನಿಕ್ಗೆ ಅಧಿಕಾರಿಗಳು ಬೀಗ ಮುದ್ರೆ ಜಡಿದಿದ್ದಾರೆ.
ದೇರಳಕಟ್ಟೆಯಲ್ಲಿ ಕಾರ್ಯಾಚರಿಸುತ್ತಿದ್ದ “ದೇರಳಕಟ್ಟೆ ಡಯಾಗ್ನೋಸ್ಟಿಕ್ & ಪಾಲಿ ಕ್ಲಿನಿಕ್’ ಗೆ ಶನಿವಾರದಂದು ದಾಳಿ ನಡೆಸಿದ ಆರೋಗ್ಯಾಧಿಕಾರಿಗಳ ತಂಡವು ಪರಿಶೀಲನೆ ನಡೆಸಿದ್ದು, ಕೆಪಿಎಮ್ ಇ ಪರವಾನಿಗೆ, ಪೊಲ್ಯೂಷನ್ ಕಂಟ್ರೋಲ್ ಬೋರ್ಡ್ ಪರವಾನಿಗೆ, ಬಯೋಮೆಡಿಕಲ್ ವೇಸ್ಟ್ ಮ್ಯಾನೇಜ್ ಮೆಂಟ್ ಅಗ್ರಿಮೆಂಟ್ ಇಲ್ಲದೆನೇ ನಿಯಮಗಳನ್ನ ಉಲ್ಲಂಘಿಸಿ ಪಾಲಿಕ್ಲಿನಿಕ್ ಕಾರ್ಯಾಚರಿಸುತ್ತಿರುವುದು ಬೆಳಕಿಗೆ ಬಂದಿತ್ತು.
ದೇರಳಕಟ್ಟೆ ಡಯಾಗ್ನೋಸ್ಟಿಕ್ & ಪಾಲಿಕ್ಲಿನಿಕ್ ಗೆ ನಾಲ್ಕು ದಿವಸಗಳ ಹಿಂದಷ್ಟೆ ನೋಟೀಸ್ ಜಾರಿ ಮಾಡಿದ್ದಲ್ಲದೆ, ಕ್ಲಿನಿಕನ್ನ ತೆರೆಯದಂತೆ ಮೌಖಿಕವಾಗಿಯೂ ಎಚ್ಚರಿಕೆ ನೀಡಿದ್ದೆವು. ಇಲಾಖೆಯ ನೋಟೀಸಿಗೂ ಕ್ಯಾರೇ ಎನ್ನದ ಪಾಲಿಕ್ಲಿನಿಕ್ ಬಾಗಿಲು ತೆರೆದು ಕಾರ್ಯಾಚರಿಸುತ್ತಿದ್ದು ಶನಿವಾರದಂದು ನಮ್ಮ ಅಧಿಕಾರಿಗಳು ದಾಳಿ ನಡೆಸಿ ಕ್ಲಿನಿಕ್ ಗೆ ಬೀಗ ಮುದ್ರೆ ಜಡಿದಿದ್ದಾರೆ.
ಜಿಲ್ಲೆಯಲ್ಲಿ ಕಾರ್ಯಾಚರಿಸುತ್ತಿರುವ ಮೆಡಿಕಲ್ ಲ್ಯಾಬ್ ಮತ್ತು ಪಾಲಿಕ್ಲಿನಿಕ್ ಗಳು ಹೃದಯಾಘಾತ ಪ್ರಕರಣಗಳ ಬಗ್ಗೆ ಸಮರ್ಪಕವಾದ ಮಾಹಿತಿಗಳನ್ನ ಇಲಾಖೆಗೆ ನೀಡಬೇಕು. ಹೃದ್ರೋಗಿಗಳು ಚಿಕಿತ್ಸೆಯಿಂದ ವಂಚಿತರಾಗಬಾರದೆಂಬುದು ಒಂದು ಉದ್ದೇಶವಾದರೆ, ಜಿಲ್ಲೆಯಲ್ಲಿ ಕೆಪಿಎಮ್ ಇ ಕಾಯ್ದೆಯನ್ನ ಸಮರ್ಪಕವಾಗಿ ಅನುಷ್ಟಾನ ಮಾಡುವ ನಿಟ್ಟಿನಲ್ಲಿ ಮೆಡಿಕಲ್ ಲ್ಯಾಬ್ ಮತ್ತು ಪಾಲಿಕ್ಲಿನಿಕ್ ಗಳನ್ನ ಪರಿಶೀಲನೆ ನಡೆಸುತ್ತಿದ್ದೇವೆ’ ಎಂದು ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯಾಧಿಕಾರಿಗಳಾದ ಡಾ.ಹೆಚ್.ಆರ್.ತಿಮ್ಮಯ್ಯ ತಿಳಿಸಿದ್ದಾರೆ.
ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…