ಜನ ಮನದ ನಾಡಿ ಮಿಡಿತ

Advertisement

ಪಾನೀರ್: ಕಥೊಲಿಕ್ ಸಭಾದಿಂದ ಪ್ರತಿಭಾ ಪುರಸ್ಕಾರ-2025′ ಕಾರ್ಯಕ್ರಮ

ಉಳ್ಳಾಲದ ಪಾನೀರ್ ಮೆರ್ಸಿಯಮ್ಮ ಇಗರ್ಜಿ ವತಿಯಿಂದ ಕಥೊಲಿಕ್ ಸಭಾ ಪಾನೀರ್ ಘಟಕದ ಆಶ್ರಯದಲ್ಲಿ ಪ್ರತಿಭಾ ಪುರಸ್ಕಾರ-2025′ ಕಾರ್ಯಕ್ರಮ ಚರ್ಚ್ ಸಭಾಂಗಣದಲ್ಲಿ ನಡೆಯಿತು.

ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಪ್ರದೀಪ್ ಡಿಸೋಜ ಪ್ರತಿಭಾ ಪುರಸ್ಕಾರ-2025′ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ಪ್ರತಿಭೆ ಇದ್ದವರೆಗೆ ಸರ್ಕಾರಿ ಮಟ್ಟದಲ್ಲಿ ಸಾಕಷ್ಟು ಅವಕಾಶ ಇದ್ದು ಪ್ರಯತ್ನಿಸಿದರೆ ಸುಲಭವಾಗಿ ಕೆಲಸ ಪಡೆಯಲು ಸಾಧ್ಯ. ಆದರೆ ಸಮುದಾಯದ ಯುವಕರು ಶೈಕ್ಷಣಿಕವಾಗಿ ಸಾಕಷ್ಟು ಅಭಿವೃದ್ಧಿ ಹೊಂದಿದರೂ ಸರ್ಕಾರಿ ಕೆಲಸ ಪಡೆಯುವಲ್ಲಿ, ಸರ್ಕಾರಿ ಕೆಲಸ ಮಾಡಿಸುವಲ್ಲಿ ತೀರಾ ಹಿಂದುಳಿದ ಕಾರಣ ಖಾಸಗಿ ಕಂಪನಿ ಅಥವಾ ವಿದೇಶದಲ್ಲಿ ಕೆಲಸ ಅವಲಂಭಿಸುವಂತಾಗಿದೆ ಎಂದು ಅಭಿಪ್ರಾಯಪಟ್ಟರು.

ಈ ಸಂದರ್ಭ ಎಸ್ಸೆಸ್ಸೆಎಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ಉನ್ನತ ಶಿಕ್ಷಣ ಮತ್ತು ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಅಧ್ಯಕ್ಷತೆ ವಹಿಸಿದ್ದ ಪಾನೀರ್ ಮೆರ್ಸಿಯಮ್ಮ ಇಗರ್ಜಿಯ ಧರ್ಮಗುರು ಫಾ.ವಿಕ್ಟರ್ ಡಿಮೆಲ್ಲೋ ಮಾತನಾಡಿ, ಸಮುದಾಯದ ಯುವಕರು ಸೇವೆಯಲ್ಲಿ ಮುಂದಿದ್ದರೂ ನಮ್ಮ ಹಕ್ಕು ಪಡೆಯುವಲ್ಲಿ ಹಿಂದಿದ್ದೇವೆ, ಸರ್ಕಾರಿ ಕೆಲಸ ಪಡೆಯಲು ಕಷ್ಟಪಡಬೇಕು. ಆದರೆ ಒಂದು ಬಾರಿ ಪಡೆದರೆ ನಿವೃತ್ತಿ ಬಳಿಕವೂ ಪ್ರಯೋಜನ ಸಿಗುತ್ತದೆ ಎಂದರು. ಚರ್ಚ್ ಪಾಲನಾ ಮಂಡಳಿ ಉಪಾಧ್ಯಕ್ಷೆ ಸರಿಟಾ ಡಿಸೋಜ, ಚರ್ಚ್ ಪಾಲನಾ ಮಂಡಳಿ ಕಾರ್ಯದರ್ಶಿ ಗ್ರೆಟ್ಟಾ ಡಿಕುನ್ಹಾ, ದಯಾಮಾತೆ ಚರ್ಚ್ ಮಾಜಿ ಉಪಾಧ್ಯಕ್ಷ ಫ್ರಾಂಕಿ ಫ್ರಾನ್ಸಿಸ್ ಕುಟಿನ್ಹ, ಕಾರ್ಯಕ್ರಮ ಸಂಯೋಜಕ ಇಯಾನ್ ಮೊಂತೆರೋ ಮೊದಲಾದವರು ಉಪಸ್ಥಿತರಿದ್ದರು. ಐವನ್ ಮೊಂತೆರೋ ಸ್ವಾಗತಿಸಿದರು. ರುವಿತಾ ಮೆನೇಜಸ್ ವಿದ್ಯಾರ್ಥಿಗಳ ಹೆಸರು ವಾಚಿಸಿದರು. ವೈಲೆಟ್ ಡಿಸೋಜ ವಂದಿಸಿದರು. ಅಶ್ವಿನ್ ಮೊಂತೆರೋ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!