ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ :ತೆಂಕುತಿಟ್ಟಿನ ಹಿರಿಯ ಕಲಾವಿದ, ಬಣ್ಣದ ವೇಷಧಾರಿ ಸಿದ್ದಕಟ್ಟೆ ಸದಾಶಿವ ಶೆಟ್ಟಿಗಾರ್ ಇಂದು ನಿಧನ

ತೆಂಕುತಿಟ್ಟಿನ ಹಿರಿಯ ಕಲಾವಿದ, ಬಣ್ಣದ ವೇಷಧಾರಿ ಸಿದ್ದಕಟ್ಟೆ ಸದಾಶಿವ ಶೆಟ್ಟಿಗಾರ್ ಇಂದು ಮಧ್ಯಾಹ್ನ ಅಸೌಖ್ಯದಿಂದ ಮಂಗಳೂರು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಬಂಟ್ವಾಳ ತಾಲೂಕಿನ ಸಂಗಬೆಟ್ಟು ಗ್ರಾಮದ ಮಂಚಕಲ್ಲು ನಿವಾಸಿಯಾಗಿದ್ದ ಸದಾಶಿವ ಶೆಟ್ಟಿಗಾರ್ ಅವರಿಗೆ 60 ವರ್ಷ ವಯಸ್ಸಾಗಿತ್ತು. ಸುಮಾರು ಮೂರು ದಶಕಗಳಿಗೂ ಅಧಿಕ ಕಾಲ ವಿವಿಧ ಮೇಳಗಳಲ್ಲಿ ಬಣ್ಣದ ವೆಷಧಾರಿಯಾಗಿ ತಿರುಗಾಟ ನಡೆಸಿದ್ದಾರೆ. ಕಳೆದ ಕೆಲವು ತಿಂಗಳ ಹಿಂದಷ್ಟೇ ಹನುಮಗಿರಿ ಮೇಳ ತಿರುಗಾಟ ಮುಗಿಸಿದ ನಂತರ ಅವರು ನಿವೃತ್ತಿಯನ್ನೂ ಘೋಷಣೆ ಮಾಡಿದ್ದರು. ಯಕ್ಷಗಾನ ಗುರುಗಳಾದ ರೆಂಜಾಳ ರಾಮಕೃಷ್ಣ ರಾವ್, ಬಣ್ಣದ ಮಹಾಲಿಂಗ ಅವರಿಂದ ನಾಟ್ಯಾಭ್ಯಾಸ ಕಲಿತು ಕಟೀಲು, ಧರ್ಮಸ್ಥಳ, ಹೊಸನಗರ, ಎಡನೀರು, ಹನುಮಗಿರಿ ಮೊದಲಾದ ಮೇಳಗಳಲ್ಲಿ ತಿರುಗಾಟ ನಡೆಸಿದ್ದರು. ಹತ್ತು ದಿನಗಳ ಹಿಂದಷ್ಟೇ ಮಂಗಳೂರು ವಿಶ್ವವಿದ್ಯಾಲಯದ ಡಾ. ಪಿ. ದಯಾನಂದ ಪೈ ಮತ್ತು ಪಿ ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರ ವತಿಯಿಂದ ಯಕ್ಷಮಂಗಳ ಪ್ರಶಸ್ತಿ ಸ್ವೀಕರಿಸಿದ್ದರು. ಪೇಜಾವರ ಶ್ರೀಗಳ ಜನುಮದಿನದ ಶ್ರೀರಾಮ ವಿಠಲ ಪ್ರಶಸ್ತಿ, ಕಟೀಲು ಗೋಪಾಲಕೃಷ್ಣ ಪ್ರಶಸ್ತಿ, ಕೀಲಾರು ಗೋಪಾಲಕೃಷ್ಣಯ್ಯ ಪ್ರಶಸ್ತಿ, ಅರಸಂಕಲ ಮೊದಲಾದ ಪ್ರಶಸ್ತಿಗಳನ್ನು ಪಡೆದಿದ್ದರೆ. ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!