ಉಡುಪಿ ನಗರ ಪೊಲೀಸ್ ಠಾಣೆ ಸಮೀಪದ ಕಂದಾಯ ಇಲಾಖೆಯ ಸರ್ಕಾರಿ ವಸತಿ ಸಮುಚ್ಛಯದಲ್ಲಿ ಜುಲೈ 19 ರ ತಡರಾತ್ರಿಯಿಂದ ಭಾನುವಾರ ಮುಂಜಾನೆಯ ನಡುವೆ ಕಳ್ಳತನ ನಡೆದಿದೆ.
ವಸತಿ ಸಮುಚ್ಛಯದ ಆವರಣದಲ್ಲಿನ ಸಿಸಿಟಿವಿ ದೃಶ್ಯಾವಳಿಯ ಪ್ರಕಾರ, 3 ರಿಂದ 4 ದುಷ್ಕರ್ಮಿಗಳ ಗುಂಪು ಈ ಕೃತ್ಯದಲ್ಲಿ ಭಾಗಿಯಾಗಿರುವುದು ಕಂಡುಬಂದಿದೆ. ಕಳ್ಳರು ಕನಿಷ್ಠ ಮೂರು ಮನೆಗಳಿಗೆ ನುಗ್ಗಿ, ಸಾವಿರಾರು ರೂಪಾಯಿ ಮೌಲ್ಯದ ವಸ್ತುಗಳನ್ನು ಕಳವು ಮಾಡಿದ್ದಾರೆ ಎಂದು ವರದಿಯಾಗಿದೆ.
ಈ ವಸತಿ ಸಮುಚ್ಛಯದಲ್ಲಿ ನಡೆದ ಎರಡನೇ ಘಟನೆ ಇದಾಗಿದೆ. ಸುಮಾರು ಒಂದು ವರ್ಷದ ಹಿಂದೆ ಇದೇ ವಸತಿ ಸಮುಚ್ಛಯಕ್ಕೆ ನುಗ್ಗಿದ ಕಳ್ಳರು, ಲಕ್ಷಾಂತರ ಮೌಲ್ಯದ ಚಿನ್ನಾಭರಣಗಳನ್ನು ಕದ್ದೊಯ್ದಿದ್ದರು. ಆ ಸಮಯದಲ್ಲಿ ಇಲ್ಲಿ ಸಿಸಿಟಿವಿ ಕಣ್ಗಾವಲು ಇರಲಿಲ್ಲ. ಆ ಘಟನೆಯ ನಂತರ, ನಿವಾಸಿಗಳೇ ಸೇರಿ ಕ್ಯಾಮೆರಾಗಳನ್ನು ಅಳವಡಿಸಿದ್ದರು. ವರ್ಷದ ಹಿಂದಿನ ಕಳ್ಳತನ ಪ್ರಕರಣದ ಆರೋಪಿಗಳನ್ನು ಇನ್ನೂ ಪತ್ತೆಯಾಗಿಲ್ಲ.
ಅದಾಗಲೇ ಮತ್ತೊಮ್ಮೆ ಕಳ್ಳತನ ನಡೆದಿರುವುದು ಸ್ಥಳೀಯ ನಿವಾಸಿಗಳಲ್ಲಿ ಆತಂಕ ಸೃಷ್ಟಿಸಿದೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…