ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಒಬ್ಬರು ಬಾಡಿಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಉತ್ತರಕನ್ನಡ ನಿವಾಸಿ ಕೀರಪ್ಪ (54) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದಾರೆ.ಅವರು ಶಿರಸಿ ಠಾಣೆಯಿಂದ ಕಳೆದ 5 ತಿಂಗಳ ಹಿಂದೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದರು. ಇವರ ಕುಟುಂಬ ಸದಸ್ಯರು ಉತ್ತರ ಕನ್ನಡದಲ್ಲೇ ಇದ್ದು,ಇವರು ಒಬ್ಬರೇ ಇಲ್ಲಿ ಇದ್ದರು. ಬಂಟ್ವಾಳ ಪೇಟೆಯಲ್ಲಿರುವ ಚಿನ್ನದ ಉದ್ಯಮಿಯೋರ್ವರಿಗೆ ಸೇರಿದ ಮನೆಯಲ್ಲಿ ಬಾಡಿಗೆಗೆ ವಾಸವಾಗಿದ್ದರು.
ಬೆಳಿಗ್ಗೆಯಿಂದ ಕರ್ತವ್ಯ ಕ್ಕೆ ಹಾಜರಾಗದೆ ಇದ್ದ ಸಬ್ ಇನ್ಸ್ ಪೆಕ್ಟರ್ ಅವರು ಪೋನ್ ಕಾಲ್ ಕೂಡ ರಿಸೀವ್ ಮಾಡದೆ ಇದ್ದ ಕಾರಣದಿಂದ ಸಂಶಯಗೊಂಡ ಪೋಲೀಸರು ಇಂದು ಸಂಜೆ ವೇಳೆ ಅವರು ವಾಸಿಸುವ ಬಾಡಿಗೆ ಮನೆಗೆ ಹೋಗಿ ನೋಡಿದಾಗ ಬೀಗ. ಹಾಕಿದ ಸ್ಥಿತಿಯಲ್ಲಿ ಇತ್ತು ಕರೆದಾಗ ಯಾವುದೇ ಸ್ಪಂದನೆ ನೀಡದೆ ಇದ್ದಾಗ , ಕಿಟಕಿಯಲ್ಲಿ ನೋಡಿದಾಗ ಕೋಣೆಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಕಂಡು ಬಂದಿದ್ದಾರೆ.ಆತ್ಮಹತ್ಯೆಗೆ ಸ್ಪಷ್ಟವಾದ ಕಾರಣ ತಿಳಿದು ಬಂದಿಲ್ಲ.ಸ್ಥಳಕ್ಕೆ ಆಡಿಸನಲ್ ಎಸ್.ಪಿ. ಬೇಟಿ ನೀಡಿದ್ದಾರೆ.
ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…