ಜನ ಮನದ ನಾಡಿ ಮಿಡಿತ

Advertisement

ಕುಂದಾಪುರ: 5.6 ಲಕ್ಷ ಮೌಲ್ಯದ ಅಡಿಕೆ ಕಳ್ಳತನ; ಪೊಲೀಸರಿಂದ ನಾಲ್ವರ ಬಂಧನ

ಕುಂದಾಪುರದಲ್ಲಿ ಜು. 22ರಂದು ಬೈಂದೂರು ಪೊಲೀಸ್ ಠಾಣೆ ವ್ಯಾಪ್ತಿಯ ಶಿರೂರು ಸಮೀಪದ ಹಡವಿನಗದ್ದೆಯಲ್ಲಿರುವ ಮಸೂದ್ ಪಟೇಲ್ ಭಟ್ಕಳ ಅವರ ರೋಯಲ್ ಪ್ಲಾಂಟೇಶನ್ ಗೋದಾಮಿನಿಂದ ಸುಮಾರು 5.6 ಲಕ್ಷ ರೂಪಾಯಿ ಮೌಲ್ಯದ ಅಡಿಕೆ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಕಡಬ ತಾಲೂಕಿನ ನೂಜಿ ಬಾಳ್ತಿಲದ ಸಂತೋಷ (35), ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಹಿಂಡಿನಗೆರೆಯ ಪ್ರಸ್ತುತ ಭಟ್ಕಳದಲ್ಲಿ ವಾಸವಾಗಿರುವ ಶಾನೂರ್ ಬಾಬುಲಾಲ್ ನವಾಜ್ ಘಜ್ನಿ (31), ಭಟ್ಕಳದ ಖ್ವಾಜಾ ಮೊಹಮ್ಮದ್ (26) ಮತ್ತು ಮೊಹಮ್ಮದ್ ಸಾದಿಕ್ (27) ಭಂಧಿತ ಆರೋಪಿಗಳು. ಪೊಲೀಸರು 455 ಕೆಜಿ ಕಳುವಾದ ಅಡಿಕೆ ಮತ್ತು ಕಳವು ಮಾಡಿದ ಸರಕುಗಳನ್ನು ಸಾಗಿಸಲು ಬಳಸಿದ ಕಾರನ್ನು ವಶಪಡಿಸಿಕೊಂಡಿದ್ದಾರೆ. ಪ್ಲಾಂಟೇಶನ್‌ನ ಮಾಲೀಕ ಮಸೂದ್ ಪಟೇಲ್ ಭಟ್ಕಳ ಅವರು ಯಡ್ತರೆ ಗ್ರಾಮದ ಹಡಿನಗದ್ದೆಯಲ್ಲಿ 60 ಎಕರೆ ಭೂಮಿಯಲ್ಲಿ ಕೃಷಿ ಮಾಡಿಕೊಂಡಿದ್ದಾರೆ. ತೋಟದಲ್ಲಿ ಬೆಳೆದ ಸುಮಾರು 200 ಚೀಲ ಒಣಗಿಸಿದ ಸಿಪ್ಪೆ ಸಹಿತ ಅಡಿಕೆಯನ್ನು ಪ್ಲಾಸ್ಟಿಕ್ ಚೀಲಗಳಲ್ಲಿ ಗೋದಾಮಿನಲ್ಲಿ ಸಂಗ್ರಹಿಸಿದ್ದರು. ಮೇ 22 ರ ಬೆಳಗ್ಗೆ, ಗೋದಾಮಿನ ಮುಂಭಾಗದ ಕಬ್ಬಿಣದ ಗ್ರಿಲ್ ಲಾಕ್ ಮುರಿದಿರುವುದನ್ನು ಗಮನಿಸಿದ ಅವರು, ಒಳಗೆ ಹೋಗಿ ನೋಡಿದಾಗ 200 ಚೀಲ ಅಡಿಕೆ ಕಳ್ಳತನವಾಗಿರುವುದು ಕಂಡುಬಂದಿದೆ. ಬೈಂದೂರು ಪರಿಸರದಲ್ಲಿ ಅಡಿಕೆ ಕಳ್ಳತನ ಪ್ರಕರಣಗಳು ವರದಿಯಾದ ಹಿನ್ನಲೆಯಲ್ಲಿ, ಆರೋಪಿಗಳ ಪತ್ತೆಗೆ ಉಡುಪಿ ಜಿಲ್ಲಾ ಎಸ್‌ಪಿ ಹರಿರಾಮ್ ಶಂಕರ್ ಅವರ ಮಾರ್ಗದರ್ಶನದಲ್ಲಿ ವಿಶೇಷ ತನಿಖೆಯನ್ನು ಪ್ರಾರಂಭಿಸಲಾಯಿತು. ಆರೋಪಿಗಳ ಪತ್ತೆಗಾಗಿ ಕುಂದಾಪುರ ಎಎಸ್‌ಪಿ ಸುಧಾಕರ ನಾಯ್ಕ, ಡಿವೈಎಸ್‌ಪಿ ಹೆಚ್ ಡಿ ಕುಲಕರ್ಣಿ ಮತ್ತು ಪೊಲೀಸ್ ವೃತ್ತ ನೀರಿಕ್ಷಕ ಸವೀತ್ರ ತೇಜ್ ಅವರ ನೇತೃತ್ವದಲ್ಲಿ ಎರಡು ವಿಶೇಷ ತಂಡಗಳನ್ನು ರಚಿಸಲಾಯಿತು. ವಿವಿಧ ಠಾಣೆಗಳ ಪಿಎಸ್‌ಐಗಳಾದ ತಿಮ್ಮೇಶ್ ಬಿ.ಎನ್, ನವೀನ ಬೋರಕರ, ವಿನಯ ಅವರು ತಂಡಗಳ ನೇತೃತ್ವ ವಹಿಸಿದ್ದರು. ಸಿಬ್ಬಂದಿಗಳಾದ ನಾಗೇಂದ್ರ, ಸುರೇಶ್, ಚಿದಾನಂದ, ಮಾಳಪ್ಪ ದೇಸಾಯಿ, ಪರಯ್ಯ ಮಠಪತಿ ರವೀಂದ್ರ, ಅಶೋಕ ಮತ್ತು ಚಂದ್ರ ತಂಡದಲ್ಲಿದ್ದರು.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!