ಕುಂದಾಪುರದಲ್ಲಿ ಜು. 22ರಂದು ಬೈಂದೂರು ಪೊಲೀಸ್ ಠಾಣೆ ವ್ಯಾಪ್ತಿಯ ಶಿರೂರು ಸಮೀಪದ ಹಡವಿನಗದ್ದೆಯಲ್ಲಿರುವ ಮಸೂದ್ ಪಟೇಲ್ ಭಟ್ಕಳ ಅವರ ರೋಯಲ್ ಪ್ಲಾಂಟೇಶನ್ ಗೋದಾಮಿನಿಂದ ಸುಮಾರು 5.6 ಲಕ್ಷ ರೂಪಾಯಿ ಮೌಲ್ಯದ ಅಡಿಕೆ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಕಡಬ ತಾಲೂಕಿನ ನೂಜಿ ಬಾಳ್ತಿಲದ ಸಂತೋಷ (35), ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಹಿಂಡಿನಗೆರೆಯ ಪ್ರಸ್ತುತ ಭಟ್ಕಳದಲ್ಲಿ ವಾಸವಾಗಿರುವ ಶಾನೂರ್ ಬಾಬುಲಾಲ್ ನವಾಜ್ ಘಜ್ನಿ (31), ಭಟ್ಕಳದ ಖ್ವಾಜಾ ಮೊಹಮ್ಮದ್ (26) ಮತ್ತು ಮೊಹಮ್ಮದ್ ಸಾದಿಕ್ (27) ಭಂಧಿತ ಆರೋಪಿಗಳು. ಪೊಲೀಸರು 455 ಕೆಜಿ ಕಳುವಾದ ಅಡಿಕೆ ಮತ್ತು ಕಳವು ಮಾಡಿದ ಸರಕುಗಳನ್ನು ಸಾಗಿಸಲು ಬಳಸಿದ ಕಾರನ್ನು ವಶಪಡಿಸಿಕೊಂಡಿದ್ದಾರೆ. ಪ್ಲಾಂಟೇಶನ್ನ ಮಾಲೀಕ ಮಸೂದ್ ಪಟೇಲ್ ಭಟ್ಕಳ ಅವರು ಯಡ್ತರೆ ಗ್ರಾಮದ ಹಡಿನಗದ್ದೆಯಲ್ಲಿ 60 ಎಕರೆ ಭೂಮಿಯಲ್ಲಿ ಕೃಷಿ ಮಾಡಿಕೊಂಡಿದ್ದಾರೆ. ತೋಟದಲ್ಲಿ ಬೆಳೆದ ಸುಮಾರು 200 ಚೀಲ ಒಣಗಿಸಿದ ಸಿಪ್ಪೆ ಸಹಿತ ಅಡಿಕೆಯನ್ನು ಪ್ಲಾಸ್ಟಿಕ್ ಚೀಲಗಳಲ್ಲಿ ಗೋದಾಮಿನಲ್ಲಿ ಸಂಗ್ರಹಿಸಿದ್ದರು. ಮೇ 22 ರ ಬೆಳಗ್ಗೆ, ಗೋದಾಮಿನ ಮುಂಭಾಗದ ಕಬ್ಬಿಣದ ಗ್ರಿಲ್ ಲಾಕ್ ಮುರಿದಿರುವುದನ್ನು ಗಮನಿಸಿದ ಅವರು, ಒಳಗೆ ಹೋಗಿ ನೋಡಿದಾಗ 200 ಚೀಲ ಅಡಿಕೆ ಕಳ್ಳತನವಾಗಿರುವುದು ಕಂಡುಬಂದಿದೆ. ಬೈಂದೂರು ಪರಿಸರದಲ್ಲಿ ಅಡಿಕೆ ಕಳ್ಳತನ ಪ್ರಕರಣಗಳು ವರದಿಯಾದ ಹಿನ್ನಲೆಯಲ್ಲಿ, ಆರೋಪಿಗಳ ಪತ್ತೆಗೆ ಉಡುಪಿ ಜಿಲ್ಲಾ ಎಸ್ಪಿ ಹರಿರಾಮ್ ಶಂಕರ್ ಅವರ ಮಾರ್ಗದರ್ಶನದಲ್ಲಿ ವಿಶೇಷ ತನಿಖೆಯನ್ನು ಪ್ರಾರಂಭಿಸಲಾಯಿತು. ಆರೋಪಿಗಳ ಪತ್ತೆಗಾಗಿ ಕುಂದಾಪುರ ಎಎಸ್ಪಿ ಸುಧಾಕರ ನಾಯ್ಕ, ಡಿವೈಎಸ್ಪಿ ಹೆಚ್ ಡಿ ಕುಲಕರ್ಣಿ ಮತ್ತು ಪೊಲೀಸ್ ವೃತ್ತ ನೀರಿಕ್ಷಕ ಸವೀತ್ರ ತೇಜ್ ಅವರ ನೇತೃತ್ವದಲ್ಲಿ ಎರಡು ವಿಶೇಷ ತಂಡಗಳನ್ನು ರಚಿಸಲಾಯಿತು. ವಿವಿಧ ಠಾಣೆಗಳ ಪಿಎಸ್ಐಗಳಾದ ತಿಮ್ಮೇಶ್ ಬಿ.ಎನ್, ನವೀನ ಬೋರಕರ, ವಿನಯ ಅವರು ತಂಡಗಳ ನೇತೃತ್ವ ವಹಿಸಿದ್ದರು. ಸಿಬ್ಬಂದಿಗಳಾದ ನಾಗೇಂದ್ರ, ಸುರೇಶ್, ಚಿದಾನಂದ, ಮಾಳಪ್ಪ ದೇಸಾಯಿ, ಪರಯ್ಯ ಮಠಪತಿ ರವೀಂದ್ರ, ಅಶೋಕ ಮತ್ತು ಚಂದ್ರ ತಂಡದಲ್ಲಿದ್ದರು.
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…
ಸ್ವಾಮಿ ವಿವೇಕಾನಂದ ಯುವಕ ಸಂಘ ಹಾಗೂ ಅಯ್ಯಪ್ಪ ಮಂದಿರ ಮೊಡಂಕಾಪ್, 2025 - 26 ರ ಅಧ್ಯಕ್ಷರಾಗಿ ಸುನಿಲ್ ಎನ್…
ಬಂಟ್ವಾಳ ತಾಲೂಕಿನ ಬಿ.ಮೂಡ ಗ್ರಾಮದ ನಂದರಬೆಟ್ಟು ಎಂಬಲ್ಲಿ ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಇಶಾಕ್ ಹಾಗೂ ಅಬ್ದುಲ್ಲಾ ಯಾನೆ…
ಪುತ್ತೂರಿನ ಪ್ರಕರಣ ಹಾಗೂ ಕಾರ್ಕಳದ ಅಭಿಷೇಕ್ ಆಚಾರ್ಯ ಅವರ ಆತ್ಮಹತ್ಯೆಗೆ ಸಂಬಂಧಿಸಿದ ವಿಷಯವಾಗಿ ಮಾನ್ಯ ಗ್ರಹಸಚಿವರಾದ ಶ್ರೀ ಜಿ ಪರಮೇಶ್ವರ್…