ಸುಳ್ಯದ ಯುವಕನೋರ್ವ ಕೆರೆಯಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ಕೇರಳದ ಕಣ್ಣೂರಿನಲ್ಲಿ ನಡೆದಿದೆ.

ಸುಳ್ಯ ತಾಲೂಕಿನ ಮಡಪ್ಪಾಡಿ ಗ್ರಾಮದ ಬಾಳಿಕಲ ನಿವಾಸಿ, ಸುಳ್ಯದ ನಿವೃತ್ತ ತಾಲೂಕು ಆರೋಗ್ಯಾಧಿಕಾರಿ ಡಾ. ನಂದ ಕುಮಾರ್ ಅವರ ಪುತ್ರ, ಮಂಗಳೂರಿನ ಖಾಸಗಿ ಡಂಟಲ್ ಕಾಲೇಜಿನಲ್ಲಿ ಪ್ರಥಮ ವರ್ಷದ ದಂತ ವಿಜ್ಞಾನ ಕಲಿಯುತ್ತಿದ್ದ ಆಸ್ತಿಕ್ ರಾಘವ್ ಮೃತ ದುರ್ದೈವಿ. ಆಸ್ತಿಕ್ ರಾಘವ್ ಮಂಗಳೂರಿನಿಂದ ತನ್ನ ಗೆಳೆಯನೊಂದಿಗೆ ಕೇರಳದ ಕಣ್ಣೂರಿನ ಸಹಪಾಠಿ ಮನೆಗೆ ರವಿವಾರ ಬೆಳಗ್ಗೆ ಹೋಗಿದ್ದಾರೆ. ಬಳಿಕ ಅವರು ಮನೆ ಪಕ್ಕದ ಕೆರೆಗೆ ಸ್ನಾನಕ್ಕೆ ಹೋದಾಗ ಆಸ್ತಿಕ್ ಕಾಲು ಜಾರಿ ನೀರಿಗೆ ಬಿದ್ದು ಣಿರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ. ಮೃತರು ತಂದೆ, ತಾಯಿ, ಸಹೋದರಿಯನ್ನು ಅಗಲಿದ್ದಾರೆ.



