ಹಿಮಾಚಲದ ಪ್ರದೇಶದಲ್ಲಿ ಗುಡ್ಡ ಕುಸಿತದ ಪರಿಣಾಮ ಬಂಟ್ವಾಳದಿಂದ ತೀರ್ಥಕ್ಷೇತ್ರಗಳ ಸಂದರ್ಶನಕ್ಕೆ ತೆರಳಿರುವ ಸುಮಾರು 47 ಮಂದಿ ಪ್ರಯಾಣಿಕರು ಹೆದ್ದಾರಿ ಬ್ಲಾಕ್ನಲ್ಲಿ ಸಿಲುಕಿ ಹಾಕಿಕೊಂಡಿದ್ದು, ಎಲ್ಲರು ಸುರಕ್ಷಿತವಾಗಿ ಇದ್ದಾರೆ ಎಂದು ತಿಳಿದು ಬಂದಿದೆ.
ಹಿಮಾಚಲ ಪ್ರದೇಶದ ಶಿಮ್ಲಾ ಮನಾಲಿ ಹೆದ್ದಾರಿಯಲ್ಲಿ ದೊಡ್ಡ ಮಟ್ಟದ ಭೂ ಕುಸಿತ ಉಂಟಾಗಿದ್ದು, ಒಂದಷ್ಟು ವಾಹನಗಳು ಮಣ್ಣಿನಡಿಗೆ ಸಿಲುಕಿದೆ ಎನ್ನಲಾಗಿದೆ. ಆದರೆ ಬಂಟ್ವಾಳದ ಪ್ರಯಾಣಿಕರಿದ್ದ ಮೂರು ವಾಹನಗಳು ಕುಸಿತದ ಸ್ಥಳಕ್ಕಿಂತ ಬಹಳ ದೂರದಲ್ಲಿ ಇರುವ ಹಿನ್ನೆಲೆ ಯಾವುದೇ ಅಪಾಯವಗಿಲ್ಲ.
ಸುಮಾರು 3 ಕಿ.ಮೀ. ವರೆಗೆವಾಹನಗಳ ಸಾಲು ನಿಂತಿದ್ದು, ಮಣ್ಣು ತೆರವು ಕಾರ್ಯ ಭರದಿಂದ ಸಾಗುತ್ತಿದೆ ಎಂದು ಪ್ರವಾಸಿಗರು ತಿಳಿಸಿದ್ದಾರೆ. ಹೆದ್ದಾರಿಯಲ್ಲಿ ಸಾಕಷ್ಟು ಅಂಗಡಿ ಮುಂಗಟ್ಟುಗಳು ಇರುವುದರಿಂದ ಎಷ್ಟು ಹೊತ್ತು ಬ್ಲಾಕ್ ಇದ್ದರೂ ಊಟ, ತಿಂಡಿಗೆ ಯಾವುದೇ ಸಮಸ್ಯೆಯಿಲ್ಲ ಎಂದು ಮಾಹಿತಿ ನೀಡಿದ್ದಾರೆ.
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…
ಸ್ವಾಮಿ ವಿವೇಕಾನಂದ ಯುವಕ ಸಂಘ ಹಾಗೂ ಅಯ್ಯಪ್ಪ ಮಂದಿರ ಮೊಡಂಕಾಪ್, 2025 - 26 ರ ಅಧ್ಯಕ್ಷರಾಗಿ ಸುನಿಲ್ ಎನ್…
ಬಂಟ್ವಾಳ ತಾಲೂಕಿನ ಬಿ.ಮೂಡ ಗ್ರಾಮದ ನಂದರಬೆಟ್ಟು ಎಂಬಲ್ಲಿ ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಇಶಾಕ್ ಹಾಗೂ ಅಬ್ದುಲ್ಲಾ ಯಾನೆ…
ಪುತ್ತೂರಿನ ಪ್ರಕರಣ ಹಾಗೂ ಕಾರ್ಕಳದ ಅಭಿಷೇಕ್ ಆಚಾರ್ಯ ಅವರ ಆತ್ಮಹತ್ಯೆಗೆ ಸಂಬಂಧಿಸಿದ ವಿಷಯವಾಗಿ ಮಾನ್ಯ ಗ್ರಹಸಚಿವರಾದ ಶ್ರೀ ಜಿ ಪರಮೇಶ್ವರ್…