ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಮಿನಿ ಟಿಪ್ಪರ್ ಮತ್ತು ಕಾರು ಢಿಕ್ಕಿ; ಕಾರು ಚಾಲಕ ಮೃತ್ಯು

ವಿಟ್ಲ ಸಮೀಪದ ವೀರಕಂಬ ಗ್ರಾಮದ ಕೆಲಿಂಜ ಜಂಕ್ಷನ್‌ನಲ್ಲಿ ಮಿನಿ ಟಿಪ್ಪರ್ ಮತ್ತು ಕಾರು ನಡುವೆ ಭೀಕರ ಅಪಘಾತ ಸಂಭವಿಸಿ, ಕಾರಿನ ಚಾಲಕ ಮೃತಪಟ್ಟು, ಅವರ ಸಹೋದರಿ ಹಾಗೂ ಮಗು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಅನೀಶ್ ಅನಂತಾಡಿ (34) ಮೃತ ದುರ್ದೈವಿ. ಕಲ್ಲಡ್ಕದಿಂದ ವಿಟ್ಲ ಕಡೆಗೆ ತೆರಳುತ್ತಿದ್ದ ಆಲ್ಟೋ ಕಾರಿಗೆ, ವಿಟ್ಲದಿಂದ ಕಲ್ಲಡ್ಕ ಕಡೆಗೆ ಚಲಿಸುತ್ತಿದ್ದ ಮಿನಿ ಟಿಪ್ಪರ್ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಸ್ಥಳೀಯರು ಗಾಯಾಳುಗಳನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಗಂಭೀರ ಗಾಯಗೊಂಡ ಅನೀಶ್ ಅವರು ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ತಡರಾತ್ರಿ ಮೃತಪಟ್ಟಿದ್ದಾರೆ. ಅನೀಶ್ ಅವರು ಅನಂತಾಡಿ ಆಶ್ವತ್ತಡಿ ಮೂಲದವರು. ಅವರು ಕೇವಲ ಎರಡು ತಿಂಗಳ ಹಿಂದೆ ವಿವಾಹವಾಗಿದ್ದು, ಕುಟುಂಬದ ಸದಸ್ಯರನ್ನು ವಿಟ್ಲಕ್ಕೆ ಬಿಟ್ಟು ಬರಲು ಹೋಗುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!