ಮಂಗಳೂರಿನ ಶ್ರೀ ಗೋಕರ್ಣನಾಥೇಶ್ವರ ಶಿಕ್ಷಣ ಮಹಾವಿದ್ಯಾಲಯದಲ್ಲಿ ಜುಲೈ 18ರಂದು “ಆಟಿದ ಅಂಗಣ -2025” ಕಾರ್ಯಕ್ರಮವು ಬಹಳ ವಿಜೃಂಭಣೆಯಿಂದ ನಡೆಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಖ್ಯಾತ ನಾಟಿ ವೈದ್ಯರಾದ ಶ್ರೀ ಈಶ್ವರ ಪೂಜಾರಿ ಕಲಾಯಿ ಇವರು ಪರಿಸರದಲ್ಲಿ ದೊರಕುವ ಗಿಡಮೂಲಿಕೆಗಳ ಮಹತ್ವವನ್ನು ನೀಡಿದರು. ಆಟಿಯ ಮಹತ್ವದ ಕುರಿತು ಉಡುಪಿ ಸಮೂಹ ಶಿಕ್ಷಣ ಸಂಸ್ಥೆ ಮಣಿಪಾಲ ಇಲ್ಲಿನ ಸಹ ಪ್ರಾಧ್ಯಾಪಕಿ ಶ್ರೀಮತಿ ಅರ್ಪಿತಾ ಪ್ರಶಾಂತ್ ಶೆಟ್ಟಿ ಕಟಪಾಡಿ ಇವರು ಉಪನ್ಯಾಸ ನೀಡಿ ಈ ಕಾರ್ಯಕ್ರಮವು ಕೇವಲ ಅಂಗಣದೊಳಗೆ ಸೀಮಿತವಾಗದೆ ಇಲ್ಲಿನ ಸಂಸ್ಕೃತಿ ಸಂಸ್ಕಾರವನ್ನು ತಿಳಿದು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಆಗ ಮಾತ್ರ ಈ ಕಾರ್ಯಕ್ರಮಕ್ಕೆ ಮೆರುಗು ಎಂದು ಹೇಳಿದರು.
ಈ ಸಂದರ್ಭದಲ್ಲಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಸಂಚಾಲಕರಾದ ಶ್ರೀ ವಸಂತ ಕಾರಂದೂರು ವಹಿಸಿದ್ದರು. ಶ್ರೀ ವೆಂಕಟೇಶ ಶಿವಭಕ್ತಿ ಯೋಗಾ ಸಂಘದ ಉಪಾಧ್ಯಕ್ಷರಾದ ಡಾ. ಬಿ. ಜಿ. ಸುವರ್ಣ, ಸದಸ್ಯರಾದ ಶ್ರೀ ಜಯರಾಮ ಕಾರಂದೂರು, ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಜಯಪ್ರಕಾಶ್, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ರಘುರಾಜ್ ಕದ್ರಿ, ಪ್ರಾಂಶುಪಾಲರಾದ ಪ್ರೊ. ಉದಯ್ ಕುಮಾರ್ ಬಿ., ಸಾಂಸ್ಕೃತಿಕ ಸಂಘದ ಮುಖ್ಯಸ್ಥೆ ಶ್ರೀಮತಿ ಸುಚಿತ್ರಾ ಶೆಟ್ಟಿ, ವಿದ್ಯಾರ್ಥಿ ಸಂಘದ ಅಧ್ಯಕ್ಷ ಶ್ರೀ ಕಿರಣ್ ಶೆಟ್ಟಿ, ಕಾರ್ಯದರ್ಶಿ ಶ್ರೀಮತಿ ಯಶಸ್ವಿನಿ, ಸಾಂಸ್ಕೃತಿಕ ಕಾರ್ಯದರ್ಶಿ ಶ್ರೀ ರಾಜೇಶ್ ಗೌಡ, ಕ್ರೀಡಾ ಕಾರ್ಯದರ್ಶಿ ಶ್ರೀ ಶರತ್ ಬಿ. ಎಮ್. ಉಪಸ್ಥಿತರಿದ್ದರು. ಕಿರಣ್ ಶೆಟ್ಟಿ ಸ್ವಾಗತಿಸಿದರು, ಯಶಸ್ವಿನಿ ವಂದಿಸಿದರು, ದೀಕ್ಷಿತಾ ಕಾರ್ಯಕ್ರಮ ನಿರ್ವಹಿಸಿದರು.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…