ರಾಜ್ಯದಲ್ಲಿ ವಿಐಪಿ ಸಂಚಾರದ ವೇಳೆ ಸೈರನ್ ಬಳಕೆಗೆ ಕಡಿವಾಣ ಹಾಕುವ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.
ಸೈರನ್ಗಳನ್ನು ಕೇವಲ ತುರ್ತು ಸೇವಾ ವಾಹನಗಳಾದ ಅಂಬ್ಯುಲೆನ್ಸ್, ಪೊಲೀಸ್ ವಾಹನಗಳು ಮತ್ತು ಅಗ್ನಿಶಾಮಕ ವಾಹನಗಳು ಅನಿವಾರ್ಯ ಪರಿಸ್ಥಿತಿಗಳಲ್ಲಿ ಮಾತ್ರ ಬಳಸಬೇಕು. ಈ ಅದೇಶವನ್ನು ಘಟಕಾಧಿಕಾರಿಗಳು ಸಂಪೂರ್ಣವಾಗಿ ಪಾಲಿಸುವಂತೆ ತಮ್ಮ ಅಧೀನದ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಸೂಚಿಸುವುದು ಎಂದು ಸೂಚನೆ ನೀಡಲಾಗಿದೆ. ಗಣ್ಯ ವ್ಯಕ್ತಿಗಳ ಸಂಚರಣೆ ಸಮಯದಲ್ಲಿ ಅನವಶ್ಯಕವಾಗಿ ಸೈರನ್ ಬಳಕೆ ಮಾಡುವುದರಿಂದ ಗಣ್ಯ ವ್ಯಕ್ತಿಗಳು ಯಾವ ರಸ್ತೆಯಲ್ಲಿ ಚಲಿಸುತ್ತಿದ್ದಾರೆ ಎಂಬ ಬಗ್ಗೆ ಅನಧಿಕೃತ ವ್ಯಕ್ತಿಗಳಿಗೆ ಮಾಹಿತಿ ರವಾನೆಯಾಗುವುದಲ್ಲದೆ ಗಣ್ಯ ವ್ಯಕ್ತಿಗಳಿಗೆ ಅಪಾಯ ಉಂಟಾಗುವ ಸಾಧ್ಯತೆ ಇರುತ್ತದೆ. ಇದಲ್ಲದೆ, ಅನಗತ್ಯ ಸೈರನ್ ಬಳಕೆಯಿಂದ ಸಾರ್ವಜನಿಕರಿಗೆ ತೊಂದರೆಯಾಗುವುದಲ್ಲದೇ ಶಬ್ದ ಮಾಲಿನ್ಯವೂ ಉಂಟಾಗುತ್ತದೆ.
ಸಾರ್ವಜನಿಕ ರಸ್ತೆಗಳ ಮೇಲೆ ಹಠಾತ್ತಾಗಿ ಸೈರನ್ ಬಳಸುವುದರಿಂದ ಇತರ ವಾಹನ ಚಾಲಕರಿಗೆ ದ್ವಂದ್ವ ಉಂಟಾಗಿ ಯಾವ ಕಡೆಗೆ ಚಲಿಸಬೇಕೆಂಬುದು ತಿಳಿಯದೆ ವಾಹನವನ್ನು ಅಡ್ಡಾದಿಡ್ಡಿಯಾಗಿ ಚಲಿಸಿ ಬೆಂಗಾವಲು ಮತ್ತು ಇತರ ವಾಹನಗಳಿಗೆ ಗೊಂದಲ ಉಂಟುಮಾಡುವ ಸಾಧ್ಯತೆಯೂ ಇರುತ್ತದೆ. ವಿಐಪಿ ಸಂಚಾರದ ವೇಳೆ, ವಾಹನಗಳ ತುರ್ತು ಚಲನವಲನದ ಅವಶ್ಯಕತೆಗಳಿಗೆ ಅನುಗುಣವಾಗಿ ದೂರಸಂಪರ್ಕ ಸಾಧನಗಳಾದ ವೈರ್ಲೆಸ್ ಕಮ್ಯುನಿಕೇಶನ್ ವ್ಯವಸ್ಥೆಯನ್ನು ಪರಿಣಾಮಕಾರಿಯಾಗಿ ಉಪಯೋಗಿಸುವುದು ಹೆಚ್ಚು ಶಿಸ್ತಿನ ಹಾಗೂ ಸುರಕ್ಷಿತ ಮಾರ್ಗವಾಗಿದೆ. ಸೈರನ್ಗಳನ್ನು ಕೇವಲ ತುರ್ತು ಸೇವಾ ವಾಹನಗಳಾದ ಅಂಬ್ಯುಲೆನ್ಸ್, ಪೊಲೀಸ್ ವಾಹನಗಳು ಮತ್ತು ಅಗ್ನಿಶಾಮಕ ವಾಹನಗಳು ಅನಿವಾರ್ಯ ಪರಿಸ್ಥಿತಿಗಳಲ್ಲಿ ಮಾತ್ರ ಬಳಸಬೇಕು. ಈ ಅದೇಶವನ್ನು ಘಟಕಾಧಿಕಾರಿಗಳು ಸಂಪೂರ್ಣವಾಗಿ ಪಾಲಿಸುವಂತೆ ತಮ್ಮ ಅಧೀನದ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಸೂಚಿಸುವುದು ಎಂದು ಸೂಚನೆ ನೀಡಲಾಗಿದೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…