ಜನ ಮನದ ನಾಡಿ ಮಿಡಿತ

Advertisement

ಪುತ್ತೂರು: ಬಸ್ ನಲ್ಲಿ ವಿದ್ಯಾರ್ಥಿನಿ ಜೊತೆ ಅಸಭ್ಯ ವರ್ತನೆ; ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಿದ ಸಾರ್ವಜನಿಕರು

ಮಂಗಳೂರಿನಿ0ದ ಪುತ್ತೂರಿಗೆ ಬರುತ್ತಿದ್ದ ಬಸ್ ನಲ್ಲಿ ವಿದ್ಯಾರ್ಥಿನಿ ಜೊತೆ ಓರ್ವ ಅನುಚಿತವಾಗಿ ವರ್ತಿಸಿದ ಘಟನೆ ನಿನ್ನೆ ಸಂಜೆ ನಡೆದಿದೆ. ಪುತ್ತೂರಿನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಸಾರ್ವಜನಿಕರ ಸಹಕಾರದಿಂದ ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಪ್ರಕರಣ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ದೂರುದಾರೆಯ ಮಾಹಿತಿ ಪ್ರಕಾರ, ನಿನ್ನೆ ಮಂಗಳೂರಿನಿ0ದ ಪುತ್ತೂರಿಗೆ ಬಸ್‌ನಲ್ಲಿ ಸಂಜೆ 6:30ರ ಸುಮಾರಿಗೆ ಪ್ರಯಾಣಿಸುತ್ತಿದ್ದಾಗ, ಬಂಟ್ವಾಳ ತಾಲೂಕಿನ ಮಾಣಿ ಬಳಿ ಪಕ್ಕದಲ್ಲಿ ಕುಳಿತಿದ್ದ ವ್ಯಕ್ತಿ ಅನುಚಿತವಾಗಿ ವರ್ತಿಸಿದ್ದಾನೆ. ತಕ್ಷಣ ದೂರುದಾರರು ಆತನಿಗೆ ಎಚ್ಚರಿಕೆ ನೀಡಿದ್ದು, ಬಳಿಕ ತಂದೆಗೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಬಸ್ ಪುತ್ತೂರು ಬಸ್ ನಿಲ್ದಾಣ ತಲುಪಿದಾಗ, ಆರೋಪಿ ತುರ್ತು ನಿರ್ಗಮನ ಕಿಟಕಿಯ ಮೂಲಕ ಜಿಗಿದು ಪರಾರಿಯಾಗಲು ಯತ್ನಿಸಿದರೂ, ದೂರುದಾರರ ತಂದೆ ಮತ್ತು ಸಾರ್ವಜನಿಕರು ತಕ್ಷಣ ಪ್ರತಿಕ್ರಿಯಿಸಿ ಆರೋಪಿಯನ್ನು ಹಿಡಿದಿಟ್ಟಿದ್ದಾರೆ. ಬಂಧಿತನನ್ನು ಮಂಗಳೂರಿನ ಮಹಮ್ಮದ್ ತೌಹೀದ್ ಎಂದು ಗುರುತಿಸಲಾಗಿದ್ದು, ಆತನನ್ನು ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ಒಪ್ಪಿಸಲಾಗಿದೆ. ಈ ಸಂಬ0ಧ ಅ.ರ್ರ.56/2025ಕಲಂ 0 75 BNS 2023 ರಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!