ಉಡುಪಿಯ ಮಿಷನ್ ಕಂಪೌಂಡ್ನಲ್ಲಿರುವ ಲೋಕೋಪಯೋಗಿ ವಸತಿ ಸಮುಚ್ಚಯದಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಅಂತರ್ ರಾಜ್ಯ ಕಳ್ಳರನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ.
ಬಂಗಡ ರಮೇಶ್ ಜವಾನ್ ಸಿಂಗ್(37), ಕಾಲಿಯಾ ಕಾಲು (25) ಬಂಧಿತ ಕಳ್ಳರು. ಇವರು ಮಧ್ಯಪ್ರದೇಶ ಮೂಲದವರಾಗಿದ್ದಾರೆ. ಆರೋಪಿಗಳಿಂದ ಬೆಳ್ಳಿಯ ಆಭರಣಗಳಾದ ಕಾಲು ಗೆಜ್ಜೆ, ಸೊಂಟದ ನೇವಳ, ಕೈಬಳೆ, ಕಾಲುಂಗುರ, ಸೊಂಟದ ಪಟ್ಟಿ, ಬಟ್ಟಲು, ಕಡಗ ಮತ್ತು ಬ್ರಾಸ್ಲೈಟ್ ಸೇರಿ ಒಟ್ಟು 80,970 ರೂಪಾಯಿ ಮೌಲ್ಯದ 681.830 ಮಿಲಿ ಗ್ರಾಂನ ಬೆಳ್ಳಿಯ ಸೊತ್ತು, 470 ಮಿಲಿಗ್ರಾಂ ಚಿನ್ನ ಹಾಗೂ 1700 ರೂಪಾಯಿ ನಗದು ಹಣವನ್ನು ವಶಪಡಿಸಿಕೊಳ್ಳಲಾಗಿದೆ.
ಆರೋಪಿಗಳು ಮಧ್ಯಪ್ರದೇಶ ರಾಜ್ಯದವರಾಗಿದ್ದು, ಉಡುಪಿ ನಗರ ಠಾಣೆಯಲ್ಲಿ 2024ರಲ್ಲಿ ದಾಖಲಾದ 3 ಪ್ರಕರಣಗಳಲ್ಲಿ ಭಾಗಿಯಾದವರಾಗಿದ್ದಾರೆ. ಅಲ್ಲದೇ ತಮ್ಮ ಸಹಚರರೊಂದಿಗೆ ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿ ಕಳವು ಮಾಡಿದವರಾಗಿದ್ದಾರೆ. ಇವರ ಮೇಲೆ ಮಹಾರಾಷ್ಟ್ರ ರಾಜ್ಯದಲ್ಲಿ ಸಹ ಪ್ರಕರಣಗಳು ದಾಖಲಾಗಿವೆ.
ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಸಂಸದರ ಕಚೇರಿಯಲ್ಲಿ ಸಾರ್ವಜನಿಕರ ಕುಂದು-ಕೊರತೆ…
ಸ್ವಚ್ಛತೆಯ ಬಗ್ಗೆ ತಿಳಿ ಹೇಳಬೇಕಾದ ಸರಕಾರಿ ಕಚೇರಿಯ ಮುಂಭಾಗದಲ್ಲಿ ರಾಶಿ ಹಾಕಲಾದ ಕಸದ ಬಗ್ಗೆ ಸಾರ್ವಜನಿಕರು ಮಾತನಾಡುವಂತಾಗಿದೆ. ಬಿಸಿರೋಡಿನ ಪುರಸಭಾ…
ಸಂಚರಿಸುತ್ತಿದ್ದ ಲಾರಿಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಾರಿ ಬೆಂಕಿಗಾಹುತಿಯಾದ ಘಟನೆ ಮೆಲ್ಕಾರಿನಲ್ಲಿ ನಡೆದಿದೆ. ಬೆಂಗಳೂರು ಮೂಲದ ಲಾರಿ ಇದಾಗಿದ್ದು, ಮಂಗಳೂರು…
ಬಾವಿಯೊಂದರ ಹೂಳೆತ್ತುವ ಕೆಲಸ ಮುಗಿಸಿ ಮೇಲೆ ಬರುವ ವೇಳೆ ಹಗ್ಗ ಜಾರಿ ಬಿದ್ದು ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ಕುರಿಯಾಳದ…
ಕಡೇಶಿವಾಲಯ ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿಯಾಗಿದ್ದು ಘಟನಾ ಸ್ಥಳಕ್ಕೆ ಬಂಟ್ವಾಳ ಶಾಸಕರಾದ ರಾಜೇಶ್ ನಾೈಕ್ ಉಳಿಪಾಡಿಯವರು…
ಬಂಟ್ವಾಳ: ಸಿಡಿಲು ಬಡಿದು ಹಾನಿಗೊಳಗಾದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು ಅವರು ರಾತ್ರಿ…