ಬಂಟ್ವಾಳ ನಗರ ಪೋಲೀಸ್ ಠಾಣೆಯ ಎಸ್.ಐ.ಆಗಿ ಸಂದೀಪ್ ಶೆಟ್ಟಿ ಅವರು ಪ್ರಭಾರ ಅಧಿಕಾರ ಸ್ವೀಕಾರ ಮಾಡಿದ್ದಾರೆ.
ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಕಳೆದ ಎರಡುವರೆ ವರ್ಷಗಳಿಂದ ಕರ್ತವ್ಯ ಮಾಡಿ ಇದೀಗ ವಿಟ್ಲ ಪೋಲೀಸ್ ಠಾಣೆಗೆ ವರ್ಗಾವಣೆಗೊಂಡ ಎಸ್.ಐ. ರಾಮಕೃಷ್ಣ ಅವರ ಸ್ಥಾನಕ್ಕೆ ಸ್ಥಳ ನಿರೀಕ್ಷಣೆಯಲ್ಲಿದ್ದ ಸಂದೀಪ್ ಶೆಟ್ಟಿ ಅವರನ್ನು ಬಂಟ್ವಾಳ ನಗರ ಠಾಣೆಗೆ ವರ್ಗಾಯಿಸಿ ಸರಕಾರ ಅದೇಶ ಹೊರಡಿಸಿತ್ತು. ಹಾಗಾಗಿ ಇಂದು ಬೆಳಿಗ್ಗೆ ವೇಳೆ ಸಂದೀಪ್ ಶೆಟ್ಟಿ ಅವರು ಕರ್ತವ್ಯಕ್ಕೆ ಹಾಜರಾದರು. ಸಂದೀಪ್ ಶೆಟ್ಟಿ ಅವರು ಈ ಹಿಂದೆ ಅಂದರೆ ಸುಮಾರು ಎರಡು ವರ್ಷಗಳ ಹಿಂದೆ ವಿಟ್ಲ ಪೋಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿ ಜಿಲ್ಲೆಯ ಅನುಭವ ಇರುವ ಅಧಿಕಾರಿಯಾಗಿದ್ದು,ಬಳಿಕ ಕಾರ್ಕಳ ಪೋಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದರು.
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…