ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಇಂಡಿಯಾನಾ ಆಸ್ಪತ್ರೆಯಲ್ಲಿ ಯಶಸ್ವಿ ವಾಲ್ವ್-ಇನ್ ವಾಲ್ವ್ ಟಿಎವಿಆರ್ ಚಿಕಿತ್ಸೆ

ನಗರದ ಇಂಡಿಯಾನಾ ಆಸ್ಪತ್ರೆಯಲ್ಲಿ ಮಂಗಳೂರು ನಗರದ ಮೊಟ್ಟಮೊದಲ ಯಶಸ್ವಿ ವಿಶಿಷ್ಟ ಹೃದಯ ಕವಾಟ ವಾಲ್ವ್-ಇನ್ ವಾಲ್ವ್ ಟಿಎವಿಆರ್ ಚಿಕಿತ್ಸೆ ನಡೆಸಲಾಗಿದೆ ಎಂದು ಇಂಡಿಯಾನಾ ಆಸ್ಪತ್ರೆ ಮತ್ತು ಹಾರ್ಟ್ ಇನ್ಸ್ಟಿಟ್ಯೂಟ್‌ನ ಚೀಫ್ ಇಂಟರ್‌ವೆನ್ಷನಲ್ ಕಾರ್ಡಿಯಾಲಜಿಸ್ಟ್ ಮತ್ತು ಎಂಡಿ ಡಾ. ಯೂಸೂಫ್ ಕುಂಬ್ಳೆ ತಿಳಿಸಿದರು.

ತೀವ್ರವಾದ ಆಯೊರ್ಟಿಕ್ ವಾಲ್ವ್ ರೋಗ ಹೊಂದಿರುವ ರೋಗಿಗಳಿಗೆ ಸಾಮಾನ್ಯವಾಗಿ ಶಸಚಿಕಿತ್ಸೆ ಮೂಲಕ ವಾಲ್ವ್ ಬದಲಾವಣೆ ಮಾಡಲಾಗುತ್ತದೆ. ಆದರೆ, 10-15 ವರ್ಷಗಳಲ್ಲಿ ಆ ವಾಲ್ವ್ಗಳು ಕುಗ್ಗಿ ಕೆಲಸ ಮಾಡುವುದನ್ನು ನಿಲ್ಲಿಸುತ್ತವೆ. ವಾಲ್ವ್ ಬದಲಿಸಲು ಮತ್ತೆ ತೆರೆದ ಹೃದಯ ಶಸಚಿಕಿತ್ಸೆ ಅಗತ್ಯವಿದ್ದು, ಇದು ವಯಸ್ಕ ರೋಗಿಗಳಿಗೆ ಅಪಾಯ ಉಂಟುಮಾಡುವ ಸಾಧ್ಯತೆಯಿದೆ. ಅಂತಹ ಪರಿಸ್ಥಿತಿಯಲ್ಲಿ ನೂತನ ತಂತ್ರಜ್ಞಾನ ವಾಲ್ವ್-ಇನ್ ವಾಲ್ವ್ ಟಿಎವಿಆರ್ ಬಹುಮಟ್ಟಿಗೆ ಸುರಕ್ಷಿತವಾದ ಆಯ್ಕೆ. ಇದರಲ್ಲಿ ಹಳೆಯ ವಾಲ್ವ್ ಒಳಗೆ ಹೊಸ ವಾಲ್ವ್ನ್ನು ಸ್ಥಾಪಿಸಲಾಗುತ್ತದೆ. ಈ ವಿಧಾನ ಸಾಮಾನ್ಯ ಟಿಎವಿಆರ್‌ಗಿಂತ ಹೆಚ್ಚು ಜಟಿಲ ಹಾಗೂ ಹೆಚ್ಚಿನ ತಾಂತ್ರಿಕ ನಿಪುಣತೆ ಅಗತ್ಯವಿದೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಅವರು ಹೇಳಿದರು. 110 ಕೆಜಿ ತೂಕದ ಮಧುಮೇಹ, ರಕ್ತದೊತ್ತಡ, ಹೃದಯಾಘಾತ ಮುಂತಾದ ಹಲವಾರು ಸಮಸ್ಯೆಗಳುಳ್ಳ 72 ವರ್ಷದ ರೋಗಿಯೊಬ್ಬರು 20 ವರ್ಷದ ಹಿಂದೆ ಕೊಚ್ಚಿಯಲ್ಲಿ ಎಸ್‌ಎವಿಆರ್ ಚಿಕಿತ್ಸೆಗೆ ಒಳಗಾಗಿದ್ದರು. ಪ್ರಸ್ತುತ ಹೃದಯ ವಿಫಲತೆಯ ಲಕ್ಷಣದೊಂದಿಗೆ ಇಂಡಿಯಾನಾ ಆಸ್ಪತ್ರೆಗೆ ಆಗಮಿಸಿದ್ದರು. ಅವರಿಗೆ ಮತ್ತೆ ಶಸಚಿಕಿತ್ಸೆ ಮಾಡಬೇಕೆಂದು ಸೂಚಿಸಲಾಗಿತ್ತು. ಆದರೆ, ಅವರ ಹೆಚ್ಚಿನ ಅಪಾಯದ ಕಾರಣದಿಂದ ಹಲವು ಆಸ್ಪತ್ರೆಗಳು ನಿರಾಕರಿಸಿದ್ದವು. ವಿವಿಧ ಕಡೆ ನಿರಾಕರಣೆ ಅನುಭವಿಸಿದ ಅವರು ಅಂತಿಮವಾಗಿ ಡಾ. ಯೂಸುಫ್ ಕುಂಬ್ಳೆ ಅವರನ್ನು ಸಂಪರ್ಕಿಸಿದರು. ಸಂಪೂರ್ಣ ತಪಾಸಣೆಯ ನಂತರ ಅವರಿಗೆ ವಾಲ್ವ್-ಇನ್ ವಾಲ್ವ್ ಟಿಎವಿಆರ್ ಸೂಕ್ತ ಮತ್ತು ಸುರಕ್ಷಿತ ಎಂದು ನಿರ್ಧರಿಸಲಾಯಿತು. ರೋಗಿಗೆ ವಾಲ್ವ್ ಸಮಸ್ಯೆ ಜತೆಗೆ ಪ್ರಮುಖ ರಕ್ತನಾಳಗಳ ಅಡಚಣೆಯೂ ತಪಾಸಣೆಯಲ್ಲಿ ಪತ್ತೆಯಾಗಿತ್ತು. ತಜ್ಞರ ತಂಡ ಈ ಎರಡೂ ಸಮಸ್ಯೆಗಳಿಗೆ ಒಂದೇ ಸಂದರ್ಭದಲ್ಲಿ ಪರಿಹಾರ ನೀಡಲು ನಿರ್ಧರಿಸಿತು. ಮೊದಲು ಆಂಜಿಯೋಪ್ಲಾಸ್ಟಿ ನಡೆಸಿ ಪ್ರಮುಖ ರಕ್ತನಾಳಗಳ ಅಡಚಣೆಗೆ ಚಿಕಿತ್ಸೆ ನೀಡಲಾಯಿತು. ಬಳಿಕ ವಾಲ್ವ್-ಇನ್ ವಾಲ್ವ್ ಟಿಎವಿಆರ್ ಪ್ರಕ್ರಿಯೆ ಯಶಸ್ವಿಯಾಗಿ ನಡೆಸಲಾಯಿತು ಎಂದು ವಿವರಿಸಿದರು. ಅದೇ ದಿನ 80 ವರ್ಷದ ಮಹಿಳೆಗೂ ವಾಲ್ವ್-ಇನ್ ವಾಲ್ವ್ ಟಿಎವಿಆರ್ ಪ್ರಕ್ರಿಯೆ ನಡೆಸಲಾಯಿತು. 20 ವರ್ಷದ ಹಿಂದೆ ವಾಲ್ವ್ ಬದಲಾವಣೆ ಶಸಚಿಕಿತ್ಸೆ ಮಾಡಿಸಿಕೊಂಡಿದ್ದ ಮಹಿಳೆ ಮತ್ತೆ ಹೃದಯ ವಿಫಲತೆಯಿಂದ ಬಳಲುತ್ತಿದ್ದರು. ಅವರು ಇನ್ನೊಂದು ಶಸಚಿಕಿತ್ಸೆಗೆ ಸಿದ್ದರಿದ್ದರೂ, ಹೆಚ್ಚಿನ ಅಪಾಯದ ಕಾರಣದಿಂದ ಯಾವುದೇ ವೈದ್ಯರು ಶಸಚಿಕಿತ್ಸೆ ನಡೆಸಲು ಒಪ್ಪಿರಲಿಲ್ಲ. ಮೊದಲ ರೋಗಿಗೆ ಯಶಸ್ವಿ ಚಿಕಿತ್ಸೆ ನಡೆದಿರುವ ಹಿನ್ನೆಲೆಯಲ್ಲಿ ಈ ಪ್ರಕ್ರಿಯೆಗೆ ಮಹಿಳೆ ಒಪ್ಪಿಗೆ ಸೂಚಿಸಿದರು. ಒಂದು ಗಂಟೆಯೊಳಗೆ ಅವರಿಗೂ ವಾಲ್ವ್-ಇನ್ ವಾಲ್ವ್ ಟಿಎವಿಆರ್ ಮಾಡಲಾಯಿತು. ಆ ಮೂಲಕ ಇಂಡಿಯಾನಾ ಆಸ್ಪತ್ರೆ ಈಗ ಟಿಎವಿಆರ್/ ಟಿಎವಿಐ ಮತ್ತು ಸ್ಟ್ರಕ್ಚುರಲ್ ಹಾರ್ಟ್ ಕೇರ್ ಕ್ಷೇತ್ರದಲ್ಲಿ ಪ್ರಮುಖ ಕೇಂದ್ರವಾಗಿರುವುದನ್ನು ಮತ್ತೊಮ್ಮೆ ಸಾಬೀತುಪಡಿಸಿದೆ ಎಂದರು. ಇಂಡಿಯಾನಾ ಆಸ್ಪತ್ರೆ ಮಾರುಕಟ್ಟೆ ಸಲಹೆಗಾರ ಶಿವಪ್ರಸಾದ್ ಶೆಟ್ಟಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

ಮಂಗಳೂರು: ಪೊಲೀಸ್ ಠಾಣಾ ವ್ಯಾಪ್ತಿಯ ಮೂರು ಕಡೆ ಜಾನುವಾರು ವಧೆ…!

ಉಡುಪಿ: ಅಂಬಲಪಾಡಿಯಲ್ಲಿ ನೇಣಿಗೆ ಶರಣಾದ ಯುವಪ್ರೇಮಿಗಳು….!

ಮಂಗಳೂರು: ಮಾಧವ ಕೊಳತ್ತ ಮಜಲು ಅವರಿಗೆ ಕದ್ರಿ ಬಾಲಕೃಷ್ಣ ಶೆಟ್ಟಿ ಪ್ರಶಸ್ತಿ..!

error: Content is protected !!