ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲ್ಲೂಕು ಹೋರಾಟ ಸಮಿತಿಯ ಅಧ್ಯಕ್ಷರಾದ ಬಾರ್ಕೂರು ಸತೀಶ್ ಪೂಜಾರಿ ಅಲ್ಪಕಾಲದ ಅಸೌಖ್ಯದಿಂದ ಬುಧವಾರ ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಬ್ರಹ್ಮಾವರ ತಾಲೂಕು ಹೋರಾಟ ಸಮಿತಿಯ ಅಧ್ಯಕ್ಷರಾಗಿ, ಉಡುಪಿ ತಾಲೂಕು ಪಂಚಾಯತ್ ಮಾಜಿ ಸದಸ್ಯರಾಗಿ, ಸಮಾಜ ಸೇವಕರಾಗಿ ಹಾಗೂ, ಚಲನ ಚಿತ್ರ ನಿರ್ಮಾಪಕರರಾಗಿ ಬಾರ್ಕುರು ಸತೀಶ್ ಪೂಜಾರಿಯವರು ಸೇವೆ ಸಲ್ಲಿಸಿದ್ದಾರೆ. ಇವರ ನಿಧನಕ್ಕೆ ರಮೇಶ್ ಕಾಂಚನ್ ಅಧ್ಯಕ್ಷರು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ಪದಾಧಿಕಾರಿಗಳು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯವರು ಸಂತಾಪ ಸೂಚಿಸಿದ್ದಾರೆ.



