ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮೂಡಬಿದ್ರೆ ವತಿಯಿಂದ ಆಗಸ್ಟ್ 01-02 ರಂದು ಆಳ್ವಾಸ್ ಕಾಲೇಜ್ ಕ್ಯಾಂಪಸ್ ನಲ್ಲಿ “ಆಳ್ವಾಸ್ ಪ್ರಗತಿ ಬೃಹತ್ ಉದ್ಯೋಗ ಮೇಳ” ನಡೆಯಲಿದ್ದು ಅದರ ಪೂರ್ವಭಾವಿಯಾಗಿ ಮಂಗಳೂರಿನಲ್ಲಿ ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ನಡೆದ ಮಾಹಿತಿ ಶಿಬಿರದಲ್ಲಿ 500 ಕ್ಕೂ ಅಧಿಕ ಸಂಖ್ಯೆಯಲ್ಲಿ ಉದ್ಯೋಗಾಕಾಂಕ್ಷಿಗಳು ಭಾಗವಹಿಸಿದ್ದರು.
ಈ ವೇಳೆ ಮಾತನಾಡಿದ ಶಾಸಕರು, ನೀವು ಒಂದು ಉದ್ಯೋಗ ಪಡೆದು ಆರ್ಥಿಕವಾಗಿ ಸದೃಢರಾದರೆ ಮೊದಲು ಖುಷಿ ಪಡುವುದು ನಿಮ್ಮ ಹೆತ್ತವರು. ಆ ಕಾರಣಕ್ಕಾಗಿ ಆಳ್ವಾಸ್ ಕಾಲೇಜಿನ ಕ್ಯಾಂಪಸ್ ನಲ್ಲಿ ನಡೆಯುವ ಬೃಹತ್ ಉದ್ಯೋಗ ಮೇಳದಲ್ಲಿ ಅತ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ. ಡಿಗ್ರಿ, ಡಿಪ್ಲೊಮ, ಇಂಜಿನಿಯರಿಂಗ್, ಐಟಿಐ, ಹೀಗೆ ವಿವಿಧ ವಿದ್ಯಾರ್ಹತೆಗೆ ಅನುಗುಣವಾಗಿ 5 ಸಾವಿರಕ್ಕೂ ಅಧಿಕ ಅವಕಾಶಗಳಿವೆ. ನಿಮ್ಮ ಅನುಕೂಲಕ್ಕಾಗಿ ಮಂಗಳೂರಿನಿಂದ ಬಸ್ ವ್ಯವಸ್ಥೆಯೂ ಸಹ ಇರಲಿದ್ದು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಈ ಕಾರ್ಯಾಗಾರದಲ್ಲಿ ಉದ್ಯೋಗಾಕಾಂಕ್ಷಿ ಯುವ ಮಿತ್ರರಲ್ಲಿ ಹೊಸ ಭರವಸೆ ತುಂಬಿದ ಆಳ್ವಾಸ್ ಶಿಕ್ಷಣ ಸಂಸ್ಥೆಯ ಪ್ರಮುಖರು ಹಾಗೂ ಆತ್ಮೀಯರಾಗಿರುವ ಶ್ರೀ ವಿವೇಕ್ ಆಳ್ವರು ಹಾಗೂ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಿರುವ ಆಳ್ವಾಸ್ ಶಿಕ್ಷಣ ಸಂಸ್ಥೆಯು ವಿಶೇಷ ಅಭಿನಂದನೆಗೆ ಅರ್ಹರು ಎಂದರು. ಈ ಸಂದರ್ಭದಲ್ಲಿ ಮಂಡಲದ ಬಿಜೆಪಿ ಅಧ್ಯಕ್ಷರಾದ ರಮೇಶ್ ಕಂಡೆಟ್ಟು, ನಿವೃತ್ತ ಪ್ರಾಂಶುಪಾಲರಾದ ಬಾಲಕೃಷ್ಣ, ಪ್ರಾಂಶುಪಾಲರಾದ ಜಯಕರ ಭಂಡಾರಿ, ಸೇರಿದಂತೆ ಅನೇಕ ಪ್ರಮುಖರು ಉಪಸ್ಥಿತರಿದ್ದರು.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…