ಜನ ಮನದ ನಾಡಿ ಮಿಡಿತ

Advertisement

ಕೊಂಕಣಿ ಸಾಹಿತ್ಯದ ವೀರ ಮಹಿಳೆ ನಾಮಾಂಕಿತ ಗ್ಲ್ಯಾಡಿಸ್ ರೇಗೊಗೆ ಕೊಂಕಣಿ ಭಾಷಾ ಮಂಡಳ್ ಕರ್ನಾಟಕ ವತಿಯಿಂದ ಶೃದ್ಧಾಂಜಲಿ

ಕೊಂಕಣಿ ಭಾಷಾ ಮಂಡಳ್ ಕರ್ನಾಟಕ ಇದರ ಕಾರ್ಯಕಾರಿ ಸಭೆಯಲ್ಲಿ ಇತ್ತೀಚಿಗೆ ನಿಧನರಾದ ಕೊಂಕಣಿ ಭಾಷೆಗೆ 27 ಪುಸ್ತಕ ದೇಣಿಗೆ ನೀಡಿದ ಹಿರಿಯ ಸಾಹಿತಿ ಗ್ಲ್ಯಾಡಿಸ್ ರೇಗೊ ಅವರಿಗೆ ಶೃದ್ಧಾಂಜಲಿ ಅರ್ಪಿಸಲಾಯಿತು.

ಈ ವೇಳೆ ಮಾತನಾಡಿದ ಕೆಬಿಎಂಕೆ ಕಾರ್ಯದರ್ಶಿ ರೇಮಂಡ್ ಡಿಕೂನಾ ತಾಕೊಡೆ, ಲೈಬ್ರೆರಿಗಳಲ್ಲಿ ಹುಡುಕಿ ಹಲವು ಸಾಹಿತ್ಯದ ವಿವಿಧ ದಾಖಲೆಗಳನ್ನು ತೆಗೆದು ತನ್ನ ಸ್ವಂತ ಖರ್ಚಿನಲ್ಲಿ ಪುಸ್ತಕ ಪ್ರಕಾಶನ ಮಾಡಿದ ಸಾಹಿತ್ಯದ ಶ್ರಮಜೀವಿ ಗ್ಲ್ಯಾಡಿಸ್ ರೇಗೊ ಆಗಿದ್ದರು ಎಂದು ಗುಣಗಾನ ಮಾಡಿದರು. ಕವಿ ಜೊಸ್ಸಿ ಪಿಂಟೊ ಮಾತನಾಡಿ, ಕೊಂಕಣಿ ಪತ್ರಿಕೆಗಳಿಗೆ ಪ್ರಸಾರ, ಪ್ರಕಟನೆ ಮಾಡಲು ಆರ್ಥಿಕ ಸಹಾಯ ನೀಡುವ ಮೂಲಕ ಬೆಂಬಲ ನೀಡಿದ್ದರು ಎಂದು ನೆನಪಿಸಿದರು. ಜೂಲಿಯೆಟ್ ಫೆರ್ನಾಂಡೀಸ್ ಮಾತನಾಡಿ, ಮಹಿಳೆಯರು ಮನೆ ಮಕ್ಕಳು ನೋಡಿಕೊಂಡು ಸಾಹಿತ್ಯದ ಕೆಲಸವನ್ನು ಮಾಡುವುದು ಸುಲಭವಲ್ಲ ಎಂದರು.

ಇನ್ನು ಗ್ಲ್ಯಾಡಿಸ್ ಅವರ ಸಾಹಿತ್ಯದ ಒಡನಾಡಿ ಹಿರಿಯರು ಗೀತಾ ಕಿಣಿಯವರು ಮಾತನಾಡುತ್ತಾ, ತಾನು ಭಾಗವಹಿಸಿದ ಸಾಹಿತ್ಯ ಸಮ್ಮೇಳನಗಳಲ್ಲಿ ರೇಗೊ ಭಾಗವಹಿಸಿ ತನ್ನ ಮತ್ತು ಇತರ ಪುಸ್ತಕ ಮಾರಾಟ ಮಾಡಿ ಸಕ್ರಿಯವಾಗಿ ಇಡೀ ಸಭೆಯಲ್ಲಿ ಜನರಿಗೆ ಸಿಗುತ್ತಿದ್ದರು ಎಂದು ನೆನಪಿಸಿದರು. ಕೆಬಿಎಂಕೆ ಅಧ್ಯಕ್ಷ ಕೆ ವಸಂತ ರಾವ್ ಮಾತನಾಡಿ, ಕೆಬಿಎಂಕೆ ಸಕಲ ಕೊಂಕಣಿ ಜನರ ಮನೆ. ಇದರಲ್ಲಿ ನಾವು ಎಲ್ಲಾ ಜನರಿಗೆ ಆದ್ಯತೆ ನೋಡುತ್ತೇವೆ. ರೇಗೊ ಪಂಚ್ಕದಾಯಿ ಬಾಳೊಮಾಮ್ ಅವರ ಒಡನಾಡಿ ನಾನು ಕಂಡಿದ್ದೇನೆ ಎಂದರು. ಖಜಾಂಜಿ ಸುರೇಶ್ ಶೆಣೈ, ಎಡೊಲ್ಫ್ ಡಿಸೋಜ, ನವೀನ ನಾಯಕ್, ಮೀನಾಕ್ಷಿ ಪೈ, ಝೀನಾ ಫೆರ್ನಾಂಡೀಸ್, ಅರವಿಂದ ಶಾನಭಾಗ್, ಶಾಂತಿ ವೆರೊನಿಕಾ ಹಾಜರಿದ್ದು ಹೂವಿನ ಗೌರವ ಅರ್ಪಿಸಿದರು.

Leave a Reply

Your email address will not be published. Required fields are marked *

ಬಂಟ್ವಾಳ: ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಭೀಕರ ರಸ್ತೆ ಅಪ*ಘಾತ….!

ಮಂಗಳೂರು: ಎಂ.ಆರ್.ಜಿ.ಗ್ರೂಪ್ ಗೆ ಹಾರುವ ಹಕ್ಕಿ ಸೇರ್ಪಡೆ..!

ಉಡುಪಿ : ಕಾಪುವಿನಲ್ಲಿ ಭೀಕರ ಅಪಘಾತ…!

ಬಂಟ್ವಾಳ : ಸಜಿಪದಲ್ಲಿ ಭೀಕರ ಅಪಘಾತ…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

error: Content is protected !!