ಕೊಂಕಣಿ ಭಾಷಾ ಮಂಡಳ್ ಕರ್ನಾಟಕ ಇದರ ಕಾರ್ಯಕಾರಿ ಸಭೆಯಲ್ಲಿ ಇತ್ತೀಚಿಗೆ ನಿಧನರಾದ ಕೊಂಕಣಿ ಭಾಷೆಗೆ 27 ಪುಸ್ತಕ ದೇಣಿಗೆ ನೀಡಿದ ಹಿರಿಯ ಸಾಹಿತಿ ಗ್ಲ್ಯಾಡಿಸ್ ರೇಗೊ ಅವರಿಗೆ ಶೃದ್ಧಾಂಜಲಿ ಅರ್ಪಿಸಲಾಯಿತು.
ಈ ವೇಳೆ ಮಾತನಾಡಿದ ಕೆಬಿಎಂಕೆ ಕಾರ್ಯದರ್ಶಿ ರೇಮಂಡ್ ಡಿಕೂನಾ ತಾಕೊಡೆ, ಲೈಬ್ರೆರಿಗಳಲ್ಲಿ ಹುಡುಕಿ ಹಲವು ಸಾಹಿತ್ಯದ ವಿವಿಧ ದಾಖಲೆಗಳನ್ನು ತೆಗೆದು ತನ್ನ ಸ್ವಂತ ಖರ್ಚಿನಲ್ಲಿ ಪುಸ್ತಕ ಪ್ರಕಾಶನ ಮಾಡಿದ ಸಾಹಿತ್ಯದ ಶ್ರಮಜೀವಿ ಗ್ಲ್ಯಾಡಿಸ್ ರೇಗೊ ಆಗಿದ್ದರು ಎಂದು ಗುಣಗಾನ ಮಾಡಿದರು. ಕವಿ ಜೊಸ್ಸಿ ಪಿಂಟೊ ಮಾತನಾಡಿ, ಕೊಂಕಣಿ ಪತ್ರಿಕೆಗಳಿಗೆ ಪ್ರಸಾರ, ಪ್ರಕಟನೆ ಮಾಡಲು ಆರ್ಥಿಕ ಸಹಾಯ ನೀಡುವ ಮೂಲಕ ಬೆಂಬಲ ನೀಡಿದ್ದರು ಎಂದು ನೆನಪಿಸಿದರು. ಜೂಲಿಯೆಟ್ ಫೆರ್ನಾಂಡೀಸ್ ಮಾತನಾಡಿ, ಮಹಿಳೆಯರು ಮನೆ ಮಕ್ಕಳು ನೋಡಿಕೊಂಡು ಸಾಹಿತ್ಯದ ಕೆಲಸವನ್ನು ಮಾಡುವುದು ಸುಲಭವಲ್ಲ ಎಂದರು.
ಇನ್ನು ಗ್ಲ್ಯಾಡಿಸ್ ಅವರ ಸಾಹಿತ್ಯದ ಒಡನಾಡಿ ಹಿರಿಯರು ಗೀತಾ ಕಿಣಿಯವರು ಮಾತನಾಡುತ್ತಾ, ತಾನು ಭಾಗವಹಿಸಿದ ಸಾಹಿತ್ಯ ಸಮ್ಮೇಳನಗಳಲ್ಲಿ ರೇಗೊ ಭಾಗವಹಿಸಿ ತನ್ನ ಮತ್ತು ಇತರ ಪುಸ್ತಕ ಮಾರಾಟ ಮಾಡಿ ಸಕ್ರಿಯವಾಗಿ ಇಡೀ ಸಭೆಯಲ್ಲಿ ಜನರಿಗೆ ಸಿಗುತ್ತಿದ್ದರು ಎಂದು ನೆನಪಿಸಿದರು. ಕೆಬಿಎಂಕೆ ಅಧ್ಯಕ್ಷ ಕೆ ವಸಂತ ರಾವ್ ಮಾತನಾಡಿ, ಕೆಬಿಎಂಕೆ ಸಕಲ ಕೊಂಕಣಿ ಜನರ ಮನೆ. ಇದರಲ್ಲಿ ನಾವು ಎಲ್ಲಾ ಜನರಿಗೆ ಆದ್ಯತೆ ನೋಡುತ್ತೇವೆ. ರೇಗೊ ಪಂಚ್ಕದಾಯಿ ಬಾಳೊಮಾಮ್ ಅವರ ಒಡನಾಡಿ ನಾನು ಕಂಡಿದ್ದೇನೆ ಎಂದರು. ಖಜಾಂಜಿ ಸುರೇಶ್ ಶೆಣೈ, ಎಡೊಲ್ಫ್ ಡಿಸೋಜ, ನವೀನ ನಾಯಕ್, ಮೀನಾಕ್ಷಿ ಪೈ, ಝೀನಾ ಫೆರ್ನಾಂಡೀಸ್, ಅರವಿಂದ ಶಾನಭಾಗ್, ಶಾಂತಿ ವೆರೊನಿಕಾ ಹಾಜರಿದ್ದು ಹೂವಿನ ಗೌರವ ಅರ್ಪಿಸಿದರು.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…