ಗಂಡ ಹೆಂಡತಿ ಜಗಳದಲ್ಲಿ ಹೆತ್ತ ಮಗಳನ್ನು ತಾಯಿಯೇ ಕೊಂದ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಗಂಡನೊಂದಿಗಿನ ಪ್ರತಿದಿನ ಜಗಳಕ್ಕೆ ಬೇಸೆತ್ತು ಮಗಳನ್ನೂ ಕೊಂದು 28 ವರ್ಷದ ತಾಯಿ ಮಹಾಲಕ್ಷ್ಮಿ ಕೂಡ ಆತ್ಮಹತ್ಯೆಗೆ ಪ್ರಯತ್ನಸಿದ್ದು, ತನ್ನ 5 ವರ್ಷದ ಪುಟ್ಟ ಕಂದಮ್ಮ ಸಿರಿಯನ್ನ ಕೊಂದೇ ಬಿಟ್ಟಿದ್ದಾಳೆ ಪಾಪಿ ತಾಯಿ.
ಜಯರಾಮ್ ಎನ್ನುವ ವ್ಯಕ್ತಿಯನ್ನು 8 ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದಳು. ಆದರೆ ಎರಡು ವರ್ಷದಿಂದ ಜಯರಾಮ್ ಯಾವುದೇ ಕೆಲಸವಿಲ್ಲದೆ ಕೇವಲ ಕುಡಿತದ ದಾಸನಾಗಿದ್ದ. ಕೆಲಸಕ್ಕೆ ಹೋಗದೆ ಮನೆಯಲ್ಲೇ ಕುಡಿದು ಬಿದ್ದ ಗಂಡನಿಂದ ಬೇಸೆತ್ತು ಗಂಡ ಹೆಂಡತಿ ಮಧ್ಯೆ ಯಾವಾಗಲೂ ಜಗಳವಾಗುತ್ತಿತ್ತು. ಬುಧವಾರ ಇಬ್ಬರ ನಡುವೆ ನಡೆದ ಜಗಳ ತಾರಕಕ್ಕೇರಿ ಮಹಾಲಕ್ಷ್ಮಿ ರೂಮ್ ಬಾಗಿಲು ಹಾಕಿಕೊಂಡಿದ್ದಾಳೆ. ಸಿಟ್ಟಿನಿಂದ ಮಗುವಿನ ಕತ್ತು ಹಿಸುಕಿ ಕೊಂದು ತಾನು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿದ್ದಾಳೆ. ಮಹಾಲಕ್ಷ್ಮಿ ಆತ್ಮಹತ್ಯೆಗೆ ಮುಂದಾಗುತ್ತಿದ್ದಂತೆ, ಮನೆಯವರು ಡೋರ್ ಒಡೆದು ಒಳಹೊಕ್ಕಿದ್ದಾರೆ. ಸ್ಠಳಿಯರಿಂದ ತಾಯಿ ಮಹಾಲಕ್ಷ್ಮಿ ರಕ್ಷಣೆ ಮಾಡಲಾಗಿದ್ದು, ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅಲ್ಲಿ ಆಕೆಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…