ಗಂಡ ಹೆಂಡತಿ ಜಗಳದಲ್ಲಿ ಹೆತ್ತ ಮಗಳನ್ನು ತಾಯಿಯೇ ಕೊಂದ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಗಂಡನೊಂದಿಗಿನ ಪ್ರತಿದಿನ ಜಗಳಕ್ಕೆ ಬೇಸೆತ್ತು ಮಗಳನ್ನೂ ಕೊಂದು 28 ವರ್ಷದ ತಾಯಿ ಮಹಾಲಕ್ಷ್ಮಿ ಕೂಡ ಆತ್ಮಹತ್ಯೆಗೆ ಪ್ರಯತ್ನಸಿದ್ದು, ತನ್ನ 5 ವರ್ಷದ ಪುಟ್ಟ ಕಂದಮ್ಮ ಸಿರಿಯನ್ನ ಕೊಂದೇ ಬಿಟ್ಟಿದ್ದಾಳೆ ಪಾಪಿ ತಾಯಿ.
ಜಯರಾಮ್ ಎನ್ನುವ ವ್ಯಕ್ತಿಯನ್ನು 8 ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದಳು. ಆದರೆ ಎರಡು ವರ್ಷದಿಂದ ಜಯರಾಮ್ ಯಾವುದೇ ಕೆಲಸವಿಲ್ಲದೆ ಕೇವಲ ಕುಡಿತದ ದಾಸನಾಗಿದ್ದ. ಕೆಲಸಕ್ಕೆ ಹೋಗದೆ ಮನೆಯಲ್ಲೇ ಕುಡಿದು ಬಿದ್ದ ಗಂಡನಿಂದ ಬೇಸೆತ್ತು ಗಂಡ ಹೆಂಡತಿ ಮಧ್ಯೆ ಯಾವಾಗಲೂ ಜಗಳವಾಗುತ್ತಿತ್ತು. ಬುಧವಾರ ಇಬ್ಬರ ನಡುವೆ ನಡೆದ ಜಗಳ ತಾರಕಕ್ಕೇರಿ ಮಹಾಲಕ್ಷ್ಮಿ ರೂಮ್ ಬಾಗಿಲು ಹಾಕಿಕೊಂಡಿದ್ದಾಳೆ. ಸಿಟ್ಟಿನಿಂದ ಮಗುವಿನ ಕತ್ತು ಹಿಸುಕಿ ಕೊಂದು ತಾನು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿದ್ದಾಳೆ. ಮಹಾಲಕ್ಷ್ಮಿ ಆತ್ಮಹತ್ಯೆಗೆ ಮುಂದಾಗುತ್ತಿದ್ದಂತೆ, ಮನೆಯವರು ಡೋರ್ ಒಡೆದು ಒಳಹೊಕ್ಕಿದ್ದಾರೆ. ಸ್ಠಳಿಯರಿಂದ ತಾಯಿ ಮಹಾಲಕ್ಷ್ಮಿ ರಕ್ಷಣೆ ಮಾಡಲಾಗಿದ್ದು, ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅಲ್ಲಿ ಆಕೆಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…
ಸ್ವಾಮಿ ವಿವೇಕಾನಂದ ಯುವಕ ಸಂಘ ಹಾಗೂ ಅಯ್ಯಪ್ಪ ಮಂದಿರ ಮೊಡಂಕಾಪ್, 2025 - 26 ರ ಅಧ್ಯಕ್ಷರಾಗಿ ಸುನಿಲ್ ಎನ್…
ಬಂಟ್ವಾಳ ತಾಲೂಕಿನ ಬಿ.ಮೂಡ ಗ್ರಾಮದ ನಂದರಬೆಟ್ಟು ಎಂಬಲ್ಲಿ ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಇಶಾಕ್ ಹಾಗೂ ಅಬ್ದುಲ್ಲಾ ಯಾನೆ…
ಪುತ್ತೂರಿನ ಪ್ರಕರಣ ಹಾಗೂ ಕಾರ್ಕಳದ ಅಭಿಷೇಕ್ ಆಚಾರ್ಯ ಅವರ ಆತ್ಮಹತ್ಯೆಗೆ ಸಂಬಂಧಿಸಿದ ವಿಷಯವಾಗಿ ಮಾನ್ಯ ಗ್ರಹಸಚಿವರಾದ ಶ್ರೀ ಜಿ ಪರಮೇಶ್ವರ್…