ಗಂಡ ಹೆಂಡತಿ ಜಗಳದಲ್ಲಿ ಹೆತ್ತ ಮಗಳನ್ನು ತಾಯಿಯೇ ಕೊಂದ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಗಂಡನೊಂದಿಗಿನ ಪ್ರತಿದಿನ ಜಗಳಕ್ಕೆ ಬೇಸೆತ್ತು ಮಗಳನ್ನೂ ಕೊಂದು 28 ವರ್ಷದ ತಾಯಿ ಮಹಾಲಕ್ಷ್ಮಿ ಕೂಡ ಆತ್ಮಹತ್ಯೆಗೆ ಪ್ರಯತ್ನಸಿದ್ದು, ತನ್ನ 5 ವರ್ಷದ ಪುಟ್ಟ ಕಂದಮ್ಮ ಸಿರಿಯನ್ನ ಕೊಂದೇ ಬಿಟ್ಟಿದ್ದಾಳೆ ಪಾಪಿ ತಾಯಿ.
ಜಯರಾಮ್ ಎನ್ನುವ ವ್ಯಕ್ತಿಯನ್ನು 8 ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದಳು. ಆದರೆ ಎರಡು ವರ್ಷದಿಂದ ಜಯರಾಮ್ ಯಾವುದೇ ಕೆಲಸವಿಲ್ಲದೆ ಕೇವಲ ಕುಡಿತದ ದಾಸನಾಗಿದ್ದ. ಕೆಲಸಕ್ಕೆ ಹೋಗದೆ ಮನೆಯಲ್ಲೇ ಕುಡಿದು ಬಿದ್ದ ಗಂಡನಿಂದ ಬೇಸೆತ್ತು ಗಂಡ ಹೆಂಡತಿ ಮಧ್ಯೆ ಯಾವಾಗಲೂ ಜಗಳವಾಗುತ್ತಿತ್ತು. ಬುಧವಾರ ಇಬ್ಬರ ನಡುವೆ ನಡೆದ ಜಗಳ ತಾರಕಕ್ಕೇರಿ ಮಹಾಲಕ್ಷ್ಮಿ ರೂಮ್ ಬಾಗಿಲು ಹಾಕಿಕೊಂಡಿದ್ದಾಳೆ. ಸಿಟ್ಟಿನಿಂದ ಮಗುವಿನ ಕತ್ತು ಹಿಸುಕಿ ಕೊಂದು ತಾನು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿದ್ದಾಳೆ. ಮಹಾಲಕ್ಷ್ಮಿ ಆತ್ಮಹತ್ಯೆಗೆ ಮುಂದಾಗುತ್ತಿದ್ದಂತೆ, ಮನೆಯವರು ಡೋರ್ ಒಡೆದು ಒಳಹೊಕ್ಕಿದ್ದಾರೆ. ಸ್ಠಳಿಯರಿಂದ ತಾಯಿ ಮಹಾಲಕ್ಷ್ಮಿ ರಕ್ಷಣೆ ಮಾಡಲಾಗಿದ್ದು, ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅಲ್ಲಿ ಆಕೆಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…