ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಿಂದ ವಿಕುಭ ಹೆಬ್ಬಾರಬೈಲು ಸಂಪಾದಕತ್ವದಲ್ಲಿ ಹೊರಡುತ್ತಿರುವ, ದಶಮಾನೋತ್ಸವ ಸಂಭ್ರಮದಲ್ಲಿರುವ “ಪೂವರಿ” ತುಳು ಮಾಸಿಕದ ಜೂನ್ ತಿಂಗಳ ವಿಶೇಷ ಸಂಚಿಕೆಯು ಅಖಿಲ ಅಮೇರಿಕಾ ತುಳು ಅಂಗಣ ಯೂ.ಎಸ್.ಎ.(ಆಟ) ನೇತೃತ್ವದ `ಆಟ ಸಿರಿ ಪರ್ಬ- 2025′ ಸಮಾರಂಭದಲ್ಲಿ ಲೋಕಾರ್ಪಣೆಗೊಂಡು ಅಮೇರಿಕಾದ ಇತಿಹಾಸದಲ್ಲಿ ಹೊಸ ದಾಖಲೆ ಬರೆದಿದೆ.
ಜಗತ್ತಿನಲ್ಲಿ ಹರಡಿಕೊಂಡಿರುವ ಸುಮಾರು 2 ಕೋಟಿ ತುಳುವರ, ಸುಮಾರು 40 ಸಮುದಾಯದ ತುಳು ಮಾತೃ ಭಾಷೆಯಾಗಿರುವ ತುಳುನಾಡಿನ ಏಕೈಕ ತುಳು ಮಾಸಿಕ `ಪೂವರಿ’ ಪತ್ರಿಕೆ ಉತ್ತರ ಕೆರೋಲಿನಾ ರಾಜ್ಯದ ರಾಲೆ ನಗರದ ಟ್ರಯಾಂಗಲ್ ತುಳುವೆರೆ ಚಾವಡಿಯ ಆತಿಥ್ಯದಲ್ಲಿ ನಡೆದ ಅದ್ದೂರಿಯ ಸಮಾರಂಭದ ಮುಖ್ಯ ಅತಿಥಿಗಳಾದ ತುಳುನಾಡಿನ ಅಗೋಳಿ ಮಂಜಣ್ಣ ಕುಟುಂಬ ಸದಸ್ಯೆ ತೋಕೂರುಗುತ್ತು ಡಾ. ಸಾಯಿಗೀತಾ ಮಂಗಳೂರು, ಡಾ. ರವಿ ಶೆಟ್ಟಿ ಮೂಡಂಬೈಲು ಕತಾರ್, ಶೇಖರ ನಾಯ್ಕ್ ಕನೆಕ್ಟಿಕಟ್, ಆಟ ಸ್ಥಾಪಕ ಭಾಸ್ಕರ್ ಶೇರಿಗಾರ್ ಬೋಸ್ಟನ್, ಆಟ ಅಧ್ಯಕ್ಷ ಶ್ರೀವಲ್ಲಿ ರೈ ಮಾರ್ಟೆಲ್ ಫ್ಲೋರಿಡಾ, ಆಟ ಸಿರಿ ಪರ್ಬ ಸಂಚಾಲಕಿ ರಂಜನಿ ಅಸೈಗೋಳಿ ಉತ್ತರ ಕೆರೋಲಿನಾ, ಸುದರ್ಶನ ಶೆಟ್ಟಿ ಕೆನಡಾ, ಉಮೇಶ್ ಅಸೈಗೋಳಿ, ಸುರೇಶ್ ಶೆಟ್ಟಿ, ಡಾ. ಮೋಹನಚಂದ್ರ, ಡಾ. ಬೆಳ್ಳೆ ದಿನಕರ ರೈ ನ್ಯೂಯಾರ್ಕ್, ಡಾ. ರಾಜೇಂದ್ರ ಕೆದಿಲಾಯ, ಸ್ಯಾಮ್ಯುಯೆಲ್ ಡ್ರಾಗ್ ಮೋರ್ ಇವರ ಗಣ್ಯ ಉಪಸ್ಥಿತಿಯಲ್ಲಿ ಬಿಡುಗಡೆ ಗೊಂಡಿತು.
ಅಮೇರಿಕಾ ಸಂಯುಕ್ತ ರಾಜ್ಯಗಳ ಸಹಿತ ಕೆನಡಾ ದೇಶದ ವಿವಿಧ ಪ್ರದೇಶಗಳ ಸುಮಾರು 18 ತುಳು ಕೂಟಗಳು ಪ್ರತಿನಿಧಿಸುವ `ಅಖಿಲ ಅಮೇರಿಕಾ ತುಳು ಅಂಗಣ’ದ ತುಳುವರ ಮನೆ ಮನೆ ಸೇರುವ ಮೂಲಕ ಸುವರ್ಣ ಅಕ್ಷರಗಳಲ್ಲಿ ಬರೆದಿಡ ಬೇಕಾದ ಈ ದಿನ ತುಳುನಾಡಿನ ತುಳು ಪತ್ರಿಕೆಯೊಂದು ವಿಶ್ವದಲ್ಲಿ ಚಾರಿತ್ರಿಕ ಇತಿಹಾಸ ಸೃಷ್ಟಿಸಿದೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…