ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಿಂದ ವಿಕುಭ ಹೆಬ್ಬಾರಬೈಲು ಸಂಪಾದಕತ್ವದಲ್ಲಿ ಹೊರಡುತ್ತಿರುವ, ದಶಮಾನೋತ್ಸವ ಸಂಭ್ರಮದಲ್ಲಿರುವ “ಪೂವರಿ” ತುಳು ಮಾಸಿಕದ ಜೂನ್ ತಿಂಗಳ ವಿಶೇಷ ಸಂಚಿಕೆಯು ಅಖಿಲ ಅಮೇರಿಕಾ ತುಳು ಅಂಗಣ ಯೂ.ಎಸ್.ಎ.(ಆಟ) ನೇತೃತ್ವದ `ಆಟ ಸಿರಿ ಪರ್ಬ- 2025′ ಸಮಾರಂಭದಲ್ಲಿ ಲೋಕಾರ್ಪಣೆಗೊಂಡು ಅಮೇರಿಕಾದ ಇತಿಹಾಸದಲ್ಲಿ ಹೊಸ ದಾಖಲೆ ಬರೆದಿದೆ.
ಜಗತ್ತಿನಲ್ಲಿ ಹರಡಿಕೊಂಡಿರುವ ಸುಮಾರು 2 ಕೋಟಿ ತುಳುವರ, ಸುಮಾರು 40 ಸಮುದಾಯದ ತುಳು ಮಾತೃ ಭಾಷೆಯಾಗಿರುವ ತುಳುನಾಡಿನ ಏಕೈಕ ತುಳು ಮಾಸಿಕ `ಪೂವರಿ’ ಪತ್ರಿಕೆ ಉತ್ತರ ಕೆರೋಲಿನಾ ರಾಜ್ಯದ ರಾಲೆ ನಗರದ ಟ್ರಯಾಂಗಲ್ ತುಳುವೆರೆ ಚಾವಡಿಯ ಆತಿಥ್ಯದಲ್ಲಿ ನಡೆದ ಅದ್ದೂರಿಯ ಸಮಾರಂಭದ ಮುಖ್ಯ ಅತಿಥಿಗಳಾದ ತುಳುನಾಡಿನ ಅಗೋಳಿ ಮಂಜಣ್ಣ ಕುಟುಂಬ ಸದಸ್ಯೆ ತೋಕೂರುಗುತ್ತು ಡಾ. ಸಾಯಿಗೀತಾ ಮಂಗಳೂರು, ಡಾ. ರವಿ ಶೆಟ್ಟಿ ಮೂಡಂಬೈಲು ಕತಾರ್, ಶೇಖರ ನಾಯ್ಕ್ ಕನೆಕ್ಟಿಕಟ್, ಆಟ ಸ್ಥಾಪಕ ಭಾಸ್ಕರ್ ಶೇರಿಗಾರ್ ಬೋಸ್ಟನ್, ಆಟ ಅಧ್ಯಕ್ಷ ಶ್ರೀವಲ್ಲಿ ರೈ ಮಾರ್ಟೆಲ್ ಫ್ಲೋರಿಡಾ, ಆಟ ಸಿರಿ ಪರ್ಬ ಸಂಚಾಲಕಿ ರಂಜನಿ ಅಸೈಗೋಳಿ ಉತ್ತರ ಕೆರೋಲಿನಾ, ಸುದರ್ಶನ ಶೆಟ್ಟಿ ಕೆನಡಾ, ಉಮೇಶ್ ಅಸೈಗೋಳಿ, ಸುರೇಶ್ ಶೆಟ್ಟಿ, ಡಾ. ಮೋಹನಚಂದ್ರ, ಡಾ. ಬೆಳ್ಳೆ ದಿನಕರ ರೈ ನ್ಯೂಯಾರ್ಕ್, ಡಾ. ರಾಜೇಂದ್ರ ಕೆದಿಲಾಯ, ಸ್ಯಾಮ್ಯುಯೆಲ್ ಡ್ರಾಗ್ ಮೋರ್ ಇವರ ಗಣ್ಯ ಉಪಸ್ಥಿತಿಯಲ್ಲಿ ಬಿಡುಗಡೆ ಗೊಂಡಿತು.
ಅಮೇರಿಕಾ ಸಂಯುಕ್ತ ರಾಜ್ಯಗಳ ಸಹಿತ ಕೆನಡಾ ದೇಶದ ವಿವಿಧ ಪ್ರದೇಶಗಳ ಸುಮಾರು 18 ತುಳು ಕೂಟಗಳು ಪ್ರತಿನಿಧಿಸುವ `ಅಖಿಲ ಅಮೇರಿಕಾ ತುಳು ಅಂಗಣ’ದ ತುಳುವರ ಮನೆ ಮನೆ ಸೇರುವ ಮೂಲಕ ಸುವರ್ಣ ಅಕ್ಷರಗಳಲ್ಲಿ ಬರೆದಿಡ ಬೇಕಾದ ಈ ದಿನ ತುಳುನಾಡಿನ ತುಳು ಪತ್ರಿಕೆಯೊಂದು ವಿಶ್ವದಲ್ಲಿ ಚಾರಿತ್ರಿಕ ಇತಿಹಾಸ ಸೃಷ್ಟಿಸಿದೆ.
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…
ಸ್ವಾಮಿ ವಿವೇಕಾನಂದ ಯುವಕ ಸಂಘ ಹಾಗೂ ಅಯ್ಯಪ್ಪ ಮಂದಿರ ಮೊಡಂಕಾಪ್, 2025 - 26 ರ ಅಧ್ಯಕ್ಷರಾಗಿ ಸುನಿಲ್ ಎನ್…
ಬಂಟ್ವಾಳ ತಾಲೂಕಿನ ಬಿ.ಮೂಡ ಗ್ರಾಮದ ನಂದರಬೆಟ್ಟು ಎಂಬಲ್ಲಿ ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಇಶಾಕ್ ಹಾಗೂ ಅಬ್ದುಲ್ಲಾ ಯಾನೆ…
ಪುತ್ತೂರಿನ ಪ್ರಕರಣ ಹಾಗೂ ಕಾರ್ಕಳದ ಅಭಿಷೇಕ್ ಆಚಾರ್ಯ ಅವರ ಆತ್ಮಹತ್ಯೆಗೆ ಸಂಬಂಧಿಸಿದ ವಿಷಯವಾಗಿ ಮಾನ್ಯ ಗ್ರಹಸಚಿವರಾದ ಶ್ರೀ ಜಿ ಪರಮೇಶ್ವರ್…