ಜನ ಮನದ ನಾಡಿ ಮಿಡಿತ

Advertisement

ಕಡಬ: 3 ದಿನಗಳ ಹಿಂದೆ ನಾಪತ್ತೆಯಾದ ಅಂಬ್ಯುಲೆನ್ಸ್ ಚಾಲಕನ ಮೃ#ತದೇಹ ಪತ್ತೆ…!

ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸರಕಾರಿ ಆಂಬುಲೆನ್ಸ್ ಚಾಲಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕೆ.ಹೊನ್ನಪ್ಪ ದೇವರಗದ್ದೆಯವರು ಜುಲೈ 22ರಂದು ನಾಪತ್ತೆಯಾಗಿದ್ದರು.

ಈ ಸಂಬ0ಧವಾಗಿ ಅವರ ಪತ್ನಿ ಶ್ರೀಮತಿ ಪ್ರೇಮ ನೀಡಿದ ದೂರಿನ ಮೇಲೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು. ಪೊಲೀಸರು ಸಿಸಿ ಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ ಸಂದರ್ಭದಲ್ಲಿ ಹೊನ್ನಪ್ಪ ಅವರು ಒಂದು ಹೊಳೆಬದಿಗೆ ತೆರಳುತ್ತಿರುವ ದೃಶ್ಯಗಳು ಸಿಕ್ಕಿದ ಹಿನ್ನೆಲೆಯಲ್ಲಿ, ಕಳೆದ ಮೂರು ದಿನಗಳಿಂದ ಪೊಲೀಸರು, ಸ್ಥಳೀಯರು ಹಾಗೂ ರಕ್ಷಣಾ ತಂಡಗಳು ಶೋಧ ಕಾರ್ಯದಲ್ಲಿ ತೊಡಗಿದ್ರು.

ಅಂತಿಮವಾಗಿ, ಜುಲೈ 25ರಂದು ಹೊನ್ನಪ್ಪ ಅವರ ಮೃತದೇಹ ಕುಮಾರಧಾರ ನದಿಯಲ್ಲಿ ಸುಮಾರು 3 ಕಿಲೋಮೀಟರ್ ದೂರದಲ್ಲಿ ಪತ್ತೆಯಾಗಿದೆ. ಶೋಧ ಕಾರ್ಯದಲ್ಲಿ ಈಶ್ವರ್ ಮಲ್ಪೆ, ಎಸ್.ಡಿ.ಆರ್.ಎಫ್ ತಂಡ, ಸ್ಥಳೀಯರು, ರವಿಕಕ್ಕೆಪದವು ತಂಡ ಹಾಗೂ ಸುಳ್ಯದ ಅಂಬುಲೆನ್ಸ್ ಚಾಲಕರ ಸಂಘದವರು ಸಹಕಾರ ನೀಡಿದ್ದಾರೆ. ಘಟನೆಯ ಕುರಿತು ತನಿಖೆ ಮುಂದುವರಿದಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

 

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನಲ್ಲಿ ಸಾರ್ವಜನಿಕ ಭೇಟಿ ನಡೆಸಿದ ಚೌಟ…!

ಬಂಟ್ವಾಳ: ಕಚೇರಿ ಪ್ರವೇಶ ದಾರಿಯಲ್ಲಿ ತ್ಯಾಜ್ಯ: ಅಧಿಕಾರಿಗಳ ಮೌನಕ್ಕೆ ಟೀಕೆ…!

ಬಂಟ್ವಾಳ: ಸಂಚರಿಸುತ್ತಿದ್ದ ಲಾರಿಯಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆ*ಂಕಿ…!

ಬಂಟ್ವಾಳ: ಹಗ್ಗ ಕಡಿದು ಬಾವಿಗೆ ಬಿದ್ದ ಇಬ್ಬರು ಕಾರ್ಮಿಕರು ಪಾರು….!

ಕಡೇಶಿವಾಲಯ: ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿ….!

ಬಂಟ್ವಾಳ: ಸಿಡಿಲು ಬಡಿದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಭೇಟಿ ನೀಡಿದ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು..!

ಬಂಟ್ವಾಳ: ಕರಾವಳಿಯ ಕಾರಣೀಕ ದೈವ ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ ಖ್ಯಾತ ಚಲನಚಿತ್ರ ನಟಿಯಾಗಿರುವ ರಚಿತರಾಮ್..!

ಬಂಟ್ವಾಳ: ಬಂಟ್ವಾಳ ತಾಲೂಕಿನ ಮಹತೋಬಾರ ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೆ ಬಡಿದ ಸಿಡಿಲು..!

ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ಕೆಲ ಮನೆಗಳಿಗೆ ಸಿಡಿಲು ಬಡಿದು ಹಾನಿ..!

error: Content is protected !!