ಬಂಟ್ವಾಳ: ಬಂಟ್ವಾಳ ಪುರಸಭೆಗೆ ಸೇರಿದ ವಾಹನವೊಂದು ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಮಹಿಳೆ ಸೇರಿ ಇಬ್ಬರು ಗಾಯಗೊಂಡ ಘಟನೆ ಬಂಟ್ವಾಳ ಮುಖ್ಯರಸ್ತೆಯಲ್ಲಿ ನಡೆದಿದೆ.
ಬಂಟ್ವಾಳ ಮುಖ್ಯ ಕಟ್ಟಡದಿಂದ ಬಂಟ್ವಾಳ ರಸ್ತೆಗೆ ಹೋಗುತ್ತಿದ್ದ ಪುರಸಭೆಯ ಘನತ್ಯಾಜ್ಯ ವಾಹನವೊಂದು ಬಿ.ಸಿ.ರೋಡಿನಿಂದ ಬಂಟ್ವಾಳ ಕಡೆಗೆ ಹೋಗುತ್ತಿದ್ದ ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದಿದೆ. ಈ ವೇಳೆ ಮಹಿಳೆ ಸೇರಿದಂತೆ ಇಬ್ಬರು ಪ್ರಯಾಣಿಕರ ಮುಖ, ಕಣ್ಣು ಹಾಗೂ ಎದೆಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಇನ್ನೂ ಈ ಅಪಘಾತದ ನಿಖರ ಕಾರಣಗಳನ್ನು ತನಿಖೆ ಮಾಡುವ ವೇಳೆ ಪುರಸಭೆಯ ವಾಹನದ ಫಿಟ್ನೆಸ್ ಸರ್ಟಿಫಿಕೇಟ್ ಅವಧಿ ಮುಗಿದು 2 ವರ್ಷ ಕಳೆದಿದ್ದು, ನವೀಕರಣ ಆಗದೇ ಇರುವುದು ಬೆಳಕಿಗೆ ಬಂದಿದೆ. ಸಾರಿಗೆ ಇಲಾಖೆಯ ನಿಯಾಮಾಳಿ ಪ್ರಕಾರ ಎಫ್.ಸಿ. ಮಾಡದಿರುವ ವಾಹನ ಬಳಕೆಗೆ ಯೋಗ್ಯವಲ್ಲ. ಅದು ಗುಜರಿ ವಾಹನಕ್ಕೆ ಸಮಾನವಾಗಿದೆ. ಎಫ್.ಸಿ. ಇಲ್ಲದ ಗುಜರಿ ವಾಹನವನ್ನು ರಸ್ತೆಗೆ ಇಳಿಸಿದರೆ ಅಪಘಾತದ ಸಂದರ್ಭದಲ್ಲಿ ಗಾಯಾಳುಗಳಿಗೆ ವಿಮಾ ಪರಿಹಾರಕ್ಕೆ ಪರದಾಡುವ ಸಂಕಷ್ಟ ಎದುರಾಗುತ್ತದೆ. ಈ ಮಧ್ಯೆ ಪೊಲೀಸರಿಗೆ ಒತ್ತಡ ತಂದು ಕೇಸು ದಾಖಲಿಸದಿರಲು ಪ್ರಯತ್ನಿಸುತ್ತಿದ್ದಾಗ ಸ್ಥಳೀಯರು ಪ್ರತಿಭಟಿಸಿದ ಪರಿಣಾಮ ಕೊನೆಗೂ ಎಫ್. ಐ. ಆರ್. ದಾಖಲಾಗಿದೆ ಎಂದು ತಿಳಿದು ಬಂದಿದೆ. ಈ ಅಪಘಾತದ ಬಗ್ಗೆ ಪೋಲಿಸರು ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.…
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…