ಬಂಟ್ವಾಳ: ಬಂಟ್ವಾಳ ಪುರಸಭೆಗೆ ಸೇರಿದ ವಾಹನವೊಂದು ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಮಹಿಳೆ ಸೇರಿ ಇಬ್ಬರು ಗಾಯಗೊಂಡ ಘಟನೆ ಬಂಟ್ವಾಳ ಮುಖ್ಯರಸ್ತೆಯಲ್ಲಿ ನಡೆದಿದೆ.
ಬಂಟ್ವಾಳ ಮುಖ್ಯ ಕಟ್ಟಡದಿಂದ ಬಂಟ್ವಾಳ ರಸ್ತೆಗೆ ಹೋಗುತ್ತಿದ್ದ ಪುರಸಭೆಯ ಘನತ್ಯಾಜ್ಯ ವಾಹನವೊಂದು ಬಿ.ಸಿ.ರೋಡಿನಿಂದ ಬಂಟ್ವಾಳ ಕಡೆಗೆ ಹೋಗುತ್ತಿದ್ದ ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದಿದೆ. ಈ ವೇಳೆ ಮಹಿಳೆ ಸೇರಿದಂತೆ ಇಬ್ಬರು ಪ್ರಯಾಣಿಕರ ಮುಖ, ಕಣ್ಣು ಹಾಗೂ ಎದೆಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಇನ್ನೂ ಈ ಅಪಘಾತದ ನಿಖರ ಕಾರಣಗಳನ್ನು ತನಿಖೆ ಮಾಡುವ ವೇಳೆ ಪುರಸಭೆಯ ವಾಹನದ ಫಿಟ್ನೆಸ್ ಸರ್ಟಿಫಿಕೇಟ್ ಅವಧಿ ಮುಗಿದು 2 ವರ್ಷ ಕಳೆದಿದ್ದು, ನವೀಕರಣ ಆಗದೇ ಇರುವುದು ಬೆಳಕಿಗೆ ಬಂದಿದೆ. ಸಾರಿಗೆ ಇಲಾಖೆಯ ನಿಯಾಮಾಳಿ ಪ್ರಕಾರ ಎಫ್.ಸಿ. ಮಾಡದಿರುವ ವಾಹನ ಬಳಕೆಗೆ ಯೋಗ್ಯವಲ್ಲ. ಅದು ಗುಜರಿ ವಾಹನಕ್ಕೆ ಸಮಾನವಾಗಿದೆ. ಎಫ್.ಸಿ. ಇಲ್ಲದ ಗುಜರಿ ವಾಹನವನ್ನು ರಸ್ತೆಗೆ ಇಳಿಸಿದರೆ ಅಪಘಾತದ ಸಂದರ್ಭದಲ್ಲಿ ಗಾಯಾಳುಗಳಿಗೆ ವಿಮಾ ಪರಿಹಾರಕ್ಕೆ ಪರದಾಡುವ ಸಂಕಷ್ಟ ಎದುರಾಗುತ್ತದೆ. ಈ ಮಧ್ಯೆ ಪೊಲೀಸರಿಗೆ ಒತ್ತಡ ತಂದು ಕೇಸು ದಾಖಲಿಸದಿರಲು ಪ್ರಯತ್ನಿಸುತ್ತಿದ್ದಾಗ ಸ್ಥಳೀಯರು ಪ್ರತಿಭಟಿಸಿದ ಪರಿಣಾಮ ಕೊನೆಗೂ ಎಫ್. ಐ. ಆರ್. ದಾಖಲಾಗಿದೆ ಎಂದು ತಿಳಿದು ಬಂದಿದೆ. ಈ ಅಪಘಾತದ ಬಗ್ಗೆ ಪೋಲಿಸರು ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…