ಸಿನಿಮಾದಲ್ಲಿ ನೋಡಿದ ಹಾಗೇ ರಿಯಲ್ ಲೈಫ್ನಲ್ಲಿ ಮಾಡಿದ್ರೆ ಇದೇ ಆಗೋದು.. ಕಳ್ಳರು ಚಾಪೆ ಕೆಳಗೆ ನುಗ್ಗಿದ್ರೆ ಪೊಲೀಸರು ರಂಗೋಲಿ ಕೆಳಗೆ ನುಗ್ಗುತ್ತಾರೆ ಅನ್ನೋದಕ್ಕೆ ಇದೇ ಪ್ರತ್ಯಕ್ಷ ಸಾಕ್ಷಿ. ಇಲ್ಲೊಬ್ಬ ಖತರ್ನಾಕ್ ಖೈದಿ 2011ರ ಫೆಬ್ರವರಿ 1ರಂದು ಕೇರಳದಲ್ಲಿ ಸಂಚಲನ ಸೃಷ್ಟಿಸಿದ್ದ ಯುವತಿ ರೇ*ಪ್ ಅಂಡ್ ಮ*ರ್ಡರ್ ಕೇಸ್ನಲ್ಲಿ ಗೋವಿಂದಚಾಮಿ ಅರೆಸ್ಟ್ ಆಗಿದ್ದ.
ಎರ್ನಾಕುಲಂನಿಂದ ಶೋರ್ನೂರಿಗೆ ಹೋಗುತ್ತಿದ್ದ ಪ್ಯಾಸೆಂಜರ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದ 23 ವರ್ಷದ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ, ಹತ್ಯೆ ಮಾಡಿದ್ದ. ಈ ಪ್ರಕರಣದಲ್ಲಿ ಆರೋಪಿ ಗೋವಿಂದಚಾಮಿಗೆ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿತ್ತು. ಕೇರಳದ ಕಣ್ಣೂರಿನ ಸೆಂಟ್ರಲ್ ಜೈಲಿನಿಂದ ನಿನ್ನೆ ಮಧ್ಯರಾತ್ರಿ 1 ಗಂಟೆ 20ಕ್ಕೆ ಗೋವಿಂದ ಚಾಮಿ ಎಸ್ಕೇಪ್ ಆಗಿದ್ದ.
ಕಣ್ಣೂರು ಕೇಂದ್ರ ಕಾರಾಗೃಹದಿಂದ 4 ಕಿ.ಮೀ ದೂರದಲ್ಲಿರುವ ಪಾಳುಬಿದ್ದ ಮನೆಯ ಬಳಿಯ ಬಾವಿಯಲ್ಲಿ ಅಡಗಿ ಕುಳಿತಿದ್ದ. ಜೈಲಿನಿಂದ ಎಸ್ಕೇಪ್ ವಿಚಾರ ತಿಳಿದ ಪೊಲೀಸರು ಡಾಗ್ ಸ್ಕ್ವಾಡ್, ಸುತ್ತ ಮುತ್ತಲಿನ ಸಿಸಿಟಿವಿ ದೃಶ್ಯ ಆಧರಿಸಿ ಕಾರ್ಯಾಚರಣೆ ನಡೆಸಿದ್ದರು. ಇದಾದ ಬಳಿಕ ಬೆಳಗ್ಗೆ 10:30ರ ಸುಮಾರಿಗೆ ಬಾವಿಯಲ್ಲಿ ಅಡಗಿ ಕೂತಿದ್ದ ಗೋವಿಂದ ಚಾಮಿಯನ್ನು ಪತ್ತೆ ಹಚ್ಚಿದ ಪೊಲೀಸರು ಮತ್ತೆ ಲಾಕ್ ಮಾಡಿದ್ದಾರೆ.
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…
ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…